Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಗು ಗುಂಡಿ ಪ್ರಯೋಗ- ವಿದೇಶಿಗರ ಮನಗೆದ್ದ ಕುನ್ನೂರು ಯುವ ಕೃಷಿಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Haveri | ಇಂಗು ಗುಂಡಿ ಪ್ರಯೋಗ- ವಿದೇಶಿಗರ ಮನಗೆದ್ದ ಕುನ್ನೂರು ಯುವ ಕೃಷಿಕ

Haveri

ಇಂಗು ಗುಂಡಿ ಪ್ರಯೋಗ- ವಿದೇಶಿಗರ ಮನಗೆದ್ದ ಕುನ್ನೂರು ಯುವ ಕೃಷಿಕ

Public TV
Last updated: February 29, 2020 8:27 pm
Public TV
Share
3 Min Read
hvr forign
SHARE

ಹಾವೇರಿ: ಮಳೆಯ ಜೂಜಾಟಕ್ಕೆ ಸೆಡ್ಡು ಹೊಡೆದ ಕುನ್ನೂರಿನ ಯುವರೈತ ಶಂಕರ್, ಸ್ವಪ್ರಯತ್ನದಿಂದ ಕೊಳವೆ ಬಾವಿಗೆ ನೀರು ಇಂಗಿಸುವ ಪದ್ಧತಿ ಅಳವಡಿಸಿಕೊಂಡು ಯಶಸ್ವಿ ರೈತನಾಗಿ ದೇಶ-ವಿದೇಶಿಗರ ಗಮನ ಸೆಳೆದಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ನಿವಾಸಿಯಾದ ಐ.ಟಿ.ಐ ಪದವೀಧರ ಶಂಕರ್ ಸೋಗಲಿ ಅವರು ತಮ್ಮ ಹೊಲದಲ್ಲಿ ಕೊರೆಸಿದಂತಹ ಬೋರ್ ವೆಲ್ ನೀರಿನ ಇಳುವರಿಯನ್ನು ದ್ವಿಗುಣಗೊಳಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡು ಅಲ್ಪ ಜಮೀನಿನಲ್ಲಿ ಲಾಭದಾಯಕ ಕೃಷಿಯಲ್ಲಿ ತೊಡಗಿದ್ದಾರೆ.

ಆರಂಭದಲ್ಲಿ ಕೇವಲ ಎರಡು ಇಂಚಿನಷ್ಟು ಮಾತ್ರ ನೀರು ಬಿದ್ದಿದ್ದು ತನ್ನ 1.29ಗುಂಟೆ ಜಮೀನಿಗೆ ನೀರು ಉಣಿಸಲು ಪರದಾಡುತಿದ್ದರು ಮಳೆಯೂ ಇಲ್ಲದೆ ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣವು ಕುಸಿತ ಕಂಡಿತು. ಹೀಗಾಗಿ ಕೃಷಿಯನ್ನೆ ನಂಬಿದ್ದ ಶಂಕರ್ ಬದುಕು ಕೈಕೊಡುವ ಆತಂಕದಲ್ಲಿದ್ದರು. ಈ ಸಂದರ್ಭದಲ್ಲಿ ಕೃಷಿ ಇಲಾಖಾ ಅಧಿಕಾರಿಗಳ ಸಲಹೆ ಇವರ ಬದುಕನ್ನು ಬದಲಾಯಿಸಿತು ಎಂದು ಅವರು ಹೇಳುತ್ತಾರೆ.

WhatsApp Image 2020 02 29 at 7.40.55 PM

ಜಮೀನಲ್ಲಿ ತೋಡಿದ ಕೊಳವೆಬಾವಿ ಸಮಿಪದಲ್ಲಿಯೇ ಎರಡು ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಎರಡು ಮೀಟರ್ ಉದ್ದ, ಒಂದು ಮೀಟರ್ ಅಗಲ, ಎರಡು ಮೀಟರ್ ಆಳವಾದ ಗುಂಡಿಯನ್ನು ತೆಗೆದು, ಗುಂಡಿಯಲ್ಲಿ ಎರಡು ಪೀಟ್ ಮರಳು, ಇದ್ದಿಲು, ದಪ್ಪದಾದ ಜಲ್ಲಿ ಕಲ್ಲು ತುಂಬಿಸಿದ್ದಾರೆ. ಇದರ ಪ್ರತಿಫಲವಾಗಿ ಗುಂಡಿಯಲ್ಲಿ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಭೂಮಿಗೆ ಇಂಗಿಸಿದ್ದಾರೆ. ಪರಿಣಾಮ ಕೇವಲ ಎರಡು ಇಂಚು ನೀರಿನ ಇಳುವರಿಯ ಕೊಳವೆಬಾವಿ ಇದೀಗ ದ್ವಿಗುಣಗೊಂಡು ನಾಲ್ಕು ಇಂಚು ನೀರು ಹೊರಹೊಮ್ಮುತ್ತಿದೆ.

ಇದಲ್ಲದೆ ಹೊಲದ ಸುತ್ತಲೂ ತಿರುವು ಕಾಲುವೆಯಿಂದ ಮಳೆಗಾಲದಲ್ಲಿ ನೀರನ್ನು ಸಂಗ್ರಹಿಸಿ ಅದನ್ನು ಇಂಗುಗುಂಡಿಗೆ ಸೇರಿಸಲಾಗಿದೆ. ಇಂತಹ ಪ್ರಯೋಗದಿಂದ ತಮ್ಮ ಹೊಲದಲ್ಲಿನ ಮಣ್ಣಿನ ಸಂರಕ್ಷಣೆ ಮತ್ತು ಮಣ್ಣಿನ ಸವಕಳಿಯನ್ನು ತಡೆಯಬಹುದು. ಹೀಗೆ ಮಾಡುವುದರಿಂದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲಕ್ಷ ಲೀಟರಿಗೂ ಅಧಿಕ ಮಳೆ ನೀರನ್ನು ಇಂಗಿಸಲಾಗುತ್ತದೆ. ಇದರ ಪರಿಣಾಮ ಒಂದು ಬೆಳೆ ಬೆಳೆಯಲು ಪರದಾಡುತ್ತಿದ್ದ ನನಗೆ ಮೂರು ಬೆಳೆಯನ್ನು ಬೆಳೆಯುವಷ್ಟು ತೇವಾಂಶ ಭೂಮಿಯಲ್ಲಿರುತ್ತದೆ, ಸಮೃದ್ಧ ಬೆಳೆ ಬರುತ್ತದೆ ಎಂದು ಶಂಕರ್ ಹೇಳುತ್ತಾರೆ.

ಈ ಪ್ರಯೋಗದಲ್ಲಿ ಮತ್ತಷ್ಟು ಸುಧಾರಣೆಕಂಡುಕೊಂಡ ಶಂಕರ್ ಅವರು ಇಂಗುಗುಂಡಿಯನ್ನ ಕೇವಲ ಮಣ್ಣು, ಕಲ್ಲುಗಳನ್ನು ಬಳಸಿ ನಿರ್ಮಿಸುವ ವಿಧಾನವನ್ನು ಬದಲಿಸಿ, ಹೊಸದಾಗಿ ಸಿಮೆಂಟ್ ರಿಂಗು, ಜಲ್ಲಿ, ಮರಳನ್ನು ಬಳಸಿಕೊಂಡು ಸುಲಭವಾದ ರೀತಿಯಲ್ಲಿ ನೀರನ್ನು ಇಂಗಿಸುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಮಳೆಗಾಲದಲ್ಲಿ ಇಂಗುಗುಂಡಿಗಳು ಮುಚ್ಚಿಹೋಗುವುದು ತಪ್ಪಿದೆ ಎನ್ನುತ್ತಾರೆ.

WhatsApp Image 2020 02 29 at 7.40.54 PM

ಯುವ ರೈತನ ಈ ಹೊಸ ಪ್ರಯೋಗವನ್ನು ಧಾರವಾಡ ಕೃಷಿ ವಿಶ್ವ ವಿದ್ಯಾಲಯ ವಿದೇಶಿಯರಿಗೆ ಪರಿಚಯಿಸಿದೆ. ಆಸ್ಟ್ರೇಲಿಯಾ, ಇಸ್ರೇಲ್, ಕೆನಡಾ, ಸೇರಿದಂತೆ ಏಳು ರಾಷ್ಟ್ರದ ರೈತ ಪ್ರತಿನಿಧಿಗಳು ಕುನ್ನೂರ ಗ್ರಾಮದ ಶಂಕರ್ ಅವರ ಜಮೀನಿಗೆ ಬಂದು ವೀಕ್ಷಣೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಇವರ ಈ ಪ್ರಯೋಗಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯವು 2017ರ ಶ್ರೇಷ್ಠ ಯುವ ಕೃಷಿಕ ಪ್ರಶಸ್ತಿ, ದೇಶಪಾಂಡೆ ಫೌಂಡೇಶನ್ ಕೊಡಮಾಡುವ ಕೃಷಿ ಸಿಂಚನ ಪ್ರಶಸ್ತಿ, 2019-20ನೇ ಸಾಲಿನ ಹಾವೇರಿ ಜಿಲ್ಲಾಮಟ್ಟದ ಶ್ರೇಷ್ಟ ಕೃಷಿ ಪ್ರಶಸ್ತಿ ಪ್ರದಾನ ಮಾಡಿ ಪ್ರೋತ್ಸಾಹಿಸಿದೆ.

ತುಂಡು ಭೂಮಿಯಲ್ಲಿ ಹಿಂಡು ಬೇಸಾಯ:
1.29 ಗುಂಟೆ ಜಮೀನು ಮಾತ್ರ ಹೊಂದಿರುವ ಶಂಕರ್ ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಬಹು ಬೆಳೆಗಳ ಪದ್ಧತಿಯನ್ನು ಅನುಸರಿಸಿದ್ದಾರೆ. ಈ ಜಮೀನಿನಲ್ಲಿ 303 ಅಡಿಕೆ ಸಸಿ, 1200 ಅಂಗಾಂಶ ಬಾಳೆ, 300 ಶ್ರೀಗಂಧದ ಗಿಡಗಳು, 10 ತೆಂಗಿನ ಗಿಡ, 100 ಲಿಂಬು, ಐದು ಪೇರಲೆ, ಹೊಲದ ಸುತ್ತಲೂ 1120 ಗಾಳಿಮರಗಳು ಹಾಗೂ ಔಷಧೀಯ ಸಸ್ಯಗಳಾದ ಲಿಂಬೆಹುಲ್ಲು (ನೆಗಡಿ), ಮಾಗಣಿ ಬೇರು (ಉಪ್ಪಿನ ಕಾಯಿ ತಯಾರಿಸಲು), ಬಿಳಿ ಗಲಗುಂಜಿ (ಧ್ವನಿ ಸರಿಪಡಿಸಲು), ಪತ್ರಿ ಪಟ-ಪಟ (ಕಿಡ್ನಿ ಹರಳು), ಒಂದೇಲಗಾ (ನೆನಪಿನ ಶಕ್ತಿ ಹೆಚ್ಚಿಸುವುದು ), ಮಧುನಾಸಿನಿ ( ಸಕ್ಕರೆ ಕಾಯಿಲೆ)ಯಂತಹ ಆಯುರ್ವೆದದ ಔಷಧಿಯ ಸಸ್ಯಗಳನ್ನು ಬೆಳೆಸಿರುವುದು ವಿಶೇಷವಾಗಿದೆ.

WhatsApp Image 2020 02 29 at 7.40.54 PM 1

ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಹತ್ತು ಗುಂಟೆಯಲ್ಲಿ ನೆರಳು ಪರದೆ ನಿರ್ಮಿಸಿಕೊಂಡು ತರಕಾರಿ ಬೆಳೆಯನ್ನು ಬೆಳೆಯುತ್ತಾರೆ. ಜಮೀನಿಗೆ ಬೇಕಾಗುವ ಸಾವಯವ ಗೊಬ್ಬರ ತಯಾರಿಸಲು ಎರೆಹುಳ ತೊಟ್ಟಿಯನ್ನು ನಿರ್ಮಿಸಿಕೊಂಡಿದ್ದಾರೆ. ದೇಶಿ ಆಕಳು ಸಾಕಾಣಿಕೆಯಿಂದ ಹೈನುಗಾರಿಕೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ದೇಶಿ ಹಸುವಿನಿಂದ ಬಿಜಾಮೃತ, ಜೀವಾಮೃತ, ಹೋದಿಕೆ, ವಾಪಾಸಾ ಹಂತಗಳನ್ನು ಅನುಸರಿಸುತ್ತಿದ್ದಾರೆ. ಈ ಎಲ್ಲ ಪದ್ಧತಿಯ ಅನುಸರಣೆಗೆ ಮಹಾರಾಷ್ಟ್ರದ ಸಹಜ ಕೃಷಿ ಪದ್ಧತಿಯ ಸುಭಾಷ್ ಪಾಳೆಕೆರ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದಿರುವುದಾಗಿ ತಿಳಿಸುತ್ತಾರೆ. ಇಡೀ ಜಗತ್ತೇ ಇಸ್ರೇಲ್ ಮಾದರಿಯ ಕೃಷಿಪದ್ಧತಿ ಅನುಸರಿಸುವ ತವಕದಲ್ಲಿದ್ದರೆ ನಮ್ಮಲ್ಲಿಯೇ ಸದ್ದಿಲ್ಲದೆ ನೈಸರ್ಗಿಕ ಕೃಷಿ ಪದ್ಧತಿ ಮತ್ತು ಇಂಗುಗುಂಡಿಗಳ ಕ್ರಮದಿಂದ ಲಾಭದಾಯಕ ಕೃಷಿಯಲ್ಲಿ ತೊಡಗಿರುವ ಕುನ್ನೂರ ಶಂಕರ್ ಯುವ ರೈತರಿಗೆ ಮಾದರಿಯಾಗಿದ್ದಾರೆ.

TAGGED:farmerforeignhaveriPublic TVyoung manಕೃಷಿಕಪಬ್ಲಿಕ್ ಟಿವಿಯುವಕವಿದೇಶಹಾವೇರಿ
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

cocaine bengaluru airport
Crime

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 38 ಕೋಟಿ ಮೌಲ್ಯದ ಕೊಕೇನ್ ಸೀಜ್

Public TV
By Public TV
6 minutes ago
Private Bus
Belgaum

ಲಾಂಗ್ ವೀಕೆಂಡ್ ಎಫೆಕ್ಟ್ – ಪ್ರಯಾಣಿಕರಿಗೆ ದರ ಏರಿಕೆ ಬಿಸಿ

Public TV
By Public TV
16 minutes ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶಾಕ್ – FIR ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
27 minutes ago
Bar owner murder case in Chikkamagaluru Four arrested
Chikkamagaluru

ಚಿಕ್ಕಮಗಳೂರು | ಬಾರ್ ಮಾಲೀಕನ ಹತ್ಯೆ ಕೇಸ್ – ನಾಲ್ವರು ಅರೆಸ್ಟ್‌

Public TV
By Public TV
46 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
47 minutes ago
Male Mahadeshwara Hills Two Wheeler Ban
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?