Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇ ಅಂತ್ಯಕ್ಕೆ ಕೊರೊನಾ ಎರಡನೇ ಅಲೆಯ ತಡೆಗೆ ಸರ್ಕಾರದ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೇ ಅಂತ್ಯಕ್ಕೆ ಕೊರೊನಾ ಎರಡನೇ ಅಲೆಯ ತಡೆಗೆ ಸರ್ಕಾರದ ಸಿದ್ಧತೆ

Bengaluru City

ಮೇ ಅಂತ್ಯಕ್ಕೆ ಕೊರೊನಾ ಎರಡನೇ ಅಲೆಯ ತಡೆಗೆ ಸರ್ಕಾರದ ಸಿದ್ಧತೆ

Public TV
Last updated: April 21, 2020 3:49 pm
Public TV
Share
3 Min Read
Corona 25
SHARE

ಬೆಂಗಳೂರು: ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈ ನಡುವೆ ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಕೊರೊನಾ ಹರಡುವಿಕೆ ಎರಡನೇ ಅಲೆಯ ತಡೆಗಾಗಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಕೊರೊನಾ ಸೋಂಕು ಕಳೆದ 3.4 ದಿನಗಳಲ್ಲಿ ದ್ವಿಗುಣವಾಗ್ತಿದೆ. ದ್ವಿಗುಣದ ಪ್ರಮಾಣವನ್ನು 12 ದಿನಗಳಿಗೆ ತರಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

Corona 26

ಲಾಕ್‍ಡೌನ್ ಮೊದಲು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3.4 ರಿಂದ 7.5 ದಿನಗಳಲ್ಲಿ ದ್ವಿಗುಣವಾಗುತ್ತಿತ್ತು. ಕೊರೊನಾ ಹರಡುವಿಕೆಯ ದ್ವಿಗುಣ ಪ್ರಮಾಣ ಈ ವಾರದ ಕೊನೆಗೆ 10 ದಿನಗಳಿಗೆ ಮತ್ತು ಮೇ ಮೊದಲ ವಾರಕ್ಕೆ 12 ದಿನಗಳಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.

ಲಾಕ್‍ಡೌನ್ ಸಡಿಲಿಕೆಯಾಗುತ್ತಾ? ಸದ್ಯ ಕೊರೊನಾ ವೈರಸ್ ಸೋಂಕಿತರ ಪ್ರಮಾಣ ಕೇವಲ 3.4 ದಿನಗಳಲ್ಲಿ ಡಬಲ್ ಆಗ್ತಿದ್ದು, ಇದು ಕೆಟ್ಟ ಪರಿಸ್ಥಿತಿ. ಆದ್ರೆ ಈ ದಿನಗಳ ಸಂಖ್ಯೆ ಏಪ್ರಿಲ್ ಅಂತ್ಯ ಅಥವಾ ಮೇ ಮೊದಲ ವಾರಕ್ಕೆ 12ಕ್ಕೆ ತರಲು ಪ್ರಯತ್ನಿಸಲಾಗತ್ತಿದೆ. ಆದ್ರೆ ದೇಶದ ಆರ್ಥಿಕತೆ ದೃಷ್ಟಿಯಿಂದ ಮೇ 3ರ ನಂತರ ಕೆಲ ಭಾಗಗಳಲ್ಲಿ ಲಾಕ್‍ಡೌನ್ ನಲ್ಲಿ ಸಡಿಲಿಕೆ ನೀಡುವ ಸಾಧ್ಯತೆಗಳಿವೆ. ಕೊರೊನಾ ತಡೆಗೆ ಲಾಕ್‍ಡೌನ್ ಒಂದೇ ನಮ್ಮ ಬಳಿಯಲ್ಲಿರುವ ಮದ್ದು. ಲಾಕ್‍ಡೌನ್ ಸಡಿಲಿಕೆ ವೇಳೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುತ್ತವೆ ಎಂಬುವುದು ಆರೋಗ್ಯ ಸಚಿವಾಲಯದ ಮಾಹಿತಿ ಎಂದು ವರದಿಯಾಗಿದೆ.

home quarantine 2

ಕೊರೊನಾ ಎರಡನೇ ಅಲೆ: ಮೇ ಅಂತ್ಯ ಅಥವಾ ಜೂನ್ ಆರಂಭದಲ್ಲಿ ದೇಶದಲ್ಲಿ ಕೊರೊನಾ ಎರಡನೇ ಅಲೆ ಕಾಣಿಸಿಕೊಳ್ಳಬಹುದು. ಈ ಸಮಯದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿರುತ್ತದೆ. ಜನರು ಸಹ ಮುಂಜಾಗ್ರತ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸಿಂಗ್, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುತ್ತಿರುತ್ತಾರೆ. ಎರಡನೇ ಬಾರಿಗೆ ಕೊರೊನಾ ಅಲೆಯಲ್ಲಿ ಸೋಂಕಿತರ ಸಂಖ್ಯೆ 5 ದಿನಗಳಿಗಿಂತ ಕಡಿಮೆ ಅವಧಿಯಲ್ಲಿ ದ್ವಿಗುಣವಾಗದಂತೆ ನೋಡಿಕೊಳ್ಳುವ ಸವಾಲು ಕೇಂದ್ರದ ಮುಂದಿದೆ.

mask

ಲಾಕ್‍ಡೌನ್ ಸಡಿಲಿಕೆ ಬಳಿಕ ನಗರ, ಅರೆ ನಗರ, ಪಟ್ಟಣಗಳಲ್ಲಿ ವಾಸಿಸುವ ಜನರ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುವುದು. ಈ ಪ್ರದೇಶಗಳು ಗ್ರಾಮೀಣ ಭಾಗಗಳಿಗಿಂತ ಹೆಚ್ಚು ಕಠಿಣವಾಗಿರುತ್ತದೆ. ಮುಂಬೈ, ಇಂದೋರ್ ಮತ್ತು ಚಂಡೀಗಢನಲ್ಲಿ ಯಾವುದೇ ಒಳ್ಳೆಯ ಬೆಳವಣಿಗೆಗಳು ಕಾಣಿಸುತ್ತಿಲ್ಲ. ಕೆಲವೊಂದು ನಗರಗಳು ಕೊರೊನಾ ಹೋರಾಟಕ್ಕೆ ಸನ್ನದ್ಧವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಜನರು ಸಹ ಕೋವಿಡ್-19 ವಿರುದ್ಧದ ಯುದ್ಧಕ್ಕೆ ಸಾಥ್ ನೀಡುತ್ತಿದ್ದಾರೆ.

Corona Virus 4 1

ಯಾವ ಪ್ರದೇಶಗಳಿಗೆ ಲಾಕ್‍ಡೌನ್ ಸಡಿಲಿಕೆ: ಮುಂದಿನ ದಿನಗಳಲ್ಲಿ ಪ್ರದೇಶವಾರು ಕೊರೊನಾ ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಕೊರೊನಾ ಪ್ರಕರಣಗಳ ಏರಿಕೆ ಮತ್ತು ಇಳಿಕೆಯನ್ನ ಗಣನೆಗೆ ತೆಗೆದುಕೊಂಡು ಹಂತ ಹಂತವಾಗಿ ಲಾಕ್‍ಡೌನ್ ಸಡಿಲಿಕೆ ಮತ್ತು ವಿನಾಯ್ತಿಗಳನ್ನ ನೀಡಲಾಗುತ್ತದೆ. ಈ ಪ್ರಕ್ರಿಯೆ ಸೆಪ್ಟೆಂಬರ್ ವರೆಗೂ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

corona 9 1

ಕೊರೊನಾ ಹರಡುವಿಕೆ ಅಲೆಯು ಮಾರ್ಚ್ ನಂತೆ ಹೆಚ್ಚಾಗದಂತೆ ತಡೆಯಲು ಎಲ್ಲ ಮುಂಜಾಗ್ರತ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳುತ್ತಿದ್ದು, 3.4 ಅಥವಾ ಅದಕ್ಕಿಂತ ಕಡಿಮೆ ದಿನಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳದಂತೆ ಹಾಗೂ ಹೊಸ ಪ್ರಕರಣಗಳು ಬರದಂತೆ ಕಾರ್ಯ ನಿರ್ವಸಹಿಸಬೇಕಿದೆ. ಹೀಗಾಗಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳನ್ನು ಉತ್ತಮವಾಗಿ ಸಜ್ಜುಗೊಳಿಸಬೇಕಿದೆ.

ration

ಸ್ಪಷ್ಟ ಚಿತ್ರಣ ಸಿಗುತ್ತಾ?: ಮೇ 3ರ ನಂತರ ಕೊರೊನಾ ಸಂಬಂಧಿಸಿದಂತೆ ಸ್ಪಷ್ಟ ಚಿತ್ರಣ ಸಿಗುತ್ತಾ ಅನ್ನೋ ಪ್ರಶ್ನೆಗೆ ಸದ್ಯ ಯಾರ ಬಳಿಯೂ ಉತ್ತರವಿಲ್ಲ. ಮೇ 3ರ ನಂತರ ತೆಗೆದುಕೊಳ್ಳಲು ನಿರ್ಣಯಗಳು ಸರ್ಕಾರ ವಿಂಗಡಿಸಿರುವ ರೆಡ್, ಆರೆಂಜ್ ಮತ್ತು ಗ್ರೀನ್ ಝೋನ್ ಗಳ ನಿರ್ಧರಿಸಲಿದೆ. ಈ ಮೂರು ವಲಯಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಇದರ ಆಧಾರದ ಮೇಲೆ ಲಾಕ್‍ಡೌನ್ ಸಡಿಲಿಕೆ ಯಾವ ಭಾಗ, ಜಿಲ್ಲೆಗೆ ನೀಡಬೇಕು ಎಂಬುವುದು ನಿರ್ಧಾರವಾಗಲಿದೆ.

lockdown corona

ಭಾರತದಲ್ಲಿ ಗುರುತಿಸಲಾಗಿರುವ ರೆಡ್ ಝೋನ್ ಗಳಿಂದಲೇ ಶೇ.80ರಷ್ಟು ಕೊರೊನಾ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಪ್ರದೇಶದಲ್ಲಿ ನಾಲ್ಕು ದಿನಗಳ ಕಡಿಮೆ ಅವಧಿಯಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಇದುವರೆಗೂ 321 ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಪ್ರಕರಣಗಳ ಕಂಡು ಬಂದಿಲ್ಲ. ಕಳೆದ ಏಳು ದಿನಗಳಲ್ಲಿ 77 ಜಿಲ್ಲೆಗಳಲ್ಲಿ, 14 ದಿನಗಳಲ್ಲಿ 62 ಜಿಲ್ಲೆಗಳು, 21 ದಿನಗಳಲ್ಲಿ 17 ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಕಂಡು ಬಂದಿಲ್ಲ. ಇನ್ನು ಮೂರು ಜಿಲ್ಲೆಗಳಾದ ಮಾಹೆ, ಕೊಡಗು, ಪುರಿ ಗರ್ಹಾವಲ್ ಗಳಲ್ಲಿ ಕಳೆದ 28 ದಿನಗಳಿಂದು ಒಂದು ಪ್ರಕರಣಗಳು ಬೆಳಕಿಗೆ ಬಂದಿಲ್ಲ.

Lockdown 7

ಸರ್ಕಾರ ಚೀನಾ, ದಕ್ಷಿಣ ಕೊರಿಯಾ ದೇಶಗಳು ಅನುಸರಿಸಿದ ನಿಯಮಗಳನ್ನು ಅಧ್ಯಯನ ನಡೆಸುತ್ತಿದೆ. ಲಾಕ್‍ಡೌನ್ ಬಳಿಕ ಜೀವನ ಶೈಲಿ ಹೇಗಿರಬೇಕು? ಆರ್ಥಿಕ ಸ್ಥಿತಿಗತಿಯ ಸುಧಾರಣೆ ಸೇರಿದಂತೆ ಹಲವು ಆಯಾಮಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ.

TAGGED:Corona LockdownCorona VirusCovid 19indiaIndia LockdownLockdownPublic TVಕೊರೊನಾ ಲಾಕ್‍ಡೌನ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಭಾರತಭಾರತ ಲಾಕ್‍ಡೌನ್ಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Aiden Markram
Cricket

ವಿಂಡೀಸ್‌ ವಿರುದ್ಧ ಆಫ್ರಿಕಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಭಾರತದ ಸೆಮಿ ಆಸೆ ಜೀವಂತ

Public TV
By Public TV
30 minutes ago
Train
Bengaluru City

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

Public TV
By Public TV
58 minutes ago
Kerala Thrissur Elephant throws priest
Crime

ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

Public TV
By Public TV
1 hour ago
Mayank Agarwal
Cricket

ಸಂಕಷ್ಟದಲ್ಲಿ ಕರ್ನಾಟಕ – ಶತಕದೊಂದಿಗೆ ಮಯಾಂಕ್‌ ಹೋರಾಟ

Public TV
By Public TV
1 hour ago
ganja peddler
Bengaluru City

ಬೆಂಗಳೂರಲ್ಲಿ ಕೇರಳ ಪೊಲೀಸರ ಬೇಟೆ – ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

Public TV
By Public TV
1 hour ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?