Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು- ನಾಲಿಗೆ ಹರಿಬಿಟ್ಟ ಯತ್ನಾಳ್

Public TV
Last updated: February 28, 2020 3:11 pm
Public TV
Share
3 Min Read
basangowda patil yatnal doreswamy
SHARE

– ನೀವು ರಾಜಕಾರಣಕ್ಕೆ ಯಾಕೆ ಸೇರಿದ್ರಿ, ನಿಮ್ಮದೇನಿತ್ತು ಇಲ್ಲಿ ಮೂಲ
– ಎಚ್‍ಡಿಕೆಗೆ ಯತ್ನಾಳ್ ಪ್ರಶ್ನೆ?

ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾಲಿಗೆ ಹರಿಬಿಟ್ಟಿದ್ದಾರೆ.

ದೊರೆಸ್ವಾಮಿ ಪಾಕ್ ಏಜೆಂಟ್ ಎಂಬ ಹೇಳಿಕೆಯನ್ನು ಸಾಣೆಹಳ್ಳಿ ಪಂಡಿತರಾದ್ಯ ಶ್ರೀಗಳು ಸಹ ಖಂಡಿಸಿದ್ದರು. ಹಿರಿಯ ಹೋರಾಟಗಾರರ ಬಗ್ಗೆ ಹಲವರು ಮಾತನಾಡಿದ್ದಾರೆ. ಹೀಗಾಗಿ ಆನೆ ನಡೆಯುವಾಗ ನಾಯಿಗಳು ಬೊಗಳಿದರೆ ಏನೂ ಆಗಲ್ಲ ಎಂದು ಸಾಣೇಹಳ್ಳಿ ಶ್ರೀ ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ್, ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು ಎಂದು ಹೇಳಿಕೆ ನೀಡಿದ್ದಾರೆ.

Basangouda Patil Yatnal 1

ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಯತ್ನಾಳ್ ಹುಟ್ಟಿದ್ದರೋ ಇಲ್ಲವೋ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕುಮಾರಸ್ವಾಮಿ ಹುಟ್ಟಿದ್ರಾ? ಅಷ್ಟೇ ಅಲ್ಲದೆ ಊಟಕ್ಕೆ ಗತಿ ಇಲ್ಲದವರು ಸೇನೆಗೆ ಸೇರ್ತಾರೆ ಎಂದು ಹೇಳಿದ್ದ ಅವರಿಗೆ ನಾಚಿಕೆ ಆಗಬೇಕು. ಹಾಗಾದರೆ ನೀವು ಯಾಕೆ ರಾಜಕಾರಣಕ್ಕೆ ಸೇರಿದ್ರಿ? ನಿಮ್ಮದೇನಿತ್ತು ಮೂಲ? ನಿಮ್ಮ ತಂದೆಯವರು ವರ್ಕ್ ಇನ್ಸ್‌ಪೆಕ್ಟರ್ ಇದ್ರಾ? ನಿಮಗೆ ಸಾವಿರಾರು ಕೋಟಿ ಹೇಗೆ ಬಂತು? ನನ್ನ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

ನಿಮ್ಮ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವಗೌಡ ಅವರೇನದಾರು ಸ್ವಾತಂತ್ರ್ಯ ಸೈನಿಕರೇ? ರಾಜಕಾರಣಿಗಳಲ್ಲಿ ಹೊಂದಾಣಿಕೆ ಇರಬಹುದು. ಆದ್ರೆ ಯತ್ನಾಳ್ ಜೊತೆ ಯಾರಿಗೂ ಹೊಂದಾಣಿಕೆ ಆಗಲು ಸಾಧ್ಯವಿಲ್ಲ ಎಂದು ಗುಡುಗಿದರು.

hdk 5

ವೀರ ಸಾವರ್ಕರ್ ಅವರಷ್ಟು ದೊರೆಸ್ವಾಮಿ ಅವರು ಲಾಠಿ ಏಟು ತಿಂದಿದ್ದಾರಾ? ಅವರು ಯಾವ ವಯಸ್ಸಿನಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿರಬಹುದು ಎಂದು ದೊರೆಸ್ವಾಮಿ ಅವರ ವಿರುದ್ಧೆ ಮತ್ತೊಮ್ಮೆ ಹರಿಹಾಯ್ದರು.

ಪ್ರಧಾನಿ ನರೇಂದ್ರ ಮೋದಿ, ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮೊದಲು ಕ್ಷಮೆ ಬೇಡಲಿ. ರಾತ್ರಿ ಒಂದು, ಬೆಳಗ್ಗೆ ಒಂದು ಮಾತನಾಡುವ ಚಟ ಇರುವ ರಾಜಕಾರಣಿ ನಾನಲ್ಲ ಎಂದು ಹೇಳಿದರು.

ramesh kumar

ಗೂಡ್ಸೆ ಸಂತತಿಯ ಯತ್ನಾಳ್ ಸದನದಲ್ಲಿ ಇರಲು ನಾಲಾಯಕ್ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಶಾಸಕರು, ರಮೇಶ್ ಕುಮಾರ್ ಅವರ ಇತಿಹಾಸ ಏನು, ಎಷ್ಟು ಭೂ ಕಬಳಿಕೆ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಬಹಳ ಸಾಚಾ ಎಂಬಂತೆ ಮಾತನಾಡುತ್ತಾರೆ. ಸತ್ಯಹರಿಶ್ಚಂದ್ರನ 19ನೇ ಸಂತತಿಯವರಂತೆ ಮಾತನಾಡುತ್ತಾರೆ. ಮೊದಲು ಅವರು ತಮ್ಮ ಮನೆ ಸ್ವಚ್ಛ ಮಾಡಿಕೊಳ್ಳಲಿ ಎಂದು ಗುಡುಗಿದರು.

ನನ್ನ ಬಗ್ಗೆ ಮಾತಾಡುವ ನೈತಿಕತೆ ರಮೇಶ್ ಕುಮಾರ್ ಅವರಿಗೆ ಇಲ್ಲ. ಹಾಗೆಯೇ ನನ್ನ ಮೇಲೆ ನೀರಾವರಿ ಹೋರಾಟದ 23 ಕೇಸ್ ಗಳಿವೆಯೇ ಹೊರತು, ಭೂ ಕಬಳಿಕೆ, ಅತ್ಯಾಚಾರ, ನಕಲಿ ನೋಟ್ ಮಾಡಿರುವ ಪ್ರಕರಣಗಳಿಲ್ಲ. ರಮೇಶ್ ಕುಮಾರ್ ಅವರಿಂದ ಯಾವುದೇ ಆದರ್ಶ ತತ್ವ ಕಲಿಯುವ ಅವಶ್ಯಕತೆಯಿಲ್ಲ. ಯಾಕಂದ್ರೆ ನಾನು ಆರ್‍ಎಸ್‍ಎಸ್ ಅವರು ಏನ್ ಮಾಡ್ತಾರೆ ಎಂದು ಪ್ರಶ್ನಿಸಿದರು.

ನಾನೇನು ದೇಶ ವಿರೋಧಿ ಅಲ್ಲ, ಪಾಕಿಸ್ತಾನ್ ಏಜೆಂಟ್ ಕೂಡ ಅಲ್ಲ. ದೇಶದ ಪರ ಮಾತನಾಡುತ್ತೇನೆ. ಯಾರ ಭಯವೂ ನನಗಿಲ್ಲ. ಪೊಲೀಸರು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದರೆ ಎರಡನೇ ದೆಹಲಿ ಮಂಗಳೂರು ಆಗುತ್ತಿತ್ತು. ದೆಹಲಿಯಲ್ಲಿ ಪೊಲೀಸರಿಗೆ ಬಂದೂಕು ತೋರಿಸುತ್ತಿದ್ದಾರೆ. ಅದನ್ನು ವಿರೋಧಿಸುವುದನ್ನು ಬಿಟ್ಟು ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರಿಗೆ ನಾಚಿಕೆ ಆಗಬೇಕು ಎಂದು ವಾಗ್ದಾಳಿ ನಡೆಸಿದರು.

ಸಚಿವ ನಾರಾಯಣಗೌಡ ಮಹಾರಾಷ್ಟ್ರಕ್ಕೆ ಜೈಕಾರ ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರೇನು ಪಾಕಿಸ್ತಾನಕ್ಕೆ ಜೈ ಅಂದಿದ್ದಾರಾ? ನಮ್ಮ ದೇಶದ ಒಂದು ಭಾಗಕ್ಕೆ ಜೈ ಎಂದಿದ್ದಾರೆ. ಅದರಲ್ಲಿ ತಪ್ಪೇನಿದೆ? ಹುಬ್ಬಳ್ಳಿ, ಬೆಂಗಳೂರಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕುವಾಗ ಕನ್ನಡಪರ ಹೋರಾಟಗಾರರು ಎಲ್ಲಿ ಹೋಗಿದ್ರಿ. ನಮ್ಮ ದೇಶದಲ್ಲಿರುವ ಒಂದು ಭಾಗಕ್ಕೆ ಜೈಕಾರ ಹಾಕುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವರ ಪರ ಬ್ಯಾಟ್ ಬೀಸಿದರು.

TAGGED:Basangouda Patil YatnalBJP MLAcongressDoreswamyfreedom fighterPublic TVRamesh Kumarಎಚ್ ಡಿ ಕುಮಾರಸ್ವಾಮಿಚಿತ್ರದುರ್ಗದೊರೆಸ್ವಾಮಿಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್
Share This Article
Facebook Whatsapp Whatsapp Telegram

You Might Also Like

Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
9 minutes ago
upi google pay bhim paytm
Latest

ಇಂದಿನಿಂದ ಗೂಗಲ್‌ ಪೇ, ಫೋನ್‌ ಪೇ ಮತ್ತಷ್ಟು ಫಾಸ್ಟ್‌ – ಏನೇನು ಬದಲಾವಣೆ?

Public TV
By Public TV
11 minutes ago
ATM robbery in Kolar Thieves steal Rs 27 lakh
Crime

ಕೋಲಾರದಲ್ಲಿ ಎಟಿಎಂ ದರೋಡೆ – 27 ಲಕ್ಷ ದೋಚಿದ ಕಳ್ಳರು

Public TV
By Public TV
11 minutes ago
Census 1
Latest

16ನೇ ಜನಗಣತಿಗೆ ಅಧಿಸೂಚನೆ ಪ್ರಕಟ – 2026ರಲ್ಲಿ ಮೊದಲ, 2027ರ ಮಾರ್ಚ್‌ನಿಂದ 2ನೇ ಹಂತದ ಗಣತಿ

Public TV
By Public TV
17 minutes ago
Cyprus top civilian award to modi
Latest

ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ಗೌರವ

Public TV
By Public TV
31 minutes ago
Indrayani River Bridge Collapse Techie Died
Belgaum

ಮಹಾರಾಷ್ಟ್ರದ ಇಂದ್ರಯಾಣಿ ನದಿ ಸೇತುವೆ ಕುಸಿತ – ಕರ್ನಾಟಕದ ಟೆಕ್ಕಿ ಸಾವು

Public TV
By Public TV
34 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?