– ಜಮಾತ್ಗೆ ಬಂದವರು ಹೆಲ್ತ್ ಸೆಂಟರ್ಗೆ ತೆರಳಿ
ನವದೆಹಲಿ: ಕೊರೊನಾ ವಿರುದ್ಧ ಹೋರಾಟದಲ್ಲಿ ನಾವು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ, ಸರ್ಕಾರದ ನಿಯಮಗಳನ್ನು ನಾವು ಪಾಲಿಸುತ್ತೇವೆ. ಜಮಾತ್ಗೆ ಬಂದವರು ಹೆಲ್ತ್ ಸೆಂಟರ್ ಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಿ ಎಂದು ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ ಮನವಿ ಮಾಡಿದ್ದಾರೆ.
ಘಟನೆ ಬಳಿಕ ಹೋಂ ಕ್ವಾರಂಟೈನ್ನಲ್ಲಿರುವ ಅವರು ತಮ್ಮ ಅನುಯಾಯಿಗಳಿಗೆ ಆಡಿಯೋ ಸಂದೇಶವನ್ನು ರವಾನಿಸಿದ್ದಾರೆ. ಆಡಿಯೋದಲ್ಲಿ ಮಾತನಾಡಿರುವ ಅವರು, ನಿಜಾಮುದ್ದಿನ್ ಘಟನೆ ಬಳಿಕ ನನ್ನ ಮೇಲೆ ದೂರು ದಾಖಲಾಗಿದೆ ನಾನು ತಲೆ ಮರೆಸಿಕೊಂಡಿದ್ದೇನೆ ಎಂದು ವರದಿಯಾಗಿದೆ. ಆದರೆ ಅದೆಲ್ಲವೂ ಸುಳ್ಳು ನಾನು ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ನಲ್ಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದಲ್ಲದೇ ಕೊರೊನಾ ವಿರುದ್ಧ ಹೋರಾಟದಲ್ಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಕುಟುಂಬದ ಮತ್ತು ದೇಶದ ಒಳಿತಿಗಾಗಿ ನಾವು ಎಲ್ಲರೂ ಸಹಕರಿಸಬೇಕು ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಜಮಾತ್ಗೆ ಬಂದವರು ಹೆಲ್ತ್ ಸೆಂಟರ್ ಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ.