ಯಾದಗಿರಿಯಲ್ಲಿ ಮೊದಲ ಬಾರಿಗೆ ಸ್ಯಾನಿಟೈಸರ್ ಸ್ಪ್ರೇ ಟನಲ್ ಆರಂಭ

Public TV
1 Min Read
ygr sanitizing tunnel

ಯಾದಗಿರಿ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಕಲ್ಯಾಣ ಕರ್ನಾಟಕದ ಯಾದಗಿರಿಯಲ್ಲಿ ಮೊದಲ ಬಾರಿಗೆ ಸ್ಯಾನಿಟೈಸರ್ ಸ್ಪ್ರೇ ಟನಲ್ ಆರಂಭಿಸಲಾಗಿದೆ.

ತಮ್ಮ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ತಮ್ಮ ಸ್ವಂತ ಖರ್ಚಿನಲ್ಲಿ ಈ ಟೆನಲ್‍ಗಳನ್ನು ಆರಂಭಿಸಿದ್ದಾರೆ. ಪಟ್ಟಣದ ಸರ್ಕಾರಿ ಡಿಗ್ರಿ ಕಾಲೇಜು ಆವರಣದಲ್ಲಿ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಹೊಸದಾಗಿ ತರಕಾರಿ ಮಾರುಕಟ್ಟೆ ಆರಂಭಿಸಲಾಗಿದೆ. ಈ ಮಾರುಕಟ್ಟೆ ಮುಖ್ಯ ದ್ವಾರದಲ್ಲಿ ಈ ಸ್ಯಾನಿಟೈಸರ್ ಸ್ಪ್ರೇ ಟನಲ್ ನಿರ್ಮಾಣ ಮಾಡಲಾಗಿದೆ.

ygr sanitizing tunnel 1

ತರಕಾರಿ ಮಾರುಕಟ್ಟೆಗೆ ನಿತ್ಯ ಬರುವ ನೂರಾರು ಮಂದಿ ಸ್ಪ್ರೇ ಸಿಂಪಡಣೆ ಆದ ಬಳಿಕವೇ ಒಳಗಡೆ ಹೋಗಬೇಕು ಮತ್ತು ವಾಪಸ್ ಬರವಾಗಲೂ ಸ್ಪ್ರೇ ಟನಲ್‍ನಿಂದಲೇ ಹೊರಗಡೆ ಬರಬೇಕು ಎಂದು ಸೂಚಿಸಲಾಗಿದೆ. ಈ ಮೂಲಕ ಯಾದಗಿರಿಯಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *