Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸಹವಾಸ ಬೇಡ – ಯಡಿಯೂರಪ್ಪಗೆ ‘ಹೈ’ವಾರ್ನಿಂಗ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಸಹವಾಸ ಬೇಡ – ಯಡಿಯೂರಪ್ಪಗೆ ‘ಹೈ’ವಾರ್ನಿಂಗ್?

Bengaluru City

ಸಿದ್ದರಾಮಯ್ಯ ಸಹವಾಸ ಬೇಡ – ಯಡಿಯೂರಪ್ಪಗೆ ‘ಹೈ’ವಾರ್ನಿಂಗ್?

Public TV
Last updated: February 25, 2020 8:25 pm
Public TV
Share
3 Min Read
Siddu BSY copy
SHARE

ಬೆಂಗಳೂರು: ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಾಯಕರಿಬ್ಬರೂ ಹಾವು ಮುಂಗುಸಿಯಂತೆ ಸದಾ ಕಚ್ಚಾಡುತ್ತಲೇ ಇರುತ್ತಾರೆ. ಆಡಳಿತ ಪಕ್ಷದ ವೈಫಲ್ಯಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸದಾ ಟೀಕಿಸುತ್ತಲೇ ಇರುತ್ತಾನೆ. ವಿಪಕ್ಷ ನಾಯಕನ ಟೀಕೆಗೆ ಆಡಳಿತ ಪಕ್ಷದ ನಾಯಕ ತಿರುಗೇಟು ಕೊಡುತ್ತಲೇ ಇರುತ್ತಾನೆ. ಇದು ರಾಜಕಾರಣ ಎಂಬ ಸಿನಿಮಾ ಪರದೆಯ ಮೇಲೆ ನಿತ್ಯ ಕಾಣುವ ದೃಶ್ಯಗಳು.

ಆದರೆ ಪರದೆ ಹಿಂದೆ ಅವರಿಬ್ಬರ ನಡುವಿನ ಸಂಬಂಧ ಹೇಗಿರುತ್ತದೆ? ಇದನ್ನು ಬಲ್ಲವರು ಕಡಿಮೆಯೇ. ಆದರೆ ಹಾಲಿ ಆಡಳಿತ ಪಕ್ಷದ ನಾಯಕ, ಸಿಎಂ ಯಡಿಯೂರಪ್ಪ ಮತ್ತು ವಿರೋಧ ಪಕ್ಷ ಕಾಂಗ್ರೆಸ್‍ನ ನಾಯಕ ಸಿದ್ದರಾಮಯ್ಯ ಇವರಿಬ್ಬರ ಸಂಬಂಧ, ಪರಸ್ಪರರ ಧೋರಣೆಗಳು ಬಹುಶ: ರಾಜಕೀಯ ಆಸಕ್ತರೆಲ್ಲರಿಗೂ ಗೊತ್ತಿರುವಂಥದ್ದೇ. ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಇಬ್ಬರೂ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂಬ ಆರೋಪ ಆಗಾಗ ಕೇಳಿಬರುತ್ತಲೇ ಇರುತ್ತದೆ. ಸಿದ್ದರಾಮಯ್ಯ ಎಂದರೆ ಯಡಿಯೂರಪ್ಪಗೆ ಮೃದು ಧೋರಣೆ. ಯಡಿಯೂರಪ್ಪ ವಿಚಾರದಲ್ಲಿ ಸಿದ್ದರಾಮಯ್ಯ ಕಟು ಟೀಕೆ, ವಾಗ್ದಾಳಿ ನಡೆಸಲ್ಲ ಎನ್ನುವ ಆರೋಪ-ಅಪವಾದಗಳು ಇಬ್ಬರ ಮೇಲೂ ಇವೆ.

SIDDU BSY copy

ಈಗ ಅಸಲಿ ವಿಷಯ ಏನಂದ್ರೆ, ಇವರಿಬ್ಬರ ಈ ಅಡ್ಜಸ್ಟ್‍ಮೆಂಟ್ ಬಾಂಧವ್ಯ ಕಟ್ ಮಾಡಲು ಖುದ್ದು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗಿದೆ. ಇವರಿಬ್ಬರ ಈ ವಿಚಿತ್ರ ಗೆಳೆತನದ ಮೇಲೆ ಹೈಕಮಾಂಡ್ ಕೆಂಗಣ್ಣು ಬೀರಿದೆಯಂತೆ. ಇವರಿಬ್ಬರ ಅಡ್ಜಸ್ಟ್ ಮೆಂಟ್ ರಾಜಕೀಯದಿಂದ ಹೈಕಮಾಂಡ್‍ಗೆ ಮುಜುಗರವಾಗಿದೆಯಂತೆ. ಹೀಗಾಗಿಯೇ ಇಬ್ಬರ ನಡುವೆ ಗೋಡೆ ಎಬ್ಬಿಸಲು ಹೈಕಮಾಂಡ್ ಮುಂದಾಗಿದೆ. ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ಈ ಕುರಿತು ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದೆ ಎನ್ನಲಾಗಿದೆ.

ನಾಡಿದ್ದು ಫೆ.27 ರಂದು ಸಿಎಂ ಯಡಿಯೂರಪ್ಪ 78ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಯಡಿಯೂರಪ್ಪ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯಗೂ ಆಹ್ವಾನಿಸಲಾಗಿದೆ. ಸಮಾರಂಭದಲ್ಲಿ ಯಡಿಯೂರಪ್ಪ ಕುರಿತ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ, ಅಭಿನಂದನಾ ಭಾಷಣ ಮಾಡೋರು ಬೇರೆ ಯಾರೂ ಅಲ್ಲ ಇದೇ ಸಿದ್ದರಾಮಯ್ಯನವರು. ಸಿದ್ದರಾಮಯ್ಯನವರ ಮೇಲಿನ ಕಳಕಳಿಯಿಂದಲೇ ಯಡಿಯೂರಪ್ಪ ಅವರ ಕೈಯಿಂದಲೇ ತಮ್ಮ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿಸಲು ಇಚ್ಚಿಸಿದ್ದಾರೆ. ಇಂಥ ಸಂದರ್ಭದಲ್ಲೇ ಸರಿಯಾಗಿ ಯಡಿಯೂರಪ್ಪಗೆ ಹೈಕಮಾಂಡ್ ಶಾಕಿಂಗ್ ಮೆಸೇಜ್ ಬಂದು ತಲುಪಿದೆ ಎಂದು ಹೇಳಲಾಗುತ್ತಿದೆ.

SIDDU HDK BSY 1

ಸಿದ್ದರಾಮಯ್ಯ ಮೇಲೆ ಸಾಫ್ಟ್ ಆಗಿದ್ದ ಬಿಎಸ್‍ವೈಗೆ ಹೈಕಮಾಂಡ್ ವಾರ್ನಿಂಗ್ ಮೆಸೇಜ್ ಕಳಿಸಿದೆ. ಯಡಿಯೂರಪ್ಪ – ಸಿದ್ದರಾಮಯ್ಯ ಗೆಳೆತನಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಹೈಕಮಾಂಡ್, ಸಿದ್ದರಾಮಯ್ಯರಿಂದ ದೂರ ಇರುವಂತೆ ಬಿಎಸ್‍ವೈಗೆ ಸಂದೇಶ ರವಾನಿಸಿದೆ ಎನ್ನಲಾಗಿದೆ.

ಹೈಕಮಾಂಡ್ ಸಂದೇಶ ಏನು?
ಸಿದ್ದರಾಮಯ್ಯ ಜತೆ ಅಂತರ ಕಾಯ್ದುಕೊಂಡಷ್ಟೂ ಉತ್ತಮ. ಸಿದ್ದರಾಮಯ್ಯರಿಂದ ದೂರ ಇದ್ದಷ್ಟು ಪಕ್ಷಕ್ಕೂ, ಸರ್ಕಾರಕ್ಕೂ ಲಾಭ. ಸಿದ್ದರಾಮಯ್ಯ ಜೊತೆ ಸಾಫ್ಟ್ ಫ್ರೆಂಡ್ ಶಿಪ್ ಸ್ಟಾಪ್ ಮಾಡಿ. ಜನತೆಗೆ ನಿಮ್ಮ ಮೃದು ಧೋರಣೆಯಿಂದ ಬೇರೆಯೇ ಸಂದೇಶ ಹೋಗುತ್ತದೆ. ರಾಜಕಾರಣದಲ್ಲಿ ವಿಪಕ್ಷ ನಾಯಕನ ಜತೆ ಸ್ನೇಹದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಆಡಳಿತ ಪಕ್ಷದ ನಾಯಕ ವಿರೋಧ ಪಕ್ಷದ ನಾಯಕನ ಜೊತೆ ಹೇಗೆ ಇರಬೇಕು ಅಂತ ರಾಜಕೀಯ ಧರ್ಮ ಹೇಳುತ್ತದೋ ಹಾಗೆಯೇ ನೀವೂ ಇರಿ. ಕನಿಷ್ಟ ಈ ವಿಧಾನಸಭೆ ಅವಧಿವರೆಗಾದರೂ ಸಿದ್ದರಾಮಯ್ಯ ಗೆಳೆತನದಿಂದ ದೂರ ಇರಿ ಅಂತೆಲ್ಲ ಬಿಎಸ್‍ವೈಗೆ ಹೈಕಮಾಂಡ್ ಖಡಕ್ ವಾರ್ನಿಂಗ್ ಕೊಟ್ಟಿದೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಸಿಕ್ಕಿದೆ.

CM BSY SIDDARAMAIAH copy

ಬರ್ತ್ ಡೇ ನೆಪದಲ್ಲಿ ಸಿದ್ದು ಜತೆ ಒಂದೇ ವೇದಿಕೆ ಹಂಚಿಕೊಳ್ಳಲು ಇಚ್ಚಿಸಿದ್ದ ಬಿಎಸ್‍ವೈಗೆ ಬಿಜೆಪಿ ಹೈಕಮಾಂಡ್ ಈ ಮೂಲಕ ‘ಹೈ’ಶಾಕ್ ಕೊಟ್ಟಿದೆ. ಬಿಎಸ್‍ವೈಗೆ ಹೈಕಮಾಂಡ್ ಸಂದೇಶ ಎಚ್ಚರಿಕೆ ಗಂಟೆ ಎಂದು ಬಿಜೆಪಿಯಲ್ಲಿ ಗುಸುಗುಸು ಕೂಡಾ ನಡೀತಿದೆ. ಹೈಕಮಾಂಡ್ ಸಂದೇಶದ ಬೆನ್ನಲ್ಲೇ ಪಕ್ಷದಲ್ಲಿ ಸಿದ್ದು-ಬಿಎಸ್‍ವೈ ಗೆಳೆತನದ ಬಗ್ಗೆ ಕುತೂಹಲ ಹುಟ್ಟಿಕೊಂಡಿದೆ. ಹೈಕಮಾಂಡ್ ವಾರ್ನಿಂಗ್ ಬಂದ ಹಿನ್ನೆಲೆಯಲ್ಲಿ ಇನ್ಮುಂದೆ ಸಿದ್ದರಾಮಯ್ಯ ಜೊತೆ ಯಡಿಯೂರಪ್ಪ ಸಂಬಂಧ ಹೇಗಿರಲಿದೆ? ಹಿಂದಿನಂತೆಯೇ ಇರುತ್ತಾರಾ ಅಥವಾ ಅಂತರ ಕಾಯ್ದುಕೊಳ್ಳುತ್ತಾರಾ? ಎಲ್ಲಕ್ಕಿಂತ ಮಿಗಿಲಾಗಿ ಸಿದ್ದರಾಮಯ್ಯ ಯಡಿಯೂರಪ್ಪ ಬರ್ತ್ ಡೇ ಫಂಕ್ಷನ್ ಗೆ ಬರ್ತಾರಾ? ಬರಲ್ವಾ ಅನ್ನೋ ಟಾಕ್ ಸಹ ಪಕ್ಷದಲ್ಲಿ ಜೋರಾಗಿ ನಡೀತಿದೆ. ಈ ಮೂಲಕ ಹೈಕಮಾಂಡ್ ಮೆಸೇಜ್ ಯಡಿಯೂರಪ್ಪರನ್ನು ಧರ್ಮ ಸಂಕಟದಲ್ಲಿ ಸಿಕ್ಕಿಸಿದೆ ಎನ್ನಲಾಗಿದೆ.

TAGGED:bjpBJP High CommandBS YediyurappacongressPublic TVsiddaramaiahಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಬಿಜೆಪಿ ಹೈ ಕಮಾಂಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

England vs Nepal
Cricket

T20 World Cup: ಕ್ರಿಕೆಟ್‌ ಶಿಶು ನೇಪಾಳ ವಿರುದ್ಧ ಕ್ರಿಕೆಟ್‌ ಜನಕ ಇಂಗ್ಲೆಂಡ್‌ಗೆ 4 ರನ್‌ಗಳ ಜಯ

Public TV
By Public TV
5 minutes ago
Crime News husband cheats wife in hassan
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈಕೊಟ್ಟ ಪತಿ -‌ ಮಹಿಳೆಯ ರೂಮ್‌ಗೆ ನುಗ್ಗಿ ಕುಟುಂಬಸ್ಥರಿಂದ ದಾಂಧಲೆ

Public TV
By Public TV
25 minutes ago
Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
36 minutes ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
57 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
1 hour ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?