ಬಡ ಕುಟುಂಬಗಳಿಗೆ ಮಾದಪ್ಪನ ದಾಸೋಹದಿಂದ ಅಕ್ಕಿ, ಮಾಸ್ಕ್ ವಿತರಣೆ

Public TV
1 Min Read
cng suresh kumar

ಚಾಮರಾಜನಗರ: ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿರುವ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಮಹದೇಶ್ವರಬೆಟ್ಟದ ವ್ಯಾಪ್ತಿಯ ಬಡ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಡಿತರ ವಿತರಣೆ ಮಾಡಿದರು.

ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ದಾಸೋಹ ನಡೆಯದ ಕಾರಣ ಅಲ್ಲಿ ದಾಸ್ತಾನು ಆಗಿರುವ ಸುಮಾರು 89 ಟನ್ ಅಕ್ಕಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಲಹೆಯಂತೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸುಮಾರು 6,500 ಬಡ ಕುಟುಂಬಗಳಿಗೆ ತಲಾ 5 ಕೆ.ಜಿ.ಅಕ್ಕಿಯನ್ನು ಸಚಿವ ಎಸ್.ಸುರೇಶ್ ಕುಮಾರ್ ವಿತರಿಸಿದರು.

vlcsnap 2020 04 19 21h24m27s100

ಲಾಕ್‍ಡೌನ್ ನಿಂದ ಕೆಲಸವಿಲ್ಲದೆ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಜನರಿಗೆ ಅನುಕೂಲವಾಗಲೆಂದು ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಗೋಪಿನಾಥಂ ಗ್ರಾಪಂ ವ್ಯಾಪ್ತಿಯ ಗ್ರಾಮಗಳು ಹಾಗೂ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಸುಮಾರು 6,500 ಬಡ ಕುಟುಂಬಗಳಿಗೆ ಅಕ್ಕಿ ಹಾಗೂ ಮಾಸ್ಕ್ ವಿತರಿಸಿದ್ದಾರೆ. ಈ ಮೂಲಕ ಬಡ ಜನತೆಗೆ ನೆರವಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *