ರಾಜ್ಯದಲ್ಲಿ ಕೊರೊನಾ ಅಟ್ಟಹಾಸ – ಧನಸಹಾಯಕ್ಕೆ ಸಿಎಂ ಮನವಿ

Public TV
1 Min Read
CM BSY

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನೇ ದಿನೇ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಧನಸಹಾಯ ಮಾಡುವಂತೆ ದಾನಿಗಳಿಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಸರ್ಕಾರದ ಜೊತೆ ಕೈಜೋಡಿಸಿ ಎಂದು ದಾನಿಗಳಿಗೆ ಸಿಎಂ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಪರಿಹಾರನಿಧಿ ಕೊವಿಡ್-19 ಹೆಸರಿನ ಖಾತೆಗೆ ಧನಸಹಾಯಕ್ಕೆ ಮನವಿ ಮಾಡಲಾಗಿದೆ. ಧನಸಹಾಯ ಮಾಡಲಿ ಇಚ್ಛಿಸುವವರು ಖಾತೆ ಸಂಖ್ಯೆ-39234923151 ಹಾಗೂ ಐಎಫ್‍ಎಸ್‍ಸಿ ಕೋಡ್ – ಎಸ್‍ಬಿಐಎನ್0040277 ಹಣ ಹಾಕಬಹುದು ಎಂದು ಕೇಳಿಕೊಳ್ಳಲಾಗಿದೆ.

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೇ ರಾಜ್ಯದಲ್ಲಿ ಜಾಸ್ತಿಯಾಗುತ್ತಿದೆ. ಇಂದು ಈ ವಿಚಾರವಾಗಿ ಮಾತನಾಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಇಂದು ಒಂದೇ ದಿನ ಹತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮಂಗಳವಾರ 41 ಇದ್ದ ಸಂಖ್ಯೆ ಇಂದು 51ಕ್ಕೆ ಏರಿಕೆಯಾಗಿದೆ. ಹಾಗಾಗಿ ಕೊರೊನಾ ವೈರಸ್ ತಡೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗದುಕೊಳ್ಳುತ್ತಿದೆ. ಇದಕ್ಕೆ ಜನರು ಸಹಕರಿಸಬೇಕು ಎಂದು ಕೇಳಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *