Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣ್ಣನ ಚಿತೆಗೆ ತಂಗಿಯಿಂದಲೇ ಅಂತ್ಯಕ್ರಿಯೆ- ಸ್ಮಶಾನದಲ್ಲಿದ್ದ ಅರೆಸುಟ್ಟ ಕಟ್ಟಿಗೆ ಆಯ್ದು ತಂದ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅಣ್ಣನ ಚಿತೆಗೆ ತಂಗಿಯಿಂದಲೇ ಅಂತ್ಯಕ್ರಿಯೆ- ಸ್ಮಶಾನದಲ್ಲಿದ್ದ ಅರೆಸುಟ್ಟ ಕಟ್ಟಿಗೆ ಆಯ್ದು ತಂದ ತಾಯಿ

Belgaum

ಅಣ್ಣನ ಚಿತೆಗೆ ತಂಗಿಯಿಂದಲೇ ಅಂತ್ಯಕ್ರಿಯೆ- ಸ್ಮಶಾನದಲ್ಲಿದ್ದ ಅರೆಸುಟ್ಟ ಕಟ್ಟಿಗೆ ಆಯ್ದು ತಂದ ತಾಯಿ

Public TV
Last updated: April 14, 2020 7:01 am
Public TV
Share
3 Min Read
Belagavi Funeral copy
SHARE

-ಕೊರೊನಾ ಭೀತಿಯಿಂದ ಸಹಾಯಕ್ಕೆ ಬಾರದ ಜನ
-ಸ್ಮಶಾನಕ್ಕೆ ಶವ ಸಾಗಿಸಿ ಕೈ ತೊಳೆದುಕೊಂಡ ಅಧಿಕಾರಿಗಳು

ಬೆಳಗಾವಿ: ಅಣ್ಣನ ಚಿತೆಗೆ ತಂಗಿಯೇ ಅಂತ್ಯಕ್ರಿಯೆ ನಡೆಸಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರಕ್ಕೆ ಯಾರು ಮುಂದಾಗಿದ್ದಾಗ ಸೋದರಿಯೇ ಕೊನೆಯ ವಿಧಿವಿಧಾನಗಳನ್ನ ನೆರೆವೇರಿಸಿದ್ದಾಳೆ.

Belagavi Funeral Sister Brother 11 copy

ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದ ಸಾಗರ್ ಸಿಂಘೆ (32) ಸಾವನ್ನಪ್ಪಿದ ವ್ಯಕ್ತಿ. ಸಾಗರ್ ಸಿಂಘೆ ವಿಕಲಚೇತನನಾಗಿದ್ದು, ಕೆಲವು ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಗ್ರಾಮದಲ್ಲಿಯ ಜನರ ಪಡಿತರ ಚೀಟಿ, ಪಿಂಚಣಿ ಸೇರಿದಂತೆ ಸರ್ಕಾರಿ ಸೌಲಭ್ಯಗಳನ್ನು ಮಾಡಿಸುವ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್‍ಡೌನ್ ನಿಂದಾಗಿ ಕೆಲ ದಿನಗಳಿಂದ ಮನೆಯಲ್ಲಿ ಇದ್ದರು. ಶಸ್ತ್ರಚಿಕಿತ್ಸೆ ಬಳಿಕ ಸಾಗರ್ ಸಿಂಘೆಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು.

Belagavi Funeral Sister Brother 9 copy

ನೆರವಿಗೆ ಯಾರೂ ಬರಲಿಲ್ಲ: ಭಾನುವಾರ ಸಾಗರ್ ಅವರ ತಾಯಿ ಮತ್ತು ತಂಗಿ ಆತನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಸಾಗರ್ ಸಾವನ್ನಪ್ಪಿದ್ದರು. ಬೆಳಗಾವಿಯಿಂದ ಊರಿಗೆ ತೆರಳಲು ನಮ್ಮ ಬಳಿ ಹಣವಿಲ್ಲ. ಯಾರಾದ್ರೂ ಸಹಾಯ ಮಾಡಿ ಎಂದು ತಾಯಿ-ಮಗಳು ಕಣ್ಣೀರಿಟ್ಟಿದ್ದಾರೆ. ಇನ್ನು ಕೆಲವರು ಕೊರೊನಾದಿಂದಲೇ ಸಾವನ್ನಪ್ಪಿರಬಹುದು ಎಂದು ಸಹಾಯ ಮಾಡಲು ಹಿಂದೇಟು ಹಾಕಿದ್ದಾರೆ.

Belagavi Funeral Sister Brother 5 copy

12 ರೂ.ಯೂ ಇರಲಿಲ್ಲ: ಜಿಲ್ಲಾಸ್ಪತ್ರೆ ಸಿಬ್ಬಂದಿ ಶವವನ್ನು ಅಂಬುಲೆನ್ಸ್ ಮುಖಾಂತರ ಬೆಳಗಾವಿಯ ಸದಾಶಿವನಗರದಲ್ಲಿರುವ ಸ್ಮಶಾನಕ್ಕೆ ಸಾಗಿಸಿ ಕೈ ತೊಳೆದುಕೊಂಡಿದ್ದಾರೆ. ಇನ್ನು ಸ್ಮಶಾನದಲ್ಲಿಯೂ ತಾಯಿ-ಮಗಳ ಸಹಾಯಕ್ಕೆ ಯಾರು ಮುಂದಾಗಿಲ್ಲ. ಶವ ಸಂಸ್ಕಾರಕ್ಕೆ ಬಳಸುವ ಕಟ್ಟಿಗೆ ಸುಮಾರು 1,200 ರೂ. ನೀಡಬೇಕು. ತಾಯಿ-ಮಗಳ ಬಳಿ 12 ರೂ. ಇಲ್ಲದಷ್ಟು ಬಡತನ. ಸಾಗರ್ ಸಾವಿನ ಸುದ್ದಿ ತಿಳಿಸಲು ಇವರ ಬಳಿ ಒಂದು ಮೊಬೈಲ್ ಸಹ ಇಲ್ಲ.

Belagavi Funeral Sister Brother 4 copy

ಅರೆಸುಟ್ಟ ಕಟ್ಟಿಗೆ ಆಯ್ದ ತಾಯಿ: ಊರಿಗೆ ತೆರಳಲು ಹಣವಿಲ್ಲ. ಸಹಾಯಕ್ಕೂ ಯಾರು ಬರುತ್ತಿಲ್ಲ. ಹೇಗಾದ್ರೂ ಮಾಡಿ ಇಲ್ಲಿಯೇ ಪುತ್ರನ ಅಂತ್ಯಕ್ರಿಯೆ ಮಾಡಬೇಕೆಂದು ನಿರ್ಧರಿಸಿದ ತಾಯಿ ಅಲ್ಲಿಯೇ ಬಿದ್ದಿದ್ದ ಅರೆಸುಟ್ಟ ಕಟ್ಟಿಗೆಗಳನ್ನ ಆಯ್ದು ಚಿತೆಗೆ ಸಿದ್ಧತೆ ನಡೆಸಿದರು. ಇಬ್ಬರು ಸೇರಿ ಕಟ್ಟಿಗೆ ತಂದು ಚಿತೆ ಮಾಡಿ, ಪುತ್ರನ ಶವವನ್ನು ಮೇಲೆತ್ತಿಟ್ಟಿದ್ದಾರೆ.

Belagavi Funeral Sister Brother 6 copy

ಮಾನವೀಯತೆ ಮೆರೆದ ಕರವೇ ಕಾರ್ಯಕರ್ತರು: ಈ ವಿಷಯ ತಿಳಿದು ಪಬ್ಲಿಕ್ ಟಿವಿ ಮತ್ತು ಕರವೇ ಕಾರ್ಯಕರ್ತರು ಸ್ಮಶಾನಕ್ಕೆ ತೆರಳಿದ್ದರು. ಕರವೇ ಕಾರ್ಯಕರ್ತರು ಶವವನ್ನು ಊರಿಗೆ ಸಾಗಿಸಲು ಸಹ ಮುಂದಾಗಿದ್ದರು. ಆದ್ರೆ ಒಮ್ಮೆ ಶವ ಚಿತೆಯ ಮೇಲಿಟ್ಟ ಮೇಲೆ ಎತ್ತಬಾರದು ಎಂಬ ಕಾರಣಕ್ಕೆ ಬೆಳಗಾವಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಕರವೇ ಕಾರ್ಯಕರ್ತರು ಮುಂಜಾಗ್ರತ ಕ್ರಮವಾಗಿ ಪಿಪಿಇ ಕಿಟ್ ಧರಿಸಿ ಅಂತ್ಯಸಂಸ್ಕಾರದಲ್ಲಿ ತಾಯಿ-ಮಗಳಿಗೆ ಸಹಾಯವಾದರು. ಕೊನೆಗೆ ವಿಕಲಾಂಗ ಸೋದರ ಚಿತೆಗೆ ತಂಗಿಯೇ ಬೆಂಕಿ ಇಟ್ಟು, ವಿಧಿ ವಿಧಾನ ಪೂರ್ಣಗೊಳಿಸಿದ್ದಾರೆ.

Belagavi Funeral Sister Brother 8 copy

ಮಗನನ್ನು ಕಳೆದುಕೊಂಡ ದುಃಖ ತಾಯಿಗೆ, ಆಸರೆಯಾಗಿದ್ದ ಅಣ್ಣನನ್ನು ಕಳೆದುಕೊಂಡ ದುಃಖ ತಂಗಿಗೆ. ಇಬ್ಬರ ಕಣ್ಣೀರು ಕಲ್ಲುಹೃದಯವಿದ್ದವರ ಕಣ್ಣಲ್ಲಿಯೂ ನೀರು ಬರುವಂತಿತ್ತು. ತಾಯಿ ಮಗಳಿಗೆ, ಮಗಳು ತಾಯಿ ಸಮಾಧಾನ ಹೇಳುತ್ತಾ ಕಣ್ಣೀರು ಹಾಕುತ್ತಿರುವ ದೃಶ್ಯ ನೋಡಿದ್ರೆ ದೇವರೆಷ್ಟು ಕ್ರೂರಿ ಎಂಬ ಭಾವ ಮೂಡುತ್ತೆ. ಬಡ ಕುಟುಂಬಕ್ಕೆ ಸಹಾಯವಾಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ, ಜಿಲ್ಲಾಡಳಿತ ಶವವನ್ನು ಸ್ಮಶಾನಕ್ಕೆ ಸಾಗಿಸಿ ಕೈ ತೊಳೆದುಕೊಂಡಿದ್ದು ನಿಜಕ್ಕೂ ದೊಡ್ಡ ದುರಂತ.

Belagavi Funeral Sister Brother 2 copy

ಈ ಸಂಬಂಧ ಪ್ರತಿಕ್ರಿಯೆ ಕೇಳಲು ಪಬ್ಲಿಕ್ ಟಿವಿ ಸಂಬಂಧಿಸಿದ ಅಧಿಕಾರಿಗಳ ಸಂಪರ್ಕಕ್ಕೆ ಮುಂದಾದ್ರೆ ಯಾರು ಫೋನ್ ರಿಸೀವ್ ಮಾಡುತ್ತಿಲ್ಲ. ಬಡವರ ಸಹಾಯಕ್ಕೆ ನಾವಿದ್ದೇವೆ ಅನ್ನೋ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನತೆ ಸ್ಥಿತಿ ತಿಳಿದುಕೊಳ್ಳುವಲ್ಲಿ ವಿಫಲರಾದ್ರಾ ಅನ್ನೋ ಪ್ರಶ್ನೆ ಮೂಡುತ್ತದೆ.

Belagavi Funeral brother copy

ಅಂತ್ಯಕ್ರಿಯೆ ಬಳಿಕ ತಾಯಿ-ಮಗಳು ಬೆಳಗಾವಿಯಲ್ಲಿ ಅನಾಥರಾಗಿದ್ದರು. ಕೊನೆಗೆ ಬೆಳಗಾವಿ ಎಸ್‍ಪಿ ಇಬ್ಬರ ಸಹಾಯಕ್ಕೆ ಆಗಮಿಸಿ, ತಾಯಿ-ಮಗಳನ್ನು ಅವರ ಊರಿಗೆ ಕಳುಹಿಸುವ ವ್ಯವಸ್ಥೆ ಮಾಡಿದರು. ವಿಕಲಾಂಗನಾಗಿದ್ದರೂ ಎಷ್ಟೋ ಬಡವರಿಗೆ ಪಡಿತರ ಚೀಟಿ, ಪಿಂಚಣಿ, ಸಾಲ ಸೌಲಭ್ಯ, ಸರ್ಕಾರದ ಯೋಜನೆಗಳನ್ನು ಮಾಡಿಸಿಕೊಡುತ್ತಿದ್ದ ಸಾಗರ್ ಇಂದು ಅನಾಥನಾಗಿ ಬಾರದ ಲೋಕಕ್ಕೆ ತೆರಳಿದ್ದಾರೆ.

TAGGED:belagavibrotherCorona VirusPublic TVsisterಅಣ್ಣಕೊರೊನಾ ವೈರಸ್ಕೋವಿಡ್ 19ಚಿಕ್ಕೋಡಿಜಿಲ್ಲಾಸ್ಪತ್ರೆತಂಗಿತಾಯಿಬೆಳಗಾವಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
31 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
33 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
35 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
58 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
1 hour ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?