Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ

Public TV
Last updated: April 19, 2020 8:40 pm
Public TV
Share
2 Min Read
cinema Workers Infosys 4
SHARE

-ನಿರ್ಮಾಪಕ ರಮೇಶ್ ರೆಡ್ಡಿ ಸಮ್ಮುಖದಲ್ಲೊಂದು ಸಾರ್ಥಕ ಕಾರ್ಯ

ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್‍ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ ಕೈಗೊಂಡಿದೆ. ಅದು ಕನ್ನಡ ಚಿತ್ರರಂಗದಲ್ಲಿ ಯಶಸ್ವೀ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ರಮೇಶ್ ರೆಡ್ಡಿಯವರ ಇರುವಿಕೆಯಲ್ಲಿ ನಡೆಯುತ್ತಿದೆ.

cinema Workers Infosys 3

ಯಾವುದೇ ಸಂಕಷ್ಟದ ಕಾಲದಲ್ಲಿ ನೊಂದವರ ನೆರವಿಗೆ ನಿಲ್ಲುವಂಥಾ ತಾಯ್ತನವನ್ನು ಸುಧಾಮೂರ್ತಿ ಸದಾ ಕಾಲವೂ ಕಾಯ್ದುಕೊಳ್ಳುತ್ತಾರೆ. ಅವರ ನೆರಳಿನಲ್ಲಿಯೇ ಬೆಳೆದು ಬಂದಿರುವ ರಮೇಶ್ ರೆಡ್ಡಿಯವರು ಕೂಡಾ ಅಂಥಾದ್ದೇ ಮನಸ್ಥಿತಿಯನ್ನು ರೂಢಿಸಿಕೊಂಡಿದ್ದಾರೆ. ಅಷ್ಟಕ್ಕೂ ಅವರೂ ಕೂಡಾ ಕಾರ್ಮಿಕರ ಬದುಕಿನ ಅನಿವಾರ್ಯತೆಗಳನ್ನು, ಸಂಕಟಗಳನ್ನು ತಾವೇ ಕಂಡು ಬೆಳೆದು ಬಂದವರು. ಆದ್ದರಿಂದಲೇ ಬಹು ಬೇಗನೆ ಚಿತ್ರರಂಗದ ಕಾರ್ಮಿಕರ ಸಂಕಷ್ಟಗಳಿಗೆ ಕಣ್ಣಾಗಿದ್ದಾರೆ. ಇದರ ಭಾಗವಾಗಿಯೇ ಸುಧಾಮೂರ್ತಿಯವರ ನೆರವು ಕನ್ನಡ ಚಿತ್ರರಂಗದ ಕಾರ್ಮಿಕ ಸಂಘಟನೆಗಳ ಸಮ್ಮುಖದಲ್ಲಿ ಹಲವಾರು ಕಾರ್ಮಿಕರಿಗೆ ಜೀವನಾವಶ್ಯಕ ಸಾಮಾಗ್ರಿಗಳನ್ನು ತಲುಪಿಸಲಾಗಿದೆ.

cinema Workers Infosys 2

ನಿರ್ಮಾಪಕ ರಮೇಶ್ ರೆಡ್ಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಲ್ಯಾಣ ನಿಧಿ ಅಧ್ಯಕ್ಷರಾದ ಸಾ.ರಾ ಗೋವಿಂದು, ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷರಾದ ರವಿಶಂಕರ್ ಮುಂತಾದ ಹಲವರ ಉಪಸ್ಥಿತಿಯಲ್ಲಿ ಇನ್ಫೋಸಿಸ್ ಫೌಂಡೇಷನ್ನಿನ ನೆರವನ್ನು ಕಾರ್ಮಿಕರಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಹೀಗೆ ಚಾಲನೆ ಪಡೆದುಕೊಂಡಿರುವ ಈ ನೆರವಿನ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಮೂಲಕ ಮುಂದುವರೆಯಲಿದೆ. ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ನೆರವಾಗಿರುವ ಸುಧಾಮೂರ್ತಿಯವರ ಕಾರ್ಯವನ್ನು ಮೆಚ್ಚಿಕೊಂಡು ಮಾತಾಡಿರುವ ರಮೇಶ್ ರೆಡ್ಡಿಯವರು `ಸುಧಾಮೂರ್ತಿಯವರ ಕಡೆಯಿಂದ ದೇಶ ಮತ್ತು ರಾಜ್ಯದಲ್ಲಿ ಅನೇಕ ಒಳ್ಳೆ ಕೆಲಸಗಳಾಗುತ್ತಿವೆ. ಈ ಕಷ್ಟ ಕಾಲದಲ್ಲಿ ಅವರು ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿ ತೋರಿಸಿರುವುದು ಸ್ವಾಗತಾರ್ಹ’ ಎಂದಿದ್ದಾರೆ.

cinema Workers Infosys 1

ಸುಧಾ ಮೂರ್ತಿಯವರ ಈ ಮಾನವೀಯ ನೆರವನ್ನು ಸಾ.ರಾ.ಗೋವಿಂದು ಕೂಡಾ ಮನದುಂಬಿ ಮೆಚ್ಚಿಕೊಂಡಿದ್ದಾರೆ. `ಈ ಕೊರೋನಾ ಕರ್ಫ್ಯೂನಿಂದಾಗಿ ಸಾವಿರಾರು ಚಲನಚಿತ್ರ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ದಿನನಿತ್ಯದ ಜೀವನಕ್ಕೂ ಪರದಾಡುವ ಸ್ಥಿತಿ ತಲುಪಿಕೊಂಡಿರುವ ಅಂಥವರಿಗೆಲ್ಲ ಸುಧಾಮೂರ್ತಿಯವರ ನೆರವು ನೀಡುತ್ತಿರೋದು ಸಂತಸದ ವಿಷಯ’ ಎಂದಿದ್ದಾರೆ.

cinema Workers Infosys

ಒಟ್ಟಾರೆಯಾಗಿ ಇದೊಂದು ಸಾರ್ಥಕ ಕಾರ್ಯಕ್ರಮ. ಅದು ಇದೀಗ ಗಾಳಿಪಟ-2 ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿಯವರ ಸಮ್ಮುಖದಲ್ಲಿಯೇ ನಡೆದಿರೋದು ನಿಜಕ್ಕೂ ಖುಷಿಯ ಸಂಗತಿ. ಯಾಕೆಂದರೆ, ರಮೇಶ್ ರೆಡ್ಡಿಯವರೂ ಕೂಡಾ ನಾನಾ ಪಡಿಪಾಟಲುಗಳನ್ನು ಅನುಭವಿಸುತ್ತಾ, ಗಾರೆ ಕಾರ್ಮಿಕರಾಗಿಯೂ ದುಡಿದು ಅನುಭವ ಹೊಂದಿರುವವರು. ಆ ಕಷ್ಟದ ದಿನಗಳ ನೆನಪಿನ ಪಸೆಯನ್ನು ಇನ್ನೂ ಮನಸಲ್ಲಿಟ್ಟುಕೊಂಡಿರುವ ಅವರೀಗ ಇಂಥಾದ್ದೊಂದು ಮಾನವೀಯ ಕಾರ್ಯಕ್ರಮದ ಭಾಗವಾಗಿರೋದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

TAGGED:Cinema IndustryCorona LockdownInfosys FoundationPublic TVRamesh ReddySA GovindsandalwoodSudhamoorthyಇನ್ಫೋಸಿಸ್ ಫೌಂಡೇಶನ್ಕೊರೊನಾ ಲಾಕ್‍ಡೌನ್ಪಬ್ಲಿಕ್ ಟಿವಿರಮೇಶ್ ರೆಡ್ಡಿಸಾ.ರಾ.ಗೋವಿಂದುಸಿನಿಮಾ ಉದ್ಯಮಸುಧಾಮೂರ್ತಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
3 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
7 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
7 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
9 hours ago

You Might Also Like

RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
58 seconds ago
RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
2 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
14 minutes ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
19 minutes ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
26 minutes ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?