ಸತೀಶ್ ಜಾರಕಿಹೊಳಿಗೆ ತಲೆ ಸರಿ ಇಲ್ಲ: ರಮೇಶ್ ಜಾರಕಿಹೊಳಿ

Public TV
1 Min Read
kpl ramesh jarakiholi

ಕೊಪ್ಪಳ: ಸತೀಶ್ ಜಾರಕಿಹೊಳಿಗೆ ತಲೆ ಸರಿ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಮುನಿರಾಬಾದನಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

sathish jarakiholi

ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನಿಭಾಯಿಸಲು ಸಾಗಲ್ಲ ಎಂದು ಈ ಹಿಂದೆ ಸತೀಶ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಹೇಳಿಕೆಗೆ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದು, ಆತನ ಬಗ್ಗೆ ಮಾತನಾಡುವುದು ಬೇಡ ಎಂದರು.

ಕೊರೊನಾ ವೈರಸ್ ಬಗ್ಗೆ ಸಿಎಂ ಈಗಾಗಲೇ ಸಾಕಷ್ಟು ತಿಳಿಸಿದ್ದು, ಜಾಗೃತಿಯಿಂದ ಜನರು ಸ್ಪಂದನೆ ಮಾಡಬೇಕದೆ ಎಂದರು. ಕೇಂದ್ರ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸೂಚನೆ ಮೆರೆಗೆ ಈ ಹೆಜ್ಜೆ ತೆಗೆದುಕೊಂಡಿದೆ. ಒಂದು ವಾರದಲ್ಲಿ ಕೊರೊನಾ ವೈರಸ್ ಹತೋಟಿಗೆ ಬಂದು ರಾಜ್ಯದಲ್ಲಿ ಮೊದಲಿನಂತೆ ವ್ಯಾಪಾರ ವಹಿವಾಟು ಆಗಲಿದ್ದು, ಅನಿವಾರ್ಯವಾಗಿ ಜಾತ್ರೆಗಳನ್ನು ಸ್ಥಗಿತ ಮಾಡಬೇಕಾಗಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *