ದಕ್ಷಿಣ ಭಾರತದ ಏಕೈಕ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರಕ್ಕೂ ಕೊರೊನಾ ಭೀತಿ

Public TV
1 Min Read
BDR 4

ಬೀದರ್: ಕರುನಾಡಿನಲ್ಲಿ ನಾಲ್ಕು ಜನ ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟ ಬೆನ್ನಲ್ಲೇ ರಾಜ್ಯದ ಜನರಲ್ಲಿ ತೀವ್ರ ಭೀತಿ ಸೃಷ್ಟಿಯಾಗಿದೆ. ಇದೀಗ ಬೀದರಿನಲ್ಲಿರುವ ದಕ್ಷಿಣ ಭಾರತದ ಏಕೈಕ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರಕ್ಕೂ ಕೊರೊನಾ ಬಿಸಿ ತಟ್ಟಿದೆ.

ರಾಜ್ಯ ಹೊರ ರಾಜ್ಯದಿಂದ ಸಾವಿರಾರು ಪ್ರವಾಸಿಗರು ಬರುವ ಈ ಪವಿತ್ರ ಸ್ಥಳದಲ್ಲಿ ಈಗ ಕೊರೊನಾ ವೈರಸ್ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಯಾರು ಗುರುದ್ವಾರದ ಕಡೆ ಬರಲು ಭಯ ಬೀಳುತ್ತಿದ್ದಾರೆ.

BDR 1 2

ಹೆಚ್ಚಾಗಿ ಪಂಜಾಬ್‍ನ ಅಮೃತಸರ ಹಾಗೂ ಮಹಾರಾಷ್ಟ್ರದ ನಾಂದೇಡ್‍ನಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು ಬರುತ್ತಿದ್ದರು. ಆದರೆ ಕೊರೊನಾ ವೈರಸ್‍ನಿಂದ ಪ್ರವಾಸಿಗರ ಸಂಖ್ಯೆ ಅತಿ ಕಡಿಮೆಯಾಗಿದೆ. ಗುರುದ್ವಾರದ ವ್ಯವಸ್ಥಾಪಕ ಮಂಡಳಿ ಕೊರೊನಾ ವೈರಸ್ ಬರದಂತೆ ಹೇಗೆ ಮುಂಜಾಗ್ರತೆ ತೆಗೆದುಕೊಳ್ಳಬೇಕು ಎಂದು ಪೋಸ್ಟ್ ಹಾಕುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *