Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಹೆಚ್ಚಾಯ್ತು ಮಂಗನ ಕಾಯಿಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಹೆಚ್ಚಾಯ್ತು ಮಂಗನ ಕಾಯಿಲೆ

Districts

ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಹೆಚ್ಚಾಯ್ತು ಮಂಗನ ಕಾಯಿಲೆ

Public TV
Last updated: March 19, 2020 8:10 pm
Public TV
Share
2 Min Read
Vishweshwar Hegde Kageri
SHARE

– ಊರು ಬಿಟ್ಟು ಹೋದ ಮಂಗನ ಕಾಯಿಲೆ ಸೋಂಕಿತರು

ಕಾರವಾರ: ಕೊರೊನಾ ವೈರಸ್‍ಗೆ ರಾಜ್ಯದ ಜನ ಭಯಗೊಂಡಿದ್ದರೆ ಇತ್ತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ.

ಹೌದು. ಉತ್ತರ ಕನ್ನಡ ಜಿಲ್ಲೆಯ ಜನರೀಗ ಕೆ.ಎಫ್.ಡಿ ವೈರಸ್‍ಗೆ ಭಯಪಟ್ಟು ಊರು ತೊರೆಯುತಿದ್ದಾರೆ. ವಿಧಾನಸಭಾ ಸ್ಪೀಕರ್ ಕಾಗೇರಿಯವರ ಸ್ವಕ್ಷೇತ್ರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಾಳಗೋಡು, ಮಳಗುಳಿ, ಹನುಮನಜಡ್ಡಿ, ಹೊನ್ನೆಗಟಗಿ, ತ್ಯಾಗಲಿಗಳಲ್ಲಿ 200ಕ್ಕೂ ಹೆಚ್ಚು ಮಂಗಗಳು ಈ ವರ್ಷ ಸಾವನ್ನಪ್ಪಿದ್ದು ಇವುಗಳಲ್ಲಿ ಹಲವು ಮಂಗಗಳಲ್ಲಿ ಕೆ.ಎಫ್.ಡಿ ವೈರಸ್ ಪತ್ತೆಯಾಗಿದೆ.

Karwar Monkey disease

ಈ ವೈರಸ್ ಜನರಿಗೂ ಹಬ್ಬುತ್ತಿದ್ದು ಈ ಗ್ರಾಮದಲ್ಲಿ ಈಗಾಗಲೇ 11 ಜನರಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. ಇದೇ ತಿಂಗಳಲ್ಲಿ ಮಳಗುಳಿ ಗ್ರಾಮದ ಭಾಸ್ಕರ್ ಗಣಪತಿ ಹೆಗಡೆ ಎಂಬುವವರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದರು. ಕಳೆದ ವರ್ಷ ಜಿಲ್ಲೆಯಲ್ಲಿ 87 ಪ್ರಕರಣಗಳು ವರದಿಯಾಗಿದ್ದು, ಸಿದ್ದಾಪುರ ತಾಲೂಕಿನಲ್ಲಿಯೇ 15 ಜನರಿಗೆ ಮಂಗನಕಾಯಿಲೆ ಬಂದಿದ್ದು, ಇದರಲ್ಲಿ ಆರು ಜನರು ಸಾವನ್ನಪ್ಪಿದ್ದರು. ಹೀಗಾಗಿ ಸಿದ್ದಾಪುರ ತಾಲೂಕಿನ ಮಂಗನಕಾಯಿಲೆ ಪೀಡಿತ ಪ್ರದೇಶವಾದ ಬಾಳಗೋಡು ಸೇರಿದಂತೆ ಹಲವು ಗ್ರಾಮದಲ್ಲಿ ಜನರು ಮನೆ ಬಿಡುತಿದ್ದು ಊರಿನಲ್ಲಿ ಬಿಕೋ ಎನ್ನುತ್ತಿದೆ.

Karwar Monkey disease 2

ಸಿದ್ದಾಪುರ ಭಾಗದಲ್ಲಿ ಚಿಕಿತ್ಸೆ ನೀಡಲು ವೈದ್ಯರ, ಸಿಬ್ಬಂದಿ ಕೊರತೆ ಎದುರಾಗಿದೆ. ಜೊತೆಗೆ ಇಲ್ಲಿ ಕೆಲಸ ಮಾಡಲು ಸಿಬ್ಬಂದಿ ಕೂಡ ಮುಂದೆ ಬರುತ್ತಿಲ್ಲ ಹೀಗಾಗಿ ಆರೋಗ್ಯ ಇಲಾಖೆ ಸಹ ತೊಂದರೆ ಅನುಭವಿಸುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲು ತೊಡಕಾಗಿದೆ ಎಂಬುದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

ಕಾಗೇರಿಯವರೇ ನಮ್ಮ ನೋವು ಕೇಳಿ
ವಿಧಾನಸಭಾ ಸ್ಪೀಕರ್ ಸ್ವಕ್ಷೇತ್ರದಲ್ಲಿಯೇ ಅತೀ ಹೆಚ್ಚು ಮಂಗನಕಾಯಿಲೆ ಪ್ರಕರಣ ಪತ್ತೆಯಾಗುತ್ತಿದ್ದು ಜನರು ಊರು ಬಿಡುತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಸಹ ಈ ಪ್ರದೇಶದಲ್ಲಿ ಕೆಲಸ ಮಾಡಲು ಹೆದರುತ್ತಿದ್ದಾರೆ. ಆದರೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಹಾಗೂ ಕಳೆದ ವರ್ಷ ಮರಣ ಹೊಂದಿದ ಜನರಿಗೆ ಪರಿಹಾರ ಕೊಡಿಸಲು ಸ್ಪೀಕರ್ ಕಾಗೇರಿ ಎಡವಿದ್ದಾರೆ. ಈವರೆಗೂ ಕ್ಷೇತ್ರಕ್ಕೆ ಬರುವುದಿರಲಿ ಇದರ ಬಗ್ಗೆ ಗಮನ ಹರಿಸುವ ಗೋಜಿಗೆ ಹೋಗದೇ ತಮ್ಮ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karwar Monkey disease 3

ಕಳೆದ ವರ್ಷ ಸಾವನ್ನಪ್ಪಿದ ಯಾವೊಬ್ಬರಿಗೂ ಈವರೆಗೂ ಪರಿಹಾರ ಬಂದಿಲ್ಲ. ಇನ್ನು ಆರೋಗ್ಯ ಇಲಾಖೆ ಹಲವು ಕಾರಣಗಳಿಗೆ ಆರು ಜನರನ್ನು ಮಾತ್ರ ದಾಖಲೆಯಲ್ಲಿ ತೋರಿಸಿದ್ದು ಉಳಿದವರನ್ನು ಮಾತ್ರ ದಾಖಲೆಗಳಲ್ಲಿ ತೋರಿಸಿಲ್ಲ. ಇದಲ್ಲದೇ ಪಕ್ಕದ ಜಿಲ್ಲೆ ಶಿವಮೊಗ್ಗದಲ್ಲಿ ಮಂಗನ ಕಾಯಿಲೆಯಿಂದ ಸತ್ತವರಿಗೆ ಪರಿಹಾರ ಬಂದಿದೆ. ಆದರೆ ವಿಧಾನಸಭಾ ಸ್ಪೀಕರ್ ಸ್ವಕ್ಷೇತ್ರಕ್ಕೆ ಈ ಭಾಗ್ಯ ಇಲ್ಲ. ಕೊನೆ ಪಕ್ಷ ಸ್ಪೀಕರ್ ರವರು ತಮ್ಮ ಕ್ಷೇತ್ರಕ್ಕೆ ಬಂದು ಇರುವ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳಲಿ ಎಂಬುದು ಮಂಗನಕಾಯಿಲೆಯಿಂದ ಬಳಲುತ್ತಿರುವ ಗ್ರಾಮಸ್ಥರು ಅಗ್ರಹಿಸಿದ್ದಾರೆ.

Karwar Monkey disease 4

ಒಂದೆಡೆ ಸಿಬ್ಬಂದಿಗಳ ಕೊರತೆ ಮತ್ತೊಂದೆಡೆ ಈ ಹಳ್ಳಿಗಳಲ್ಲಿ ಕೆಲಸ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಮನಸ್ಸು ಮಾಡದಿರುವುದು. ಜೊತೆಯಲ್ಲಿ ಜನರಲ್ಲಿ ಮಂಗನಕಾಯಿಲೆ ಕುರಿತು ಜಾಗೃತಿ ಮೂಡಿಸಲು ವಿಫಲವಾಗಿರುವುದರಿಂದ ಕಾಯಿಲೆ ಮತ್ತಷ್ಟು ಹೆಚ್ಚಲು ಕಾರಣವಾಗಿದೆ. ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕಾಯಿಲೆ ಉಲ್ಭಣವಾಗುತ್ತಿದೆ. ತಕ್ಷಣ ಈ ಬಗ್ಗೆ ಸರ್ಕಾರ ಗಮನಹರಿಸಿ ಕ್ರಮ ಕೈಗೊಳ್ಳದಿದ್ದರೆ ಮತ್ತಷ್ಟು ಜನರ ಬಲಿಯಾಗಲಿದ್ದು ತಕ್ಷಣ ಹೆಚ್ಚಿನ ಕ್ರಮ ಕೈಗೊಳ್ಳಬೇಕಿದೆ.

TAGGED:karwarMonkey DiseasePublic TVReliefspeakervillagersVishweshwar Hegde Kageriಕಾರವಾರಗ್ರಾಮಸ್ಥರುಪಬ್ಲಿಕ್ ಟಿವಿಪರಿಹಾರಮಂಗನ ಕಾಯಿಲೆವಿಶ್ವೇಶ್ವರ ಹೆಗಡೆ ಕಾಗೇರಿಸ್ಪೀಕರ್
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories

You Might Also Like

Supreme Court
Karnataka

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
44 minutes ago
surya kumar yadav axar patel
Cricket

ಪಾಕ್‌ ಬಹಿಷ್ಕಾರ ಹಾಕಿದ್ರೂ ಲಂಕಾಗೆ ತೆರಳಲಿದೆ ಟೀಂ ಇಂಡಿಯಾ!

Public TV
By Public TV
1 hour ago
gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
2 hours ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
2 hours ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?