Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಯಶವಂತಪುರ- ಕಾರವಾರ- ವಾಸ್ಕೋ ಮಾರ್ಗದಲ್ಲಿ ಹೊಸ ರೈಲು ಸಂಚಾರ ಆರಂಭ

Public TV
Last updated: March 7, 2020 1:16 pm
Public TV
Share
3 Min Read
ypr kwr vasco train
SHARE

– ಹೊಸ ರೈಲಿಗೆ ಬಿಎಸ್‍ವೈ ಚಾಲನೆ

ಬೆಂಗಳೂರು: ಕಾರವಾರ ಮಾರ್ಗವಾಗಿ ಯಶವಂತಪುರ-ವಾಸ್ಕೋ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದರು.

ಯಶವಂತಪುರ ರೈಲು ನಿಲ್ದಾಣದಲ್ಲಿ ಹೊಸ ರೈಲಿಗೆ ಸಿಎಂ ಚಾಲನೆ ನೀಡಿದರು. ಇದೇ ವೇಳೆ ಯಶವಂತಪುರ-ವಿಜಯಪುರ-ಯಶವಂತಪುರ ರೈಲನ್ನು ಎಲ್‍ಎಚ್‍ಬಿ ಕೋಚ್‍ಗಳಾಗಿ ಪರಿವರ್ತನೆ ಕಾರ್ಯಕ್ರಮಕ್ಕೂ ಚಾಲನೆ ನೀಡಿದರು.

ಮುಖ್ಯಮಂತ್ರಿ ಶ್ರೀ @BSYBJP ರವರು ಬೆಂಗಳೂರು-ಪಡೀಲ್-ಕುಂದಾಪುರ-ಕಾರವಾರ-ವಾಸ್ಕೋ ಮಾರ್ಗವಾಗಿ ಸಂಚಾರ ಮಾಡುವ ಹೊಸ ರೈಲಿಗೆ ಯಶವಂತಪುರ ರೈಲು ನಿಲ್ದಾಣದಲ್ಲಿ ಇಂದು ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ @SureshAngadi_ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ @ShobhaBJP ಉಪಸ್ಥಿತರಿದ್ದರು. pic.twitter.com/F59flrMLgJ

— BJP Karnataka (@BJP4Karnataka) March 7, 2020

ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ, ಯಶವಂತಪುರ-ಕಾರವಾರ-ವಾಸ್ಕೋ ಮಾರ್ಗದಲ್ಲಿ ಇಂದು ಹೊಸ ರೈಲು ಚಾಲನೆ ಸಂತಸ ತಂದಿದೆ. ಈ ರೈಲು ಸಂಜೆ ಬೆಂಗಳೂರಿಂದ ಹೊರಟು ಬೆಳಗ್ಗೆ ಕಾರವಾರಕ್ಕೆ ತಲುಪಲಿದೆ. ಹೊಸ ರೈಲಿನಿಂದ ಶಿರಾಡಿಘಾಟ್ ಮೇಲಿನ ವಾಹನ ಸಂಚಾರ ಒತ್ತಡ ಕಡಿಮೆಯಾಗಲಿದೆ. ನಾನು ಮುಖ್ಯಮಂತ್ರಿಯಾದ ಹೊಸದರಲ್ಲಿ ರೈಲ್ವೆ ಯೋಜನೆಗಳಿಗೆ ಭೂಮಿ, ಅರ್ಧ ವೆಚ್ಚ ಕೊಡುವ ಭರವಸೆ ಕೊಟ್ಟಿದ್ದೆ. ಸರ್ಕಾರ ರೈಲ್ವೆ ಯೋಜನೆಗಳಿಗೆ ಸದಾ ಬೆಂಬಲ ಕೊಡಲಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೊಸ ರೈಲುಗಳ ಸೇವೆ ಸಿಗಲಿದೆ ಎಂದರು.

ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ಮಾತನಾಡಿ, ಈ ಹೊಸ ರೈಲಿನ ಇನ್ನೊಂದು ವಿಶೇಷ ಎಂಬಂತೆ ರೈಲು ಚಾಲನೆ ಮಾಡುವವರಿಬ್ಬರೂ ಮಹಿಳಾ ಲೋಕೊಪೈಲಟ್ ಗಳು. ಸಂಸದೆ ಶೋಭಾ ಕರಂದ್ಲಾಜೆಯವರು ಈ ಹೊಸ ರೈಲಿಗೆ ಒತ್ತಾಯ ಮಾಡಿದವರು. ಶೋಭಾ ಅವರು ರಾಣಿ ಚೆನ್ನಮ್ಮ ರೀತಿಯಲ್ಲಿ ಹೋರಾಡಿ ಈ ಹೊಸ ರೈಲು ಸಂಚರಿಸಲು ಕಾರಣರಾಗಿದ್ದಾರೆ. ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ಲೋಕೊಪೈಲಟ್‍ಗಳಿಂದ ರೈಲು ಚಾಲನೆ ಮಾಡಲಾಗುತ್ತಿದೆ ಎಂದರು.

ಅವರೊಂದಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಾಯಿತು.

ಚಿಕ್ಕಮಗಳೂರು ಹಾಗೂ ಕಾರವಾರ ಭಾಗದ ಜನರ ಬಹುದಿನಗಳ ಬೇಡಿಕೆ ಆಗಿದ್ದ ಈ ರೈಲು ಸೇವೆಗೆ ಇಂದು ಚಾಲನೆ ನೀಡಲಾಗಿದೆ‌‌. ಜೊತೆಗೆ ಈ ರೈಲು ಸೇವೆಗೆ ಸಂಸದರಾದ ಶೋಭಾ ಕರಂದ್ಲಾಜೆ ಅವರು ಸತತವಾಗಿ ಪ್ರಯತ್ನಿಸಿದ್ದನ್ನು ಸ್ಮರಿಸಲಾಯಿತು . pic.twitter.com/ucv9gxxJwa

— Mangal Suresh Angadi (@MangalSAngadi) March 7, 2020

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಇನ್ನೂ ಕೆಲವು ಜಿಲ್ಲೆಗಳಿಗೆ ರೈಲು ಸೇವೆ ದೊರೆತಿಲ್ಲ, ನಾನು ಪ್ರತಿನಿಧಿಸುವ ಚಿಕ್ಕಮಗಳೂರಿಗೆ ರೈಲು ಬಂದಿದ್ದೇ ನಮ್ಮ ಸರ್ಕಾರ ಬಂದ ಮೇಲೆ. ಹಬ್ಬಗಳು ಬಂದರೆ ನಮ್ಮ ಭಾಗದ ಜನ ಟ್ಯಾಕ್ಸಿ, ಟಿಟಿ ಮಾಡಿಕೊಂಡು ಊರಿಗೆ ಹೋಗಬೇಕಿತ್ತು. ಬೆಂಗಳೂರಿನಲ್ಲಿ ಕರಾವಳಿಯ ಸಾಕಷ್ಟು ಜನ ಇದ್ದಾರೆ. ಆದರೆ ನಮ್ಮ ಊರುಗಳಿಗೆ ಹೋಗಲು ರೈಲು ಸೇವೆ ಇರಲಿಲ್ಲ. ಇಂದು ನಮ್ಮ ಭಾಗದ ಜನರ ನಿರೀಕ್ಷೆ ಈಡೇರಿದೆ ಎಂದರು.

https://twitter.com/ShobhaBJP/status/1236162444264796163

ಉಡುಪಿ, ಭಟ್ಕಳ, ಕಾರವಾರ ಮಾರ್ಗದಲ್ಲಿ ಈ ಹೊಸ ರೈಲು ಸಂಚರಿಸಲಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಅಭಿನಂದನೆಗಳು. ಇಂದು ಹೊಸ ರೈಲು ಸೇವೆ ಸಿಕ್ಕಿದೆ. ಆದರೆ ಈ ಮಾರ್ಗದಲ್ಲಿರುವ ಹಳೆ ರೈಲನ್ನು ನಿಲ್ಲಿಸಬೇಡಿ. ಹಳೆಯ ರೈಲು ಸಂಚಾರ ಮುಂದುವರಿಯಲಿ, ಯಡಿಯೂರಪ್ಪನವರು ಮೊದಲ ಸಲ ಸಿಎಂ ಆಗಿದ್ದಾಗಿಂದಲೂ ರೈಲ್ವೆ ಯೋಜನೆಗಳಿಗೆ ಬೆಂಬಲಿಸುತ್ತಿದ್ದಾರೆ. ರೈಲ್ವೆ ಯೋಜನೆಗಳಿಗೆ ಶೇ.50ರಷ್ಟು ನೆರವು ಕೊಡುವುದಾಗಿ ಹೇಳಿದ ಮೊದಲ ಸಿಎಂ ಯಡಿಯೂರಪ್ಪ. ಅಲ್ಲದೆ ಶಿವಮೊಗ್ಗ ಮಾರ್ಗವಾಗಿ ಹಾಸನ, ಬೇಲೂರು, ಚಿಕ್ಕಮಗಳೂರು, ಶೃಂಗೇರಿಗೆ ರೈಲು ಸೇವೆ ಅಗತ್ಯವಿದೆ. ಈ ಬೇಡಿಕೆಯನ್ನೂ ಶೀಘ್ರದಲ್ಲೇ ಕೇಂದ್ರ ಸರ್ಕಾರ ಈಡೇರಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

train

ರೈಲು ವೇಳಾಪಟ್ಟಿ: ಪ್ರತಿ ದಿನ ಸಂಜೆ 6ಕ್ಕೆ ಯಶವಂತಪುರದಿಂದ 14 ಬೋಗಿಗಳ ಈ ರೈಲು ಹೊರಡಲಿದೆ. ಕುಣಿಗಲ್ ಮೂಲಕವಾಗಿ ಹಾಸನಕ್ಕೆ ರಾತ್ರಿ 9.15ಕ್ಕೆ, ಪಡೀಲ್ ಗೆ ಬೆಳಗ್ಗಿನ ಜಾವ 3ಕ್ಕೆ, ಉಡುಪಿಗೆ ಬೆಳಗ್ಗೆ 5ಕ್ಕೆ, ಕುಂದಾಪುರ 5.30ಕ್ಕೆ, ಕಾರವಾರಕ್ಕೆ ಬೆಳಗ್ಗೆ 8.30 ಮತ್ತು ವಾಸ್ಕೋಗೆ ಬೆಳಗ್ಗೆ 10.30ಕ್ಕೆ ತಲುಪಲಿದೆ. ಮರಳಿ ವಾಸ್ಕೋದಿಂದ ಸಂಜೆ 5.20ಕ್ಕೆ ಹೊರಡಲಿದ್ದು, ಸಂಜೆ 7.25ಕ್ಕೆ ಕಾರವಾರ, 9.30ಕ್ಕೆ ಕುಂದಾಪುರ, 10ಕ್ಕೆ ಉಡುಪಿ, ಬೆಳಗ್ಗೆ 8ಕ್ಕೆ ಯಶವಂತಪುರ ತಲುಪಲಿದೆ. ಯಶವಂತಪುರ, ಚಿಕ್ಕಬಾಣಾವರ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಾಣಿಯೂರು, ಕಬಕ, ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರ್, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ, ಅಂಕೋಲಾ, ಕಾರವಾರ, ವಾಸ್ಕೋಗಳಲ್ಲಿ ಈ ಹೊಸ ರೈಲು ನಿಲುಗಡೆಯಾಗಲಿದೆ.

TAGGED:bengalurukarwarPublic TVshobha karandlajesuresh angaditrainVascoYediyurappaYeshwantpurಕಾರವಾರಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಯಶವಂತಪುರರೈಲುವಾಸ್ಕೋಶೋಭಾ ಕರಂದ್ಲಾಜೆಸುರೇಶ್ ಅಂಗಡಿ
Share This Article
Facebook Whatsapp Whatsapp Telegram

Cinema Updates

Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories
The Task Movie
ಭೀಮ ಖ್ಯಾತಿಯ ಜಯ ಸೂರ್ಯ ನಟನೆಯ `ದಿ ಟಾಸ್ಕ್’ ಚಿತ್ರೀಕರಣ ಮುಕ್ತಾಯ
Cinema Latest Sandalwood Top Stories

You Might Also Like

Madikeri Teacher Suicide
Crime

Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

Public TV
By Public TV
10 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

Public TV
By Public TV
46 minutes ago
savadatti yellamma temple
Belgaum

ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ

Public TV
By Public TV
1 hour ago
HK Patil
Bengaluru City

ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

Public TV
By Public TV
2 hours ago
Kalaburagi Student
Districts

ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ತುಂಬಿ ಹರಿಯುತ್ತಿರುವ ನದಿ ದಾಟಿದ ವಿದ್ಯಾರ್ಥಿನಿ

Public TV
By Public TV
2 hours ago
Dharwad Police Firing
Dharwad

ಧಾರವಾಡ | ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಳ್ಳರಿಬ್ಬರ ಕಾಲಿಗೆ ಗುಂಡೇಟು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?