Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ

Bengaluru City

ಕರ್ನಾಟಕದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ

Public TV
Last updated: April 25, 2020 10:24 am
Public TV
Share
2 Min Read
PLASHA TERAPHY
SHARE

ಬೆಂಗಳೂರು: ಇವತ್ತಿನಿಂದ ಕೊರೊನಾ ರೋಗಕ್ಕೆ ಕರ್ನಾಟಕದಲ್ಲಿ ಪ್ಲಾಸ್ಮಾ ಚಿಕಿತ್ಸೆಯ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿದೆ. ಕೇಂದ್ರ ಸರ್ಕಾರದ ಸಂಸ್ಥೆ ಆಗಿರುವ ಐಸಿಎಂಆರ್ ಕೊಟ್ಟಿರುವ ಅನುಮತಿ ಮೇರೆಗೆ ಬೆಂಗಳೂರಲ್ಲಿ ಕ್ಯಾನ್ಸರ್ ಚಿಕಿತ್ಸೆ ಆಸ್ಪತ್ರೆ ಹೆಚ್‍ಸಿಜಿ ಪ್ಲಾಸ್ಮಾ ಥೆರಪಿಯ ಪ್ರಯೋಗ ಕೈಗೊಳ್ಳಲಿದೆ.

ರಾಜ್ಯದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ಕೊರೊನಾದಿಂದ ಗುಣಮುಖರಾದವರೊಬ್ಬರು ತಮ್ಮ ರಕ್ತದ ಪ್ರತಿರೋಧಕ ಕಣಗಳನ್ನು ದಾನ ಮಾಡುತ್ತಾರೆ. ಅವರಿಂದ ಪ್ರತಿರೋಧಕ ಕಣಗಳನ್ನು ಪಡೆದು ಕೊರೊನಾ ಸೋಂಕಿತ ವ್ಯಕ್ತಿಯ ರಕ್ತಕ್ಕೆ ಸೇರಿಸಲಾಗುತ್ತದೆ. ಈ ಚಿಕಿತ್ಸೆಯೇ ಪ್ಲಾಸ್ಮಾ ಥೆರಪಿಯಾಗಿದೆ.

#COVID19 ಸೋಂಕಿತ ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ
ಕಾನ್ವಾಲ್ ಸೆಂಟ್ ಪ್ಲಾಸ್ಮಾ ಥೆರಫಿ ಚಿಕಿತ್ಸೆ ನೀಡುವ ಕಾರ್ಯಕ್ಕೆ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. @mla_sudhakar ಹಾಗೂ ಡಾ. ಸಿ ಆರ್ ಜಯಂತಿಯವರು ಉಪಸ್ಥಿತರಿದ್ದರು pic.twitter.com/4PB6gEsjXq

— B Sriramulu (@sriramulubjp) April 25, 2020

ಇಂದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿದೆ. ಇದರ ಸಫಲತೆ ಆಧರಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ಲಾಸ್ಮಾ ಥೆರಪಿಗೆ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತಿಯಲ್ಲಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸಾ ಕ್ರಮವನ್ನು ಸಚಿವರಾದ ಸುಧಾಕರ್ ಮತ್ತು ಶ್ರೀರಾಮುಲು ವೀಕ್ಷಿಸಿದರು.

ಏನಿದು ಪ್ಲಾಸ್ಮಾ ಥೆರಪಿ?
* ಪ್ಲಾಸ್ಮಾ ಎಂದರೆ ರಕ್ತದ ಕಣ (ಹಳದಿ ದ್ರವಾಂಶ). ರಕ್ತದಲ್ಲಿರುವ ರೋಗ ನಿರೋಧಕ ಅಂಶ ಇರುವುದು ಪ್ಲಾಸ್ಮಾದಲ್ಲಿ
* ಪ್ಲಾಸ್ಮಾ ಥೆರಪಿ ಎಂದರೆ ಗುಣಮುಖರಾಗಿರುವ ವ್ಯಕ್ತಿಯ ರಕ್ತದಲ್ಲಿರುವ ಪ್ಲಾಸ್ಮಾವನ್ನು ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಯ ರಕ್ತಕ್ಕೆ ಇಂಜೆಕ್ಟ್ ಮಾಡುವುದು.
* ಗುಣಮುಖರಾದವರ ರಕ್ತದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತೆ. ಇದೇ ರಕ್ತದಲ್ಲಿರುವ ಪ್ಲಾಸ್ಮಾವನ್ನು ರೋಗಿಗೆ ನೀಡಿದರೆ ಆಗ ಆ ರೋಗಿಯ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
* ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿಯ ಪ್ಲಾಸ್ಮಾವನ್ನು ಕೊರೊನಾದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗೆ ಇಂಜೆಕ್ಟ್ ಮಾಡಿದರೆ ಆ ರೋಗಿಯ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
* ಪ್ಲಾಸ್ಮಾ ಚಿಕಿತ್ಸೆಯಿಂದ ರೋಗಿಗಳು 3 ರಿಂದ 7 ದಿನದೊಳಗೆ ಗುಣಮುಖರಾಗುವ ನಿರೀಕ್ಷೆ

vlcsnap 2020 04 25 09h45m14s232

ಯಾರು ಪ್ಲಾಸ್ಮಾ ದಾನ ಮಾಡಬಹುದು?
* ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿ ಪ್ಲಾಸ್ಮಾ ದಾನ ಮಾಡಬಹುದು
* ಕೊರೊನಾದಿಂದ ಗುಣಮುಖರಾದ ವ್ಯಕ್ತಿ 28 ದಿನಗಳ ಬಳಿಕ ಪ್ಲಾಸ್ಮಾ ದಾನ ಮಾಡಬಹುದು
* ಒಬ್ಬ ರೋಗಿಯನ್ನ ಗುಣಪಡಿಸಲು 200-250 ಮಿಲಿ ಲೀಟರ್ ಪ್ಲಾಸ್ಮಾ ಅಗತ್ಯ
* ಒಬ್ಬ ದಾನಿಯಿಂದ ಇಬ್ಬರಿಂದ ಐವರು ರೋಗಿಗಳನ್ನು ಗುಣಪಡಿಸಬಹುದು
* ರಕ್ತದಾನಕ್ಕಿಂತ ಪ್ಲಾಸ್ಮಾ ದಾನ ಭಿನ್ನ
* ರಕ್ತದಲ್ಲಿರುವ ಪ್ಲಾಸ್ಮಾವನ್ನಷ್ಟೇ ಸಂಗ್ರಹಿಸಿ ರಕ್ತವನ್ನು ಮತ್ತೆ ದಾನಿಗಳ ದೇಹಕ್ಕೆ ಬಿಡಲಾಗುತ್ತದೆ
* ಒಬ್ಬ ದಾನಿ ವಾರದಲ್ಲಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಬಹುದು

ಈ ಹಿಂದೆ ದೆಹಲಿಯಲ್ಲಿ 49 ವರ್ಷದ ಕೊರೊನಾ ರೋಗಿಯನ್ನು ಪ್ಲಾಸ್ಮಾ ಚಿಕಿತ್ಸೆ ಮೂಲಕ ಗುಣಪಡಿಸಲಾಗಿದೆ. ಅಮೆರಿಕ, ಚೀನಾದಲ್ಲಿ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಲಾಗಿದ್ದು, ಸಮಾಧಾನಕಾರಿ ಫಲಿತಾಂಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೇರಳ, ಗುಜರಾತ್, ಪಂಜಾಬ್‍ನಲ್ಲೂ ಪ್ಲಾಸ್ಮಾ ಥೆರಪಿಗೆ ಅನುಮತಿ ಸಿಕ್ಕಿದೆ.

TAGGED:bengaluruCoronaPlasma TherapyPublic TVtherapyಕೊರೊನಾಚಿಕಿತ್ಸೆಪಬ್ಲಿಕ್ ಟಿವಿಪ್ಲಾಸ್ಮಾ ಥೆರಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
6 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
7 hours ago
01
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 1

Public TV
By Public TV
7 hours ago
02 1
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 2

Public TV
By Public TV
7 hours ago
03 1
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 3

Public TV
By Public TV
7 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?