ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಲೈಸೆನ್ಸ್ ರದ್ದು – ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ

Public TV
1 Min Read
HVR B..PATIL

ಹಾವೇರಿ: ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಗಿ ರದ್ದು ಪಡಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹಾವೇರಿ ನಗರಸಭಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು ಆರೋಗ್ಯದ ದೃಷ್ಟಿಯಿಂದ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವುದು ಆರೋಗ್ಯ, ವೈದ್ಯಕೀಯ, ಗೃಹ ಈ ಇಲಾಖೆಗಳದ್ದಷ್ಟೇ ಕೆಲಸ ಎಂದು ಭಾವಿಸದೆ ಜನರು ಈ ಬಗ್ಗೆ ಸ್ವಯಂಪ್ರೇರಿತರಾಗಿ ಜಾಗೃತರಾಗುವುದು ಮುಖ್ಯ ಎಂದು ಕರೆ ನೀಡಿದರು.

HVR 8

ಖಾಸಗಿ ವೈದ್ಯರು ಮೆಡಿಕಲ್ ಶಾಪ್, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ. ಒಂದು ವೇಳೆ ಸರ್ಕಾರದ ನೊಟೀಸ್‍ಗೂ ಬೆಲೆಕೊಡದೆ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಗಿ ರದ್ದು ಪಡಿಸಲಾಗುವುದು ಎಂದು ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಿಂದ ಹೊರಬರಬೇಡಿ. ನಮ್ಮ ನಮ್ಮ ಮನೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವ-ದಿಗ್ಬಂಧನ ಹಾಕಿಕೊಳ್ಳುವ ಮೂಲಕ ನಮ್ಮ ಹಾಗೂ ನಮ್ಮ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಆರೋಗ್ಯ ಕಾಪಾಡಲು ಬದ್ಧರಾಗಿದ್ದು, ಜನತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕರಿಸಬೇಕು. ಅನಾವಶ್ಯಕ ಮನೆಯಿಂದ ಹೊರಬರಬೇಡಿ, ಅನಿವಾರ್ಯತೆ ಇದ್ದಲ್ಲಿ ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಿಂದ ಹೊರಬರಬೇಕು ಎಂದು ಮನವಿ ಮಾಡಿದರು.

6ef67ae6 defd 4770 a0ae a01178ae1fc2

ಈಗಾಗಲೇ ಅತಿ ಅವಶ್ಯಕ ವಸ್ತುಗಳಾದ ದಿನಸಿ, ತರಕಾರಿ, ಹಣ್ಣು-ಹಂಪಲುಗಳನ್ನು ವಾರ್ಡ್ ವಾರು ತಳ್ಳುವಗಾಡಿಯ ಮೂಲಕ ಮಾರಲು ಅನುಕೂಲ ಮಾಡಿಕೊಡಲಾಗಿದೆ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದರು.

ಬಿ.ಸಿ.ಪಾಟೀಲ್ ಇಂದು ಜಿಲ್ಲೆಯ ಹಿರೇಕೆರೂರು ನಗರ, ರಾಣೆಬೆನ್ನೂರು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆ, ಹಾವೇರಿ ಎಪಿಎಂಸಿ ಸೇರಿದಂತೆ ಹಲವೆಡೆ ಭೇಟಿ ನೀಡಿದ್ದರು. ಅಲ್ಲದೇ ಕೊರೊನಾ ಬಗ್ಗೆ ಜನತೆಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಹಾವೇರಿ ಶಾಸಕ ನೆಹರು ಓಲೇಕಾರ್, ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಉಪಸ್ಥಿತರಿದ್ದರು.

HVR 1 1

Share This Article
Leave a Comment

Leave a Reply

Your email address will not be published. Required fields are marked *