ಪ್ರೀತಿಸಿ, ಓಡಿ ಹೋಗಿ ಮದ್ವೆ – ಲಾಕ್‍ಡೌನ್‍ನಿಂದ ಗ್ರಾಮಕ್ಕೆ ಬಂದ ಅಳಿಯನ ಕೊಲೆ

Public TV
1 Min Read
LOVE 3

– ಮಗಳ ಪತಿಯನ್ನೇ ಕೊಂದ ಮಾವ

ಚೆನ್ನೈ: ರಹಸ್ಯವಾಗಿ ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಮಗಳ ಪತಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಎಂ.ಸುಧಾಕರ್ ಕೊಲೆಯಾದ ಯುವಕ. ಬೇರೆ ಜಾತಿಯಾದ ಕಾರಣ ಸುಧಾಕರ್ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆ ಮತ್ತು ಸೋದರ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮೂರ್ತಿ (45) ಮತ್ತು ಕೆ.ಕಥಿರಾವನ್ (26) ಎಂದು ಗುರುತಿಸಲಾಗಿದೆ.

the flip side of love

ಏನಿದು ಪ್ರಕರಣ?
ಮೃತ ಸುಧಾಕರ್ 19 ವರ್ಷದ ಹುಡುಗಿಯನ್ನು ಪ್ರೀತಿಸುತ್ತಿದ್ದನು. ಆರು ತಿಂಗಳ ನಂತರ ಇಬ್ಬರೂ ಮನೆಬಿಟ್ಟು ಓಡಿಹೋಗಿದ್ದು, ವಾಲಜಾಪೇಟೆಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ನಂತರ 10 ದಿನಗಳ ಕಾಲ ಮನೆ ಬಾಡಿಗೆಗೆ ಪಡೆದು ವಾಸ ಮಾಡುತ್ತಿದ್ದರು. ಆದರೆ ಇಬ್ಬರು ತಮ್ಮ ಮದುವೆಯನ್ನು ರಿಜಿಸ್ಟರ್ ಮಾಡಿಸಿರಲಿಲ್ಲ.

marriage 768x447 1

ಇತ್ತ ಹುಡುಗಿಯ ಕುಟುಂಬದವರು ಇಬ್ಬರನ್ನು ಪತ್ತೆ ಹಚ್ಚಿದ್ದಾರೆ. ನಂತರ ಸ್ಥಳೀಯ ಪಂಚಾಯಿತಿ ಮೂಲಕ ಇಬ್ಬರನ್ನ ಬೇರೆ ಬೇರೆ ಮಾಡಿದ್ದಾರೆ. ಅಲ್ಲದೇ ಸುಧಾಕರ್‌ಗೆ ಬೆದರಿಕೆ ಕೂಡ ಹಾಕಿದ್ದಾರೆ. ಕೊನೆಗೆ ಸುಧಾಕರ್ ತನ್ನ ಪ್ರಾಣಕ್ಕೆ ಹೆದರಿ ಚೆನ್ನೈಗೆ ಓಡಿ ಹೋಗಿದ್ದನು. ಆದರೆ ಇಡೀ ದೇಶಾದ್ಯಂತ ಕೊರೊನಾ ವೈರಸ್ ಹಬ್ಬಿದ ಕಾರಣ ಲಾಕ್‍ಡೌನ್ ಮಾಡಲಾಗಿತ್ತು. ಕೊನೆಗೆ ಸುಧಾಕರ್ ಒಂದು ವಾರದ ಹಿಂದೆ ತನ್ನ ಗ್ರಾಮಕ್ಕೆ ಬಂದಿದ್ದನು. ಇದೇ ವೇಳೆ ಹುಡುಗಿಯ ತಂದೆ ಮೂರ್ತಿ ಮತ್ತು ಸೋದರ ಸಂಬಂಧಿ ಸೇರಿಕೊಂಡು ಸುಧಾಕರ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

police 1 1

ಸುಧಾಕರ್ ಮತ್ತು ಹುಡುಗಿ ಬೇರೆ ಬೇರೆ ಜಾತಿಯವರಾಗಿದ್ದು, ಓಡಿ ಹೋಗಿ ಮದುವೆಯಾಗಿದ್ದಕ್ಕೆ ಕುಟುಂಬದವರು ಕೋಪ ಮಾಡಿಕೊಂಡಿದ್ದಾರೆ. ಆದ್ದರಿಂದಲೇ ಸುಧಾಕರ್‌ನನ್ನು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸದ್ಯಕ್ಕೆ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *