ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಮನೀಶ್ ಪಾಂಡೆ ದಂಪತಿ

Public TV
1 Min Read
MNG MANISH PANDE copy

ಮಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ ತಮ್ಮ ಪತ್ನಿ ಜೊತೆ ತುಳುನಾಡಿನ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಮನೀಶ್ ಪಾಂಡೆ ತಮ್ಮ ಪತ್ನಿ ಆಶ್ರಿತಾ ಶೆಟ್ಟಿ ಜೊತೆ ಇಂದು ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮನೀಶ್ ಪಾಂಡೆ ವಿವಾಹ ತುಳುನಾಡಿನ ಬೆಡಗಿ, ತಮಿಳು ಹಾಗೂ ತುಳು ನಟಿ ಆಶ್ರಿತಾ ಶೆಟ್ಟಿ ಜೊತೆ ಮುಂಬೈಯಲ್ಲಿ ನಡೆದಿತ್ತು. ವಿವಾಹದ ಬಳಿಕ ದಂಪತಿ ಮೊದಲ ಬಾರಿಗೆ ಕುಕ್ಕೆ ಕ್ಷೇತ್ರಕ್ಕೆ ಬಂದಿದ್ದಾರೆ. ಇದನ್ನೂ ಓದಿ: ರಾತ್ರಿ ಟ್ರೋಫಿ ಗೆದ್ದು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ

MNG 7

ಮಾರ್ಚ್ 6 ರಂದು ಕುಕ್ಕೆ ಸುಬ್ರಹಣ್ಯಕ್ಕೆ ತಮ್ಮ ಗೆಳೆಯನ ಜೊತೆ ಆಗಮಿಸಿದ ದಂಪತಿ ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ದಂಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ನಾಗದೇವರಿಗೆ ವಿಶೇಷ ಪೂಜೆಯಾದ ಆಶ್ಲೇಷ ಪೂಜೆಯನ್ನು ನೆರೆವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಪಡೆದರು.

manish pandey marriage0 201912130679

Share This Article
Leave a Comment

Leave a Reply

Your email address will not be published. Required fields are marked *