ನವದೆಹಲಿ: ಮೇ 17ರವರೆಗೂ ಲಾಕ್ಡೌನ್ ವಿಸ್ತರಣೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವರು ಹಾಗೂ ಪ್ರಮುಖ ಅಧಿಕಾರಿಗಳ ಜೊತೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ಹೀಗಾಗಿ ಆರ್ಥಿಕ ಉತ್ತೇಜನಕ್ಕೆ ಮತ್ತೊಂದು ಆರ್ಥಿಕ ಪ್ಯಾಕೇಜ್ ಬಿಡುಗಡೆ ಮಾಡಬಹುದು ಎಂದು ಮೂಲಗಳು ಹೇಳುತ್ತಿವೆ.
Prime Minister Narendra Modi held a meeting today to deliberate on issues & reforms required in the Agriculture sector. Finance Minister Nirmala Sitharaman, Home Minister Amit Shah and Agriculture Minister Narendra Singh Tomar were also present. pic.twitter.com/b1nEHkQntM
— ANI (@ANI) May 2, 2020
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲ ಸೀತರಾಮನ್, ಅತಿ ಸಣ್ಣ, ಸಣ್ಣ ಹಾಗೂ ಮದ್ಯಮ ಉದ್ದಿಮೆಗಳ ಸಚಿವರು, ಕೃಷಿ ಇಲಾಖೆಯ ಅಧಿಕಾರಿಗಳ ಜೊತೆಗೆ ನರೇಂದ್ರ ಮೋದಿ ವಿಸ್ತ್ರತ ಚರ್ಚೆ ನಡೆಸಿದ್ದಾರೆ. ಸಭೆ ಹಿನ್ನೆಲೆ ಶುಕ್ರವಾರದಂದು ಮಾಸಿಕ ಜಿಎಸ್ಟಿ ಸಂಗ್ರಹ ಸಂಖ್ಯೆಯ ಮಾಹಿತಿ ನೀಡುವುದನ್ನು ಕೇಂದ್ರ ಹಣಕಾಸು ಸಚಿವಾಲಯವು ಮುಂದೂಡಿತ್ತು. ಈಗ ದೇಶದ ಆರ್ಥಿಕತೆಯನ್ನು ಉತ್ತೇಜಿಸಲು ಯೋಜಿಸಿರುವ ಹಲವಾರು ಉಪಕ್ರಮಗಳ ಬಗ್ಗೆ ನಿರ್ಮಲ ಸೀತರಾಮನ್ ಪ್ರಧಾನಿ ಅವರಿಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ನಾಗರಿಕ ವಿಮಾನಯಾನ, ಕಾರ್ಮಿಕ ಹಾಗೂ ವಿದ್ಯುತ್ ಸೇರಿದಂತೆ ವಿವಿಧ ಸಚಿವಾಲಯದೊಂದಿಗೆ ಚರ್ಚೆ ನಡೆಸಲಾಗಿದೆ. ದೇಶಿ, ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ದೇಶದಲ್ಲಿ ಸಣ್ಣ ಉದ್ಯಮಗಳಿಗೆ ಪುನರುಜ್ಜೀವನ ನೀಡುವ ಬಗ್ಗೆ ವಾಣಿಜ್ಯ ಹಾಗೂ ಎಂಎಸ್ಎಂಇ ಸಚಿವಾಲಯದೊಂದಿಗೆ ವಿಸೃತವಾದ ಚರ್ಚೆ ನಡೆಸಲಾಗಿದೆ.
ಮಾರ್ಚ್ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು 1.7 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿತ್ತು. ಈ ಪ್ಯಾಕೇಜ್ನಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ಪ್ರಕಟಿಸಲಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರದ ಎರಡನೇ ಪ್ಯಾಕೇಜ್ನಲ್ಲಿ ಆರ್ಥಿಕತೆ ಚೇತರಿಕೆಗೆ ಟಾನಿಕ್ ನೀಡಬಹುದು ಎಂದು ಅಂದಾಜಿಸಲಾಗಿದೆ.