Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾವಿರಾರು ಜನರು, ಗಣ್ಯರ ಸಮ್ಮುಖದಲ್ಲಿ ವೀರ ಯೋಧನ ಅಂತ್ಯಸಂಸ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾವಿರಾರು ಜನರು, ಗಣ್ಯರ ಸಮ್ಮುಖದಲ್ಲಿ ವೀರ ಯೋಧನ ಅಂತ್ಯಸಂಸ್ಕಾರ

Districts

ಸಾವಿರಾರು ಜನರು, ಗಣ್ಯರ ಸಮ್ಮುಖದಲ್ಲಿ ವೀರ ಯೋಧನ ಅಂತ್ಯಸಂಸ್ಕಾರ

Public TV
Last updated: February 29, 2020 8:05 pm
Public TV
Share
3 Min Read
klr yoda
SHARE

– ತಾಯಿ ಕಣ್ಣೀರು, ಜಿಲ್ಲಾಡಳಿತದಿಂದ ಸಹಾಯ ಹಸ್ತದ ಭರವಸೆ

ಕೋಲಾರ: ಸಾವಿರಾರು ಜನರು ಮತ್ತು ಗಣ್ಯರ ಸಮ್ಮುಖದಲ್ಲಿ ಕೋಲಾರದ ವೀರ ಯೋಧ ಪ್ರಶಾಂತ್, ಅಮರ್ ರಹೇ ಅನ್ನೋ ಜನರ ಜಯ ಘೋಷಗಳ ನಡುವೆ ಮಣ್ಣಲ್ಲಿ ಮಣ್ಣಾಗಿದ್ದಾರೆ.

ರಸ್ತೆಯುದ್ದಕ್ಕೂ ರಸ್ತೆಯ ಎರಡೂ ಬದಿಗಳಲ್ಲೂ ಸೇರಿರುವ ಜನಸಾಗರ, ವೀರ ಯೋಧನ ಪಾರ್ಥಿವ ಶರೀರಕ್ಕೆ ಹೂಮಳೆ ಸುರಿಸುತ್ತಾ, ಎಲ್ಲರ ಬಾಯಲ್ಲೂ ಪ್ರಶಾಂತ್ ಅಮರ್ ರಹೇ.. ಅಮರ್ ರಹೇ ಅನ್ನೋ ಜಯಘೋಷ ಮೊಳಗಿತು. ಅದ್ಧೂರಿಯಾಗಿ ತ್ರಿವರ್ಣ ದ್ವಜದ ನಡುವೆ ವೀರ ಯೋಧನ ಪಾರ್ಥಿವ ಶರೀರದ ಮೆರವಣಿಗೆ, ಮತ್ತೊಂದೆಡೆ ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.

klr yoda2

ಬಂಗಾರಪೇಟೆ ತಾಲೂಕು ಕಣಿಂಬೆಲೆ ಗ್ರಾಮದ ನಾರಾಯಣಪ್ಪ ಹಾಗೂ ಲಕ್ಷ್ಮಮ್ಮ ದಂಪತಿಯ ಪುತ್ರ ಪ್ರಶಾಂತ್ ಕಳೆದ ಐದು ವರ್ಷಗಳಿಂದ ಗಡಿಭದ್ರತಾ ಪಡೆಯ 17ನೇ ಮದ್ರಾಸ್ ರೆಜ್‍ಮೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಫೆ.26 ರ ಬುಧವಾರ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದರು. ಶುಕ್ರವಾರ ಮಧ್ಯರಾತ್ರಿ ಸುಮಾರಿಗೆ ವಿಮಾನದ ಮೂಲಕ ಯೋಧನ ಪಾರ್ಥಿವ ಶರೀರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಅಲ್ಲಿಂದ ನೇರ ಬಂಗಾರಪೇಟೆ ಪಟ್ಟಣಕ್ಕೆ ತರಲಾಗಿತ್ತು, ಈ ವೇಳೆ ಜನರು ಮಧ್ಯರಾತ್ರಿಯಲ್ಲೂ ಯೋಧನ ಪಾರ್ಥಿವ ಶರೀರವನ್ನು ಸ್ವಾಗತ ಮಾಡಿಕೊಂಡಿದ್ದರು.

klr soldier 1

ಇಂದು ಬೆಳಗ್ಗೆ 7 ಗಂಟೆಯಿಂದ ವೀರ ಯೋಧ ಪ್ರಶಾಂತ್ ಪಾರ್ಥಿವ ಶರೀರವನ್ನು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ, ಮಾಲೂರು ಶಾಸಕ ನಂಜೇಗೌಡ, ಸಂಸದ ಮುನಿಸ್ವಾಮಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ಹಲವು ಗಣ್ಯರು ಪಕ್ಷ ಭೇದ ಮರೆತು ಹುತಾತ್ಮ ಯೋಧ ಪ್ರಶಾಂತ್‍ಗೆ ಹೂಗುಚ್ಚವಿಟ್ಟು ಅಂತಿಮ ನಮನ ಸಲ್ಲಿಸಿದರು. ಹೊಸ ಮನೆ ಕಟ್ಟಿಸಲು ಸಾಲ ಮಾಡಿ ಹಣ ನೀಡಿ ಈ ಬಾರಿ ಬಂದಾಗ ಗೃಹಪ್ರವೇಶ ಮಾಡೋಣ ಎಂದು ಹೇಳಿ ಹೋಗಿದ್ದ ಮಗ ನಮ್ಮನ್ನೆಲ್ಲಾ ಅಗಲಿದನ್ನು ನೆನೆದು ತಾಯಿ ಲಕ್ಷ್ಮಮ್ಮ ಕಣ್ಣೀರಾಕಿದರು.

klr yoda3

10.30ರ ಸುಮಾರಿಗೆ ಯೋಧನ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬಂಗಾರಪೇಟೆ ಪಟ್ಟಣದ ಪ್ರಮುಖ ಬೀದಿ ಬೀದಿಗಳಲ್ಲಿ ಸಾವಿರಾರು ಸಂಖ್ಯೆಯ ಜನಸ್ತೋಮದ ನಡುವೆ ವೀರ ಯೋಧನ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಯಿತು. ಈ ವೇಳೆ ರಸ್ತೆಯ ಎರಡೂ ಬದಿಗಳಲ್ಲಿ ಜನರು ಅಮರ್ ರಹೇ ಅಮರ್ ರಹೇ ಪ್ರಶಾಂತ್ ಎಂದು ಜಯಘೋಷಗಳನ್ನು ಕೂಗುತ್ತಾ ಪಾರ್ಥಿವ ಶರೀರಕ್ಕೆ ಹೂಮಳೆ ಸುರಿಸಿದರು. ಪಾರ್ಥಿವ ಶರೀರ ಸಾಗಿದ ನಾಲ್ಕು ಕಿಲೋಮೀಟರ್ ದೂರಕ್ಕೂ ಜನ ಸಾಗರ ತುಂಬಿತ್ತು.

klr soldier 2

ಸಂಸದರು, ಶಾಸಕರುಗಳು ಪಾರ್ಥಿವ ಶರೀರದ ಜೊತೆಗೆ ನಡೆದೇ ಸಾಗಿದರು. ವೀರಯೋಧ ಪ್ರಶಾಂತ್ ಓದಿದ್ದ ಶಾಲೆಯಲ್ಲಿ ತ್ರಿವರ್ಣದ್ವಜವನ್ನು ಅರ್ಧಕ್ಕೆ ಹಾರಿಸಿ ಶಾಲೆಗೆ ರಜೆ ನೀಡಿ ಗೌರವ ಸಲ್ಲಿಸಲಾಯಿತು. ಗ್ರಾಮದ ಹೊರಗಡೆ ಸರ್ಕಾರಿ ಜಾಗದಲ್ಲಿ ಯೋಧನ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿ ಸಾವಿರಾರು ಜನರ ನಡುವೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಪ್ರಶಾಂತ್ ಪಾರ್ಥಿವ ಶರೀರದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಆಗ ಮಗನನ್ನು ನೆನೆದು ಕಣ್ಣೀರಾಕುತ್ತಿದ್ದ ಕುಟುಂಬಸ್ಥರಿಗೆ ಅಧಿಕಾರಿಗಳು ಜನಪ್ರತಿನಿಧಿಗಳು ಧೈರ್ಯ ಹೇಳಿ ನಿಮ್ಮ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

klr yoda1

ದೇಶಸೇವೆ ಮಾಡುತ್ತೇನೆ ಎಂದು ಕನಸು ಕಟ್ಟಿಕೊಂಡು ಸೇನೆಗೆ ಸೇರಿದ್ದ ಯುವಕ ಪ್ರಶಾಂತ್, ಇಂದು ದೇಶದ ಮಗನಾಗಿ ಮಣ್ಣಲ್ಲಿ ಮಣ್ಣಾದರು. ಆದರೆ ಅವನನ್ನೇ ನಂಬಿದ್ದ ಯೋಧ ಪ್ರಶಾಂತ್ ಕುಟುಂಬ ನಾವಿಕನನ್ನು ಕಳೆದು ಕೊಂಡ ದೋಣಿಯಂತಾಗಿದ್ದು, ಸರ್ಕಾರಗಳು ಯೋಧನ ಕುಟುಂಬಕ್ಕೆ ಬೆನ್ನೆಲುಬಾಗಿ ನಿಲ್ಲಬೇಕಿದೆ.

TAGGED:dignitariesfamilyFuneralgovernment honorsKolarpeoplePublic TVsoldierಅಂತ್ಯ ಸಂಸ್ಕಾರಕುಟುಂಬಕೋಲಾರಗಣ್ಯರುಜನರುಪಬ್ಲಿಕ್ ಟಿವಿಸರ್ಕಾರಿ ಗೌರವಸೈನಿಕ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Siddaramaiah 5
Bengaluru City

ಉದ್ಯೋಗ ಭರ್ತಿಯಾಗದ್ಧಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
8 minutes ago
Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
38 minutes ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
1 hour ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
2 hours ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
2 hours ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?