Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

Public TV
Last updated: April 5, 2020 4:55 pm
Public TV
Share
2 Min Read
Kevin Pietersen
SHARE

ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ತೊಂದರೆಗೆ ಸಿಲುಕಿದೆ. ಆದರೆ ಏನೇ ಆದರೂ ಈ ಬಾರಿಯ ಟೂರ್ನಿ ನಡೆಯಲೇ ಬೇಕು ಅಂತ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಟೂರ್ನಿ ನಡೆಸುವ ಬಗ್ಗೆ ಸಲಹೆ ಕೂಡ ನೀಡಿದ್ದಾರೆ.

ಖಾಲಿ ಮೈದಾನ, ಕ್ರಿಕೆಟ್ ಅಭಿಮಾನಿಗಳಿಲ್ಲದ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿಯೇ ಟೂರ್ನಿ ನಡೆಸಬೇಕು. ಇದರಿಂದ ಪ್ರೇಕ್ಷಕರ ಜೀವಕ್ಕೆ ಯಾವುದೇ ಅಪಾಯವಿಲ್ಲ ಇರುವುದಿಲ್ಲ ಎಂದು ಪಿಟರ್ಸನ್ ಸಲಹೆ ನೀಡಿದ್ದಾರೆ.

collage bcci ipl

ಐಪಿಎಲ್ ಟೂರ್ನಿ ಮೂರು ಅಥವಾ ನಾಲ್ಕು ವಾರಗಳಲ್ಲಿ ಕೊನೆಗೊಳ್ಳಬೇಕು. ಹೀಗಾಗಿ ಈ ಬಾರಿ ಐಪಿಎಲ್‍ನ ಸ್ವರೂಪವೂ ಚಿಕ್ಕದಾಗಿರಬೇಕು ಎಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

ಕೊರೊನಾ ವೈರಸ್ ಹಾಗೂ ವಿದೇಶಿ ಆಟಗಾರರಿಗೆ ವೀಸಾ ನಿರ್ಬಂಧದಿಂದಾಗಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರಿಂದ ಏಪ್ರಿಲ್ 15ರವರೆಗೆ ಮುಂದೂಡಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಬೇಕಿತ್ತು.

ipl

“ಜುಲೈ-ಆಗಸ್ಟ್‍ನಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಬೇಕು. ಐಪಿಎಲ್‍ನ 13ನೇ ಆವೃತ್ತಿಯನ್ನು ಸಹ ನಡೆಸಬೇಕು ಎಂದು ಬಯಸುತ್ತೇನೆ. ವಿಶ್ವದ ಪ್ರತಿಯೊಬ್ಬ ಆಟಗಾರನೂ ಇದನ್ನೇ ಬಯಸುತ್ತಿದ್ದಾರೆ. ಅವರು ಸಹ ಟೂರ್ನಿಯಲ್ಲಿ ಆಡಲೇಬೇಕು ಎನ್ನುವ ಇಚ್ಛೆಯನ್ನು ಹೊಂದಿದ್ದಾರೆ. ಆಟಗಾರರು ಮತ್ತು ಫ್ರಾಂಚೈಸಿಗಳ ಜೊತೆಗೆ ತೆರೆಮರೆಯಲ್ಲಿ ಕೆಲಸ ಮಾಡುವವರಿಗೆ ಐಪಿಎಲ್ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಫ್ರ್ಯಾಂಚೈಸಿ ಸ್ವಲ್ಪ ಹಣವನ್ನು ಉಳಿಸುವ ಮಾರ್ಗವನ್ನು ಸಹ ಕಂಡುಕೊಳ್ಳಬೇಕು. ಉದಾಹರಣೆಗೆ ಎಲ್ಲಾ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತದೆ. ಹೀಗಾಗಿ ಟೂರ್ನಿಯನ್ನು ಮೂರು ಅಥವಾ ನಾಲ್ಕು ವಾರಗಳಿಗೆ ಕಡಿತಗೊಳಿಸಬಹುದು” ಎಂದು ಸಲಹೆ ನೀಡಿದ್ದಾರೆ.

rcb csk 2

ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಕೂಡ ಐಪಿಎಲ್‍ನ ಮಹತ್ವವನ್ನು ವ್ಯಕ್ತಪಡಿಸಿದ್ದಾರೆ. ಪೀಟರ್ಸನ್ ಅವರ ಸಲಹೆಗೆ ಸಹಮತ ನೀಡಿರುವ ಮಂಜ್ರೇಕರ್, ಸರ್ಕಾರ, ಮಂಡಳಿ ಮತ್ತು ಫ್ರಾಂಚೈಸಿಗಳು ಸೇರಿದಂತೆ ಇತರ ಎಲ್ಲಾ ಸಂಬಂಧಿತ ಸಂಸ್ಥೆಗಳಿಂದ ಒಪ್ಪಿಗೆ ಪಡೆದು ಐಪಿಎಲ್ ನಡೆಸಬೇಕು. ಇದು ವಿಶೇಷ ಆರ್ಥಿಕತೆಯನ್ನು ಸಹ ಪ್ರಾರಂಭಿಸುತ್ತದೆ. ಏಕೆಂದರೆ ಈ ಟೂರ್ನಿ ನಡೆಬೇಕಾಗಿರುವುದು ಮುಂಬೈ ಇಂಡಿಯನ್ಸ್, ಎಂ.ಎಸ್.ಧೋನಿ ಅಥವಾ ವಿರಾಟ್ ಕೊಹ್ಲಿ ಅವರಿಗಾಗಿ ಅಷ್ಟೇ ಅಲ್ಲ. ಐಪಿಎಲ್‍ನಿಂದ ಉದ್ಯೋಗ ಪಡೆಯುವವರಿಗೆ ಟೂರ್ನಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಜಸ್ಟಿನ್ ಲ್ಯಾಂಗರ್, ನೀವು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ ನಿಮ್ಮ ಮುಂದೆ ಜನಸಂದಣಿ ಇರುತ್ತಿರಲಿಲ್ಲ. ಆಗಲೇ ಕ್ರಿಕೆಟ್ ಆಡಿದ್ದೀರಿ. ಏಕೆಂದರೆ ನೀವು ಆಟವನ್ನು ಇಷ್ಟಪಡುತ್ತೀರಿ. ನಿಮ್ಮ ತಂಡದ ಆಟಗಾರರೊಂದಿಗೆ ಆಡಲು ಇಷ್ಟಪಡುತ್ತೀರಿ. ಈ ಆಟದ ಪ್ರೀತಿಯಿಂದಾಗಿ ಇಂದು ಹೆಚ್ಚಿನ ಜನರು ಟಿವಿ ಮಾಧ್ಯಮ ಮತ್ತು ರೇಡಿಯೋ ಮೂಲಕ ಜನರನ್ನು ರಂಜಿಸಲು ಸಮರ್ಥರಾಗಿದ್ದೀರಿ. ಇದಕ್ಕಾಗಿಯೇ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸುವುದು ಮುಖ್ಯವಾಗಿದೆ. ಇದು ಸ್ವಲ್ಪ ವಿಭಿನ್ನವಾಗಿರುತ್ತದೆ. ಆದರೆ ನಾವೆಲ್ಲರೂ ಎಷ್ಟು ಅದೃಷ್ಟವಂತರು ಎಂಬುದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ.

TAGGED:CoronaviruscricketIPLIPL 2020Justin LangerKevin PietersenPublic TVSanjay Manjrekarಇಂಗ್ಲೆಂಡ್ಐಪಿಎಲ್ಕೆವಿನ್ ಪೀಟರ್ಸನ್ಕೊರೊನಾ ವೈರಸ್ಕ್ರಿಕೆಟರ್ಜಸ್ಟಿನ್ ಲ್ಯಾಂಗರ್ಪಬ್ಲಿಕ್ ಟಿವಿಸಂಜಯ್ ಮಂಜ್ರೇಕರ್
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
3 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
16 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
19 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
22 hours ago

You Might Also Like

Janardhana Reddy 2
Bellary

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

Public TV
By Public TV
8 minutes ago
Kerala Cargo Ship Fire
Crime

ಕೇರಳ ಕರಾವಳಿಯಲ್ಲಿ ಹಡಗು ಅಗ್ನಿ ದುರಂತ – ಬೆಂಕಿ ತಗುಲಿ 48 ಗಂಟೆ ಕಳೆದ್ರೂ ಆರದ ಬೆಂಕಿಯ ಜ್ವಾಲೆ

Public TV
By Public TV
10 minutes ago
Ballari Tukaram
Bellary

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

Public TV
By Public TV
58 minutes ago
rain weather
Bengaluru City

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
2 hours ago
Meghalaya Honeymoon
Latest

ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?