Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru Rural

ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ

Public TV
Last updated: February 24, 2020 7:37 pm
Public TV
Share
3 Min Read
nml somanna 2
SHARE

ಬೆಂಗಳೂರು: ಬಡವರಿಗೆ ಸೂರು ಕಲ್ಪಿಸುವ ಸಲುವಾಗಿ ವರ್ಷಾಂತ್ಯದ ವೇಳೆಗೆ 50 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಅಗ್ರಹಾರಪಾಳ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರು ಈ ಬಗ್ಗೆ ಭರವಸೆ ನೀಡಿದರು. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯ ಕಾಮಗಾರಿಗೆ ಸೋಮಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು.

nml somanna 1

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ 600 ಕೋಟಿ ರೂ. ಅನುದಾನ ನೀಡಿದ್ದರೂ ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ಚಾಲನೆ ಸಿಗದೆ, ಈ ಯೋಜನೆಯು ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ವಸತಿ ಯೋಜನೆಯ ಭಾಗವಾಗಿ ಇಂದು 843 ಬಹುಮಹಡಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಒಂದು ವರ್ಷದ ಅವಧಿಯಲ್ಲಿ ಕನಿಷ್ಟ 50 ಸಾವಿರ ಮನೆ ನಿರ್ಮಾಣ ಮಾಡಿ ಬಡವರಿಗೆ ಹಸ್ತಾಂತರ ಮಾಡಲಾಗುವುದು. ಯಲಹಂಕ ಕ್ಷೇತ್ರದಲ್ಲಿ 3 ಸಾವಿರ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

nml somanna

ಸರ್ಕಾರದಿಂದ ಕಟ್ಟುತ್ತಿರುವ ಆಸ್ಪತ್ರೆ, ಆಟದ ಮೈದಾನ, ಕೊಳಚೆ ನೀರು ಸಂಸ್ಕರಣಾ ಘಟಕ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಸಮುಚ್ಚಯಗಳಲ್ಲಿ ಒದಗಿಸುವ ಮೂಲಕ ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ವಸತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಲ್ಲಿ ಲಭ್ಯವಿರುವ ಸುಮಾರು 4 ಲಕ್ಷ ರೂ. ಅನುದಾನ ಹಾಗೂ ಬ್ಯಾಂಕ್‍ಗಳಲ್ಲಿ 2 ಲಕ್ಷ ರೂ. ಸಾಲ ಸೌಲಭ್ಯ ಒದಗಿಸುವ ಮೂಲಕ ಸುಮಾರು 6 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಬಡವರ ಕನಸನ್ನು ನನಸು ಮಾಡಲು ಬದ್ಧವಿರುವುದಾಗಿ ತಿಳಿಸಿದರು.

nml somanna

ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮಾತನಾಡಿ, ಯಲಹಂಕವನ್ನು ಗುಡಿಸಲು ರಹಿತ ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಿಂದಿನ ಸರ್ಕಾರಗಳ ಆಡಳಿತದ ಅವಧಿಯಲ್ಲಿ ಕಾರಣಾಂತರಗಳಿಂದ ಮನೆ ಬಡವರಿಗೆ ನೀಡಲು ಸಾಧ್ಯವಾಗಿರಲಿಲ್ಲ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಕ್ಷೇತ್ರದ, ಕುಕ್ಕನಹಳ್ಳಿ, ತೋಟಗೆರೆ, ಪಿಳ್ಳಹಳ್ಳಿ, ಲಕ್ಷ್ಮಿಪುರ, ಬಿಳಿಜಾಜಿ, ದಾಸನಪುರ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಕ್ಷೇತ್ರದಲ್ಲಿ 10 ಸಾವಿರ ಮನೆ ನಿರ್ಮಾಣ ಮಾಡುವ ಗುರಿ ಇದೆ. ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಕ್ಷೇತ್ರಕ್ಕೆ ತರುವುದಾಗಿ ಭರವಸೆ ನೀಡಿದರು.

BSY PM Modi

ಜಿಲ್ಲಾಧಿಕಾರಿ ಶಿವಮೂರ್ತಿ, ರಾಜೀವ್ ಗಾಂಧಿ ವಸತಿ ನಿಗಮ ನಿ. ಎಂಡಿ ಡಾ.ರಾಮ ಪ್ರಸಾದ್ ಮನೋಹರ್, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜಿ.ಮರಿಸ್ವಾಮಿ, ಜಿ.ಪಂ ಸದಸ್ಯ ರವಿಕುಮಾರ್, ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಶಿವರಾಜ್, ಗೋಪಾಲಪುರ ಗ್ರಾ.ಪಂ ಅಧ್ಯಕ್ಷ ಟಿ.ಎಂ ಬಸವೇಗೌಡ ಸೇರಿ ಯಲಹಂಕ ಕ್ಷೇತ್ರ ಬಿಜೆಪಿ ಅಧ್ಯಕ್ಷ ಹನುಮಯ್ಯ ಇನ್ನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮನೆಗಳು ಹೇಗಿರಲಿವೆ?
ಸುಮಾರು 5 ಎಕ್ರೆ ಜಮೀನಿನಲ್ಲಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯದಲ್ಲಿ 836 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿ ಮನೆಯನ್ನು 30 ಚ.ಮೀ ವಿಸ್ತೀರ್ಣದಲ್ಲಿ ಒಂದು ಹಾಲ್, ಬೆಡ್ ರೂಂ, ಅಡುಗೆಮನೆ ಸೇರಿದಂತೆ ಪ್ರತ್ಯೇಕ ಸ್ಥಾನದ ಮನೆ, ಶೌಚಾಲಯ, ಕಾಂಕ್ರೀಟ್ ಗೋಡೆಗಳು, ನೆಲಹಾಸಿಗೆಗೆ ವೆಟ್ರಿಫೈಡ್ ಟೈಲ್ಸ್, ಗ್ರಾನೈಟ್ ಬಳಸಿ ಸುಸಜ್ಜಿತವಾಗಿ ನಿರ್ಮಿಸಲಾಗುತ್ತಿದೆ. ಜೊತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ಪಂಪ್ ರೂಂ, ಮಳೆ ನೀರು ಕೊಯ್ಲು ಮುಂತಾದ ವ್ಯವಸ್ಥೆಯನ್ನು ಕೂಡ ಒದಗಿಸಲಾಗುತ್ತಿದೆ.

TAGGED:bengalurubjpgovernmenthomesHousing SchemePoorPublic TVV.Somannaಪಬ್ಲಿಕ್ ಟಿವಿಬಡವರುಬಿಜೆಪಿಬೆಂಗಳೂರುಮನೆಗಳುವಸತಿ ಯೋಜನೆವಿ.ಸೋಮಣ್ಣಸರ್ಕಾರ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
7 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
1 day ago

You Might Also Like

vijay mallya k.l.rahul
Cricket

ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

Public TV
By Public TV
1 hour ago
BMTC bus hits metro pillar more than 10 injured in Bengaluru
Bengaluru City

ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
1 hour ago
Narendra Modi in Fintech Fest 2024
Latest

`ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಸದಾ ಕಾಡಲಿದೆ: ಮೋದಿ

Public TV
By Public TV
3 hours ago
Vijay Mallya
Cricket

‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Public TV
By Public TV
3 hours ago
Money 1
Crime

50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ಇಲ್ಲ – 230 ಕೋಟಿ ವಂಚನೆ!

Public TV
By Public TV
4 hours ago
Bilawal Bhutto Zardari
Latest

ಹಫೀಜ್ ಅಬ್ದುರ್ ರೌಫ್ ಉಗ್ರನಲ್ಲ, ಧರ್ಮಗುರು – ವಿಶ್ವಸಂಸ್ಥೆಯಲ್ಲಿ ಪಾಕ್‌ ಮಾಜಿ ಸಚಿವನ ಮೊಂಡುವಾದ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?