Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.25 ಮೀಸಲು – ಎರಡು ಶನಿವಾರ ಬ್ಯಾಗ್ ರಹಿತ ದಿನ, ಯಾವ ಸಮುದಾಯಕ್ಕೆ ಎಷ್ಟು ಕೋಟಿ ಹಂಚಿಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.25 ಮೀಸಲು – ಎರಡು ಶನಿವಾರ ಬ್ಯಾಗ್ ರಹಿತ ದಿನ, ಯಾವ ಸಮುದಾಯಕ್ಕೆ ಎಷ್ಟು ಕೋಟಿ ಹಂಚಿಕೆ?

Bengaluru City

ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.25 ಮೀಸಲು – ಎರಡು ಶನಿವಾರ ಬ್ಯಾಗ್ ರಹಿತ ದಿನ, ಯಾವ ಸಮುದಾಯಕ್ಕೆ ಎಷ್ಟು ಕೋಟಿ ಹಂಚಿಕೆ?

Public TV
Last updated: March 5, 2020 1:05 pm
Public TV
Share
4 Min Read
Private School Students
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: 2020-21ನೇ ಸಾಲಿನಲ್ಲಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ಒಟ್ಟು 72,093 ಕೋಟಿ ರೂ. ಅನುದಾನವನ್ನು ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ ನಿಗದಿ. ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 25 ರಷ್ಟು ಸೀಟು ಹಂಚಿಕೆಗೆ ಕ್ರಮ. ಈ ವಸತಿ ಶಾಲೆಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ.

girls school

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ ಹೆಚ್ಚಳ. ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ನೀಡಲು ಕ್ರಮ. 60 ಲಕ್ಷ ರೂ. ಅನುದಾನ.

#Budget2020 #KarnatakaBudget #BudgetSpeech2020 #inclusiveGrowth And #Welfare pic.twitter.com/LXJ3J5pUzu

— CM of Karnataka (@CMofKarnataka) March 5, 2020

ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ.

“ಚರ್ಮ ಶಿಲ್ಪ” ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ|| ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂ.ಗಳಲ್ಲಿ ಐದು ಲಕ್ಷ ರೂ. ಸಹಾಯಧನ. 12.50 ಕೋಟಿ ರೂ. ಅನುದಾನ.

ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ.

maharani college 4

ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ. ಆರ್ಥಿಕ ನೆರವು. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ. ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.

#Budget2020 #KarnatakaBudget #BudgetSpeech2020 #InclusiveGrowth And #Welfare pic.twitter.com/gD6ORc4hXn

— CM of Karnataka (@CMofKarnataka) March 5, 2020

ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂ. ಸರ್ಕಾರದ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು ಕ್ರಮ.

ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ. ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

cm

ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ. ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, “ಸಂಭ್ರಮ ಶನಿವಾರ” ಆಚರಣೆ.

ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ. ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು “ಶಿಕ್ಷಕ ಮಿತ್ರ” ಎಂಬ ಮೊಬೈಲ್ ಆಪ್ ಅಭಿವೃದ್ಧಿ. 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ.

#Budget2020 #KarnatakaBudget #BudgetSpeech2020 #InclusiveGrowth And #Welfare pic.twitter.com/3LYGrV3Ba7

— CM of Karnataka (@CMofKarnataka) March 5, 2020

ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ. ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ.

ಇಂಟರ್ಯಾಕ್ಟೀವ್ ಆನ್-ಲೈನ್ ಕೋರ್ಸ್ ಗಳನ್ನು ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.

TAGGED:BagDevelopmentkarnatakakarnataka budgetschoolಅಭಿವೃದ್ಧಿಕರ್ನಾಟಕಕರ್ನಾಟಕ ಬಜೆಟ್ಬ್ಯಾಗ್ಶಾಲೆ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
7 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
12 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?