Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ ಬಡವರಿಗೆ ಉಚಿತವಾಗಿ ಹಾಲು ವಿತರಣೆ: ಸಿಎಂ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆಯಿಂದ ಬಡವರಿಗೆ ಉಚಿತವಾಗಿ ಹಾಲು ವಿತರಣೆ: ಸಿಎಂ ಘೋಷಣೆ

Bengaluru City

ನಾಳೆಯಿಂದ ಬಡವರಿಗೆ ಉಚಿತವಾಗಿ ಹಾಲು ವಿತರಣೆ: ಸಿಎಂ ಘೋಷಣೆ

Public TV
Last updated: April 1, 2020 12:54 pm
Public TV
Share
2 Min Read
CM
SHARE

ಬೆಂಗಳೂರು: ಗುರುವಾರದಿಂದ ಬಡವರಿಗೆ ಏಪ್ರಿಲ್ 14 ರವರೆಗೂ ಉಚಿತವಾಗಿ ಹಾಲು ವಿತರಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆಯ ಬಳಿಕ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಲಾಕ್‍ಡೌನ್‍ನಿಂದ ಬಡವರಿಗೆ, ಕೃಷಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ನಿನ್ನೆಯ ಸನ್ನಿವೇಶ ಬೇರೆ, ಇವತ್ತಿನ ಸನ್ನಿವೇಶ ಬೇರೆ. ಜನಕ್ಕೆ ಇವತ್ತಿಂದ ಇನ್ನಷ್ಟು ಸಡಿಲತೆ ಮಾಡಲಾಗುತ್ತಿದೆ. ಲಾಕ್‍ಡೌನ್‍ನಿಂದ ಸಾಮಾನ್ಯರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ನಾಳೆಯಿಂದ ಸ್ಲಂಗಳಲ್ಲಿರುವ ಬಡವರಿಗೆ ಉಚಿತವಾಗಿ ಹಾಲು ವಿತರಣೆ ಮಾಡಬೇಕು. ಎಲ್ಲ ಜಿಲ್ಲೆಗಳಲ್ಲೂ ಬಡವರಿಗೆ ಏಪ್ರಿಲ್ 14 ರವರೆಗೆ ಉಚಿತ ಹಾಲು ವಿತರಣೆ ಮಾಡಬೇಕು ಎಂದು ಸಿಎಂ ಘೋಷಣೆ ಮಾಡಿದರು.

Milk

ಸರಕು ಸಾಗಣೆ ವಾಹನಗಳನ್ನು ತಡೆಯುತ್ತಿಲ್ಲ. ಸರಕು ಸಾಗಣೆ ವಾಹನಗಳನ್ನು ತಡೆಯದಂತೆ ಪೊಲೀಸರಿಗೂ ಸೂಚಿಸಿದ್ದೇವೆ. ಒಂದು ವೇಳೆ ವಾಹನಗಳನ್ನು ತಡೆದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಇದೆ. ಅಗತ್ಯ ವಸ್ತುಗಳು, ತರಕಾರಿ, ಹಣ್ಣಿನ ಮಾರಾಟಕ್ಕೆ ಯಾವುದೇ ಭಂಗ ಇಲ್ಲ. ಈ ಸಭೆಯಲ್ಲಿ ರೈತರು ಮತ್ತು ಗ್ರಾಹಕರ ಹಿತ ಕಾಪಾಡಲು ಕೆಲ ತೀರ್ಮಾನ ಕೈಗೊಳ್ಳಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕದಿಂದ ರಫ್ತಾಗುತ್ತಿರುವ ಹಣ್ಣು, ತರಕಾರಿಗಳ ವಾಹನಗಳಿಗೆ ತಡೆ ಒಡ್ಡಬಾರದು. ಹಾಪ್‌ಕಾಮ್ಸ್‌ಗಳನ್ನು ಇಡೀ ದಿನ ತೆರೆದಿರಲು ಸೂಚನೆ ನೀಡಲಾಗಿದೆ. ಜೊತೆಗೆ ತರಕಾರಿ, ಹಣ್ಣು, ಮಾರಾಟಕ್ಕೆ ಹಾಪ್‌ಕಾಮ್ಸ್‌ನಲ್ಲಿ ಅವಕಾಶ ಮಾಡಲಾಗಿದೆ. ಕೋಳಿ ಮೊಟ್ಟೆಗಳನ್ನೂ ಸಹ ಹಾಪ್‌ಕಾಮ್ಸ್‌ನಲ್ಲಿ ಮಾರಾಟಕ್ಕೆ ಅವಕಾಶ ಮಾಡಲಾಗಿದೆ. ಟ್ರೈನ್‍ಗಳಲ್ಲಿ ಹೊರ ರಾಜ್ಯಗಳಿಗೆ ಹಣ್ಣು, ತರಕಾರಿ ಸಾಗಣೆಗೂ ಅವಕಾಶ ಕಲ್ಪಿಸಲಾಗಿದೆ. ಜನ ನಿತ್ಯ ಹಣ್ಣು, ತರಕಾರಿ ಖರೀದಿಸಬಹುದು. ಆದರೆ ಜನರು ಒಮ್ಮೆಲೆ ಹೆಚ್ಚು ಖರೀದಿಸುವ ಅಗತ್ಯ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಶ್ರೀ @BSYBJP ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳನ್ನು ನಿವಾರಿಸಲು ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಸಚಿವರಾದ ಬಿ ಸಿ ಪಾಟೀಲ್, ನಾರಾಯಣಗೌಡ, ಎಸ್ ಟಿ ಸೋಮಶೇಖರ್, ಆರ್ ಅಶೋಕ್, ಕೆ ಗೋಪಾಲಯ್ಯ ಉಪಸ್ಥಿತರಿದ್ದರು.#KarnatakaFightsCorona #IndiaFightsCoronavirus pic.twitter.com/uU0ZCt3K1f

— CM of Karnataka (@CMofKarnataka) April 1, 2020

ಒಂದೇ ವೇಳೆ ತರಕಾರಿ, ಹಣ್ಣುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಿದರೆ ಅಂತಹರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ. ಕೃಷಿ ಉತ್ಪನ್ನಗಳ ಸಾಗಾಣಿಕೆ ಅವಕಾಶ ಇದ್ದರೆ ಬೇಡಿಕೆ ಅಭಾವ ಕಡಿಮೆಯಾಗಲಿದೆ. ರೇಷ್ಮೆ ಮಾರುಕಟ್ಟೆ, ಅಕ್ಕಿ, ದಾಲ್ ಮಿಲ್‍ಗಳನ್ನು ತೆರೆಯಲು ಸೂಚಿಸಲಾಗಿದೆ.

ಇವತ್ತಿನಿಂದ ಮುಂಗಡ ಪಡಿತರ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ರೈತರ ಬೆಳೆಗಳಿಗೆ ಉತ್ತಮ ದರ ಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಜೊತೆ ವಿಧವಾ ವೇತನ, ವೃದ್ಧಾಪ್ಯ ವೇತನಗಳಿಗೆ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಪೆನ್ಷನ್‍ಗಳನ್ನು ತಕ್ಷಣ ಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.

#ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡುತ್ತೇನೆ.#KarnatakaFightsCorona #COVID19 pic.twitter.com/DAeOTDo6Z1

— B.S.Yediyurappa (@BSYBJP) April 1, 2020

ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೃಷಿಕರಿಗೆ ಸಮಸ್ಯೆಗಳ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಕೃಷಿ ಸಚಿವ ಬಿ.ಸಿ ಪಾಟೀಲ್, ಸಹಕಾರ ಇಲಾಖೆ ಸಚಿವ ಎಸ್.ಟಿ ಸೋಮಶೇಖರ್, ತೋಟಗಾರಿಕೆ ಇಲಾಖೆ ಸಚಿವ ನಾರಾಯಣ ಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಕಂದಾಯ ಸಚಿವ ಆರ್.ಅಶೋಕ್ ಮತ್ತು ಆಹಾರ ಸಚಿವ ಗೋಪಾಲಯ್ಯ ಭಾಗಿಯಾಗಿದ್ದರು.

 

TAGGED:bengalurucm yeddyurappaCorona VirusFreemilkPublic TVಉಚಿತಕೊರೊನಾ ವೈರಸ್ಪಬ್ಲಿಕ್ ಟಿವಿಬೆಂಗಳೂರುಸಿಎಂ ಯಡಿಯೂರಪ್ಪಹಾಲು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
4 hours ago
01 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-1

Public TV
By Public TV
5 hours ago
02 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-2

Public TV
By Public TV
5 hours ago
03 19
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-3

Public TV
By Public TV
5 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
5 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?