Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು 12 ಹೊಸ ಪ್ರಕರಣ – ಜಮಾತ್‍ಗೆ ಹೋದವರ ಸಂಪರ್ಕಕ್ಕೆ ಬಂದವರಿಗೂ ಕೊರೊನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು 12 ಹೊಸ ಪ್ರಕರಣ – ಜಮಾತ್‍ಗೆ ಹೋದವರ ಸಂಪರ್ಕಕ್ಕೆ ಬಂದವರಿಗೂ ಕೊರೊನಾ

Bengaluru City

ಇಂದು 12 ಹೊಸ ಪ್ರಕರಣ – ಜಮಾತ್‍ಗೆ ಹೋದವರ ಸಂಪರ್ಕಕ್ಕೆ ಬಂದವರಿಗೂ ಕೊರೊನಾ

Public TV
Last updated: April 7, 2020 2:05 pm
Public TV
Share
3 Min Read
Nizamuddin Tablighi Jamaat 2
SHARE

– ಮಂಡ್ಯದಲ್ಲಿ ಮೂವರಿಗೆ ಕೊರೊನಾ
– ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 175ಕ್ಕೆ ಏರಿಕೆ
– ಜಮಾತ್‍ನಿಂದಾಗಿ 8 ಮಂದಿಗೆ ಕೊರೊನಾ

ಬೆಂಗಳೂರು: ಲಾಕ್‍ಡೌನ್ ಇದ್ದರೂ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇವತ್ತು ಒಂದೇ ದಿನ 12 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಒಟ್ಟು 175 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಇಂದು 12 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಮಂಡ್ಯದಲ್ಲಿ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ದೆಹಲಿಯ ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ಹೋದವರ ನಿರ್ಲಕ್ಷ್ಯದಿಂದ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಕೊರೊನಾ ಪಾಸಿಟಿವ್ ಕಂಡು ಬರುತ್ತಿದೆ.

Corona 1 1

ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ನಿಜಾಮುದ್ದೀನ್‍ಗೆ ಹೋಗಿ ಬಂದವರ ಸಂಪರ್ಕದಲ್ಲಿರುವವರಿಗೆ ಕೊರೊನಾ ಸೋಂಕು ತಗಲಿದ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ನಿಜಾಮುದ್ದೀನ್‍ಗೆ ಹೋಗಿ ಬಂದವರು ಸರಿಯಾಗಿ ಕ್ವಾರಂಟೈನ್ ಆಗದ ಪರಿಣಾಮ ಈಗ ಅವರ ಜೊತೆ ಸಂಪರ್ಕದಲ್ಲಿದ್ದವರಿಗೂ ಕೊರೊನಾ ಭೀತಿ ಉಂಟಾಗಿದೆ.

ಕೊರೊನಾ ಸೋಂಕಿತರ ವಿವರಗಳು
ರೋಗಿ 164 – 33 ವರ್ಷದ ಪುರುಷನಾಗಿದ್ದು, ಬಾಗಲಕೋಟೆಯ ಮುಧೋಳ್ ನಿವಾಸಿ. ಮಾರ್ಚ್ 13 ರಿಂದ 18ರವರೆಗೆ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸದ್ಯಕ್ಕೆ ಬಾಗಲಕೋಟೆಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 165 – 41 ವರ್ಷದ ಮಹಿಳೆಯಾಗಿದ್ದು, ಬಾಗಲಕೋಟೆ ನಿವಾಸಿಯಾಗಿದ್ದಾರೆ. ಇವರು 125ರ ಸೋಂಕಿತ ರೋಗಿಯ ನೆರೆಹೊರೆಯವರು. ಬಾಗಲಕೋಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿ 166 – 80 ವರ್ಷ ವೃದ್ಧೆಯಾಗಿದ್ದು, ಗದಗ ಜಿಲ್ಲೆಯವರಾಗಿದ್ದಾರೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ, ಸೋಂಕಿತರ ಜೊತೆ ಸಂಪರ್ಕವೂ ಇಲ್ಲ. ಆದರೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಬಂದಿದೆ. ಗದಗ ಆಸ್ಪತ್ರೆಯಲ್ಲಿ ಪ್ರತ್ಯೇಕವಾದ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

corona 3

ರೋಗಿ 167 – 29 ವರ್ಷದ ಪುರುಷನಾಗಿದ್ದು, ಬೆಂಗಳೂರು ನಗರದ ನಿವಾಸಿ. ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 168 – 50 ವರ್ಷದ ವ್ಯಕ್ತಿ, ಬೆಂಗಳೂರು ನಗರದ ನಿವಾಸಿಯಾಗಿದ್ದು, ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರೋಗಿ 169 – 35 ವರ್ಷದ ಬೆಂಗಳೂರು ನಗರದ ನಿವಾಸಿಯಾಗಿದ್ದು, ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರೋಗಿ 170 – 68 ವರ್ಷ ವೃದ್ಧನಾಗಿದ್ದು, ಬೆಂಗಳೂರು ನಗರದ ನಿವಾಸಿಯಾಗಿದ್ದಾರೆ. ದುಬೈನಿಂದ ಬಂದಿರುವ ಇತಿಹಾಸವಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 171 – 32 ವರ್ಷದ ಪುರುಷನಾಗಿದ್ದು, ಮಂಡ್ಯ ನಿವಾಸಿ. ಇವರು ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Nizamuddin Tablighi Jamaat 4

ರೋಗಿ 172 – 36 ವರ್ಷದ ಪುರುಷನಾಗಿದ್ದು, ಮಂಡ್ಯ ನಿವಾಸಿ. ಇವರು ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 173 – 65 ವರ್ಷದ ವ್ಯಕ್ತಿ, ಮಂಡ್ಯ ನಿವಾಸಿ. ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 174 – 28 ವರ್ಷದ ಮಹಿಳೆಯಾಗಿದ್ದು, ಕಲಬುರಗಿ ನಿವಾಸಿಯಾಗಿದ್ದಾರೆ. ಕೊರೊನಾ ರೋಗಿ 124 ಸೋಂಕಿತರ ಸಂಪರ್ಕದಲ್ಲಿದ್ದರು. ಅಲ್ಲದೇ ಈ ರೋಗಿಯ ಸೊಸೆಯಾಗಿದ್ದಾರೆ. ಸದ್ಯಕ್ಕೆ ಕಲಬುರಗಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.

Coronavirus in India

ರೋಗಿ 175 – 57 ವರ್ಷದ ಪುರುಷನಾಗಿದ್ದು, ಕಲಬುರಗಿ ನಿವಾಸಿ. ಟ್ರಾವೆಲ್ ಹಿಸ್ಟರಿ ಇರದೇ ಇದ್ದರೂ ಅತಿ ಹೆಚ್ಚು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಲಬುರಗಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗದಗ ಹಾಗೂ ಕಲಬುರಗಿಯ ಎರಡು ಹೊಸ ಪ್ರಕರಣದಿಂದ ಆರೋಗ್ಯ ಇಲಾಖೆಗೆ ಆತಂಕ ಶುರುವಾಗಿದೆ. ಯಾಕೆಂದರೆ ಗದಗ ಹಾಗೂ ಕಲಬುರ್ಗಿ ಇಬ್ಬರು ಸೋಂಕಿತರಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲ, ಸೋಂಕಿತರ ಜೊತೆ ಸಂಪರ್ಕವೂ ಇಲ್ಲ. ಆದರೂ ಉಸಿರಾಟದ ತೊಂದರೆ ಮತ್ತು ಶ್ವಾಸಕೋಶ ಸಮಸ್ಯೆ ಇದೆ. ಇಂತಹವರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ ಉಸಿರಾಟದ ತೊಂದರೆ ಇರುವವರಿಗೆ ಅತೀ ಬೇಗ ಕೊರೊನಾಗೆ ತುತ್ತಾಗುತ್ತಿರುವ ಪ್ರಕರಣ ಕಂಡುಬರುತ್ತಿದೆ.

TAGGED:bengaluruCoronaviruskarnatakatablighi Jamaat Programಕರ್ನಾಟಕಕೊರೊನಾ ವೈರಸ್ತಬ್ಲಿಘಿ ಜಮಾತ್ ಕಾರ್ಯಕ್ರಮಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

Kolara School 4
Districts

ಕೋಲಾರ | ಇದೇನು ಸರ್ಕಾರಿ ಶಾಲೆನಾ? ಕಸದ ತೊಟ್ಟಿನಾ – ನಿರ್ಲಕ್ಷ್ಯದಿಂದ ಸೊರಗಿದ ಶಾಲೆ!

Public TV
By Public TV
30 minutes ago
Belagavi Police 2
Belgaum

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – 400 ಕೋಟಿ ದರೋಡೆ

Public TV
By Public TV
30 minutes ago
G Parameshwar
Bengaluru City

ರಾಜೀವ್‌ ಗೌಡ ಎಷ್ಟು ದಿನ ತಪ್ಪಿಸಿಕೊಂಡು ಹೋಗ್ತಾರೆ? ಮುಲಾಜಿಲ್ಲದೇ ಬಂಧಿಸುತ್ತೇವೆ – ಪರಮೇಶ್ವರ್‌

Public TV
By Public TV
50 minutes ago
COURT
Belgaum

ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 8.76 ಲಕ್ಷ ದಂಡ

Public TV
By Public TV
50 minutes ago
Bangladesh Hindu Man 1
Latest

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ – ಪ್ರೀ ಪ್ಲ್ಯಾನ್ಡ್‌ ಮರ್ಡರ್‌ ಅಂತ ಕುಟುಂಬ ಆರೋಪ

Public TV
By Public TV
1 hour ago
Dryfruits
Bengaluru City

ಇರಾನ್‌ನಲ್ಲಿ ಹಿಂಸಾಚಾರ, ಯುದ್ಧದ ಆತಂಕ – ರಂಜಾನ್ ಹೊಸ್ತಿಲಲ್ಲೇ ಡ್ರೈಫ್ರೂಟ್ಸ್ ಸಪ್ಲೈ ಬಂದ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?