Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಅಕಾಲಿಕ ಮಳೆ- ವರುಣನ ಅಬ್ಬರಕ್ಕೆ ನೆಲಕ್ಕುರುಳಿದ ಬಾಳೆ, ವಿದ್ಯುತ್ ಕಂಬಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜ್ಯದಲ್ಲಿ ಅಕಾಲಿಕ ಮಳೆ- ವರುಣನ ಅಬ್ಬರಕ್ಕೆ ನೆಲಕ್ಕುರುಳಿದ ಬಾಳೆ, ವಿದ್ಯುತ್ ಕಂಬಗಳು

Bellary

ರಾಜ್ಯದಲ್ಲಿ ಅಕಾಲಿಕ ಮಳೆ- ವರುಣನ ಅಬ್ಬರಕ್ಕೆ ನೆಲಕ್ಕುರುಳಿದ ಬಾಳೆ, ವಿದ್ಯುತ್ ಕಂಬಗಳು

Public TV
Last updated: April 7, 2020 8:56 pm
Public TV
Share
3 Min Read
RMG Rain App
SHARE

-ಸಿಡಿಲು ಬಡಿದು ಹೊತ್ತಿ ಉರಿದ ಮರ

ಬೆಂಗಳೂರು: ರಾಮನಗರ, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧೆಡೆ ಅಕಾಲಿಕ ಮಳೆಯಾಗಿದ್ದು, ವರುಣನ ಅಬ್ಬರಕ್ಕೆ ಬಾಳೆ, ವಿದ್ಯುತ್ ಕಂಬಗಳು ಧರಗೆ ಉರುಳಿವೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ರಾಮನಗರ ಜಿಲ್ಲೆಯಾದ್ಯಂತ ಹಲವೆಡೆ ರಾತ್ರಿ ಭರ್ಜರಿಯಾಗಿ ಮಳೆ ಸುರಿದಿದ್ದು, ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ರಾಮನಗರ ತಾಲೂಕಿ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯುಂಟಾಗಿದೆ. ಸತತ ಎರಡು ಗಂಟೆಗಳ ಕಾಲ ಸುರಿದ ಮಳೆ ಬೇಸಿಗೆ ಬಿಸಿಲ ಬೇಗೆ ಇಳೆಗೆ ಮಳೆಯು ತಂಪನೆರೆದಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆರಡು ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

KPL Rain 2

ವರುಣನ ಅಬ್ಬರದಿಂದಾಗಿ ಬಿಡದಿ ಸಮೀಪದ ತಾಳಕುಪ್ಪೇ ಗ್ರಾಮದ ಶಿವಣ್ಣ ಎಂಬವರ ನಾಲ್ಕೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಸಂಪೂರ್ಣವಾಗಿ ನೆಲಸಮವಾಗಿದೆ. ಸುಮಾರು 18 ಲಕ್ಷ ರೂ. ಮೌಲ್ಯದ ಬಾಳೆ ಬೆಳೆ ಹಾನಿಯುಂಟಾಗಿದೆ. ಇದೇ ಗ್ರಾಮದ ಸಂಪತ್ ಎಂಬವರ ಮನೆಯ ಮೇಲ್ಛಾವಣಿ ಗಾಳಿಗೆ ಹಾರಿ ಹೋಗಿವೆ. ಮನೆಯಿಲ್ಲದೇ ಕೊರಗುತ್ತಿದ್ದ ಸಂಪತ್ ಅವರ ಕುಟುಂಬಕ್ಕೆ ಗ್ರಾಮಸ್ಥರೇ ರಕ್ಷಣೆ ನೀಡಿದ್ದಾರೆ. ಬೈಚುಹಳ್ಳಿ ವ್ಯಾಪ್ತಿಯಲ್ಲಿ ಒಂದು ಟ್ರಾನ್ಸ್‍ಫರ್ಮರ್ ಸೇರಿದಂತೆ 7 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗೆ ಉರುಳಿವೆ.

ಮಾಗಡಿ ತಾಲೂಕಿನ ಕುದೂರು ತಿಪ್ಪಸಂದ್ರದಲ್ಲಿ ಮಾಡ್ಬಾಳ್ ಗ್ರಾಮಗಳ ಭಾಗದಲ್ಲಿ ಜೋರು ಮಳೆಯಾಗಿದ್ದು ಅಣ್ಣೇಶಾಸ್ತ್ರಿ ಪಾಳ್ಯದಲ್ಲಿ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಕನಕಪುರ ಮತ್ತು ಚನ್ನಪಟ್ಟಣದಲ್ಲೂ ಭಾರೀ ಮಳೆಯಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

KPL Rain 7

ಚಿಕ್ಕಬಳ್ಳಾಪುರ:
ಜಿಲ್ಲೆಯ ಹಲವೆಡೆ ಸೇರಿದಂತೆ ಕೊರೊನಾ ಹಾಟ್‍ಸ್ಪಾಟ್ ಗೌರಿಬಿದನೂರು ನಗರದ ಸುತ್ತಮುತ್ತಲೂ ಧಾರಕಾರ ಮಳೆಯಾಗಿದೆ. ಚಿಕ್ಕಬಳ್ಳಾಪುರ ನಗರ ಸೇರಿದಂತೆ ಸುತ್ತಮುತ್ತಲೂ ಸಹ ಸಂಜೆ ಉತ್ತಮ ಮಳೆಯಾಗಿದ್ದು, ಬಿಸಿಲಿನಿಂದ ಬಸವಳಿದ ಜನರಿಗೆ ಮಳೆ ತಂಪು ನೀಡಿದೆ. ಆದರೆ ಗೌರಿಬಿದನೂರು ನಗರವು ಕೊರೊನಾ ಹಾಟ್‍ಸ್ಟಾಟ್ ಕೇಂದ್ರವಾಗಿದ್ದು ಮಳೆ ಬಿದ್ದ ಪರಿಣಾಮ ವೈರಸ್ ಹರಡುಬಹದು ಎನ್ನುವ ಅನುಮಾನದ ಆತಂಕವೂ ಜನರಿಗೆ ಕಾಡತೊಡಗಿದೆ.

ಕೆಲೆವೆಡೆ ತರಕಾರಿ, ಹೂ, ಹಣ್ಣು ಸಹ ಮಳೆಯಿಂದ ಹಾನಿಯಾಗಿರುವ ಮಾಹಿತಿ ಸಿಕ್ಕಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ವೆನ್‍ಸೈಟ್ ಮಾಹಿತಿಯಂತೆ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿಯಲ್ಲಿ 70 ಮಿಲಿ ಮೀಟರ್ ಮಳೆಯಾಗಿದೆ. ಗೌರಿಬಿದನುರು ನಗರದಲ್ಲಿ 70 ಹಾಗೂ ತಾಲೂಕಿನ ಮುದುಗೆರೆಯಲ್ಲಿ 76 ಮಿಲಿಮೀಟರ್ ಮಳೆ ಪ್ರಮಾಣ ದಾಖಲಾಗಿದೆ.

CKB Rain

ಬಳ್ಳಾರಿ:
ಗಣಿನಾಡು ಬಳ್ಳಾರಿಯಲ್ಲಿ ಇಂದು ಸಾಧಾರಣ ಮಳೆ ಸುರಿದಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿರುಬಿಸಿಲಿನ ವಾತಾವರಣ ಇದ್ದರೂ, ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಆವರಿಸಿತು. ಆ ಬಳಿಕ ಗುಡುಗು ಸಹಿತ ಸಾಧಾರಣ ಮಳೆ ಒಂದು ಗಂಟೆ ಸುರಿಯಿತು. ಕೊರೊನಾ ವೈರಸ್ ಎಫೆಕ್ಟ್ ನಿಂದ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರು ಆಶ್ರಯ ಪಡೆಯಲು ಪರದಾಡಿದರು.

ಕೊಪ್ಪಳ:
ಜಿಲ್ಲೆಯ ಗಂಗಾವತಿ, ಕಾರಟಗಿ, ಕನಕಗಿರಿ, ತಾವರಗೆರ, ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಕನಕಗಿರಿ ತಾಲೂಕಿನ ಗುಳದಾಳ ಗ್ರಾಮದ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದೆ. ಪರಿಣಾಮ ಭತ್ತ ಬೆಳೆದ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.

KPL Rain 1

ಕೊರೊನಾ ಭೀತಿಯಿಂದ ರೈತರು, ಕೂಲಿ ಕಾರ್ಮಿಕರು, ಬಡವರು ಕಂಗೆಟ್ಟು ಹೋಗಿದ್ದಾರೆ. ಈ ಬೆನ್ನಲ್ಲೇ ಇನ್ನೇನು ಬೆಳೆ ಬೆಳೆದು ಕೈಗೆ ಸೇರುತ್ತೆ ಎನ್ನುವಷ್ಟರಲ್ಲೇ ಇಂದು ಸುರಿದ ಅಕಾಲಿಕ ಮಳೆಯಿಂದ ಭತ್ತ ನೆಲ ಕಚ್ಚಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಕಾರಟಗಿ ಭಾಗದಲ್ಲಿ ಭತ್ತದ ಬೆಳಗಾರರಿಗೆ ಗಾಯದ ಮೇಲೆ ಬರೆ ಎಳೆದಂತೆಯಾಗಿದೆ. ಗಂಗಾವತಿ ತಾಲೂಕಿನ ಗುಳದಾಳ, ಹೇರೂರು, ಗೋನಾಳ, ಕಲ್ಲಗುಡಿ, ಸಿಂಗನಾಳ, ಹೊಸ್ಕೇರಾ, ಸಂಗಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೂರಾರು ಹೆಕ್ಟೇರ್ ನಲ್ಲಿ ಭತ್ತ ನೆಲ ಕಚ್ಚಿದೆ.

ರಾಯಚೂರು:
ಅಕಾಲಿಕ ಮಳೆಗೆ ರಾಯಚೂರಿನ ರೈತರು ತತ್ತರಿ ಹೋಗಿದ್ದಾರೆ. ಮಸ್ಕಿ ಹಾಗೂ ಲಿಂಗಸುಗೂರು ತಾಲೂಕಿನಲ್ಲಿ ಎಡೆಬಿಡದ ಮಳೆ ಸುರಿದಿದ್ದು, ಮಸ್ಕಿ ತಾಲೂಕಿನ ತೀರ್ಥಬಾವಿ ಗ್ರಾಮದಲ್ಲಿ ಆಲಿಕಲ್ಲು ಹೊಡೆತಕ್ಕೆ ಪಪ್ಪಾಯ ಬೆಳೆ ನೆಲಕ್ಕುರುಳಿದೆ. ಬಸನಗೌಡ ಹಾಗೂ ಚಂದ್ರಶೇಖರ ಅವರಿಗೆ ಸೇರಿದ್ದ 6 ಎಕರೆ ಹೊಲದಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಬೆಳೆ ಸಂಪೂರ್ಣ ಹಾಳಾಗಿದೆ. ಅಷ್ಟೇ ಅಲ್ಲದೆ ಜಿಲ್ಲೆಯ ವಿವಿಧೆಡೆ ನೂರಾರು ಎಕರೆ ಭತ್ತದ ಬೆಳೆಯೂ ಹಾನಿಯಾಗಿದೆ.

RCR Rain

ರಾಯಚೂರಿನ ಶ್ರೀರಾಮನಗರ ಕಾಲೋನಿಯ ಕೊದಂಡರಾಮ ದೇವಾಲಯದ ಆವರಣದಲ್ಲಿನ ಬನ್ನಿಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿತ್ತು. ಸಂಜೆ ವಾಕಿಂಗ್ ಮಾಡುತ್ತಿದ್ದ ಜನ ಗಾಳಿಯಿಂದ ಮನೆ ತೆರಳಿದ್ದರು. ಹೀಗಾಗಿ ಭಾರೀ ಅನಾಹುತ ತಪ್ಪಿದೆ.

ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ವರುಣ ಅಬ್ಬರಿಸಿದ್ದಾನೆ. ಮಂಗಳೂರು ಹೊರವಲಯದ ಸುರತ್ಕಲ್, ಬಂಟ್ವಾಳ, ಕಡಬ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕಿನ ವಿವಿಧೆಡೆ ಅಕಾಲಿಕ ಮಳೆಯಾಗಿದೆ.

KPL Rain

ಯಾದಗಿರಿ/ ಗದಗ:
ಯಾದಗಿರಿ ಜಿಲ್ಲೆಯ ಶಹಪುರ, ಸುರಪುರ, ಗುರುಮಿಠಕಲ್ ಸೆರಿದಂತೆ ವಿವಿಧೆಡೆ ಮಳೆರಾಯ ಭಾರೀ ಸದ್ದು ಮಾಡಿದ್ದಾನೆ. ಗುಡುಗು, ಸಿಡಿಲು ಸಹಿತ ವರುಣ ಆರ್ಭಟಿಸಿದ್ದು, ಆಲೆಕಲ್ಲು ಮಳೆಯಾಗಿದೆ. ಗದಗ ನಗರ ಸೇರಿದಂತೆ ಜಿಲ್ಲೆಯ ನರಗುಂದ, ಗಜೇಂದ್ರಗಡ, ಮುಂಡರಗಿ ಭಾಗದಲ್ಲಿ ಭಾರೀ ಮಳೆಯಾಗಿದೆ.

TAGGED:chikkaballapurheavy rainkarnatakaKoppalPublic TVraichurramanagaraಕೊಪ್ಪಳಗದಗಚಿಕ್ಕಬಳ್ಳಾಪುರಪಬ್ಲಿಕ್ ಟಿವಿಬಳ್ಳಾರಿಬಾಳೆಮಳೆರಾಮನಗರ
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
5 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
17 minutes ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
34 minutes ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
1 hour ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
1 hour ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?