Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ ಇಂದು 22 ಮಂದಿಗೆ ಕೊರೊನಾ, ಇಬ್ಬರು ಸಾವು

Public TV
Last updated: May 5, 2020 6:12 pm
Public TV
Share
4 Min Read
Karnataka Corona
SHARE

– ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ, 29 ಮಂದಿ ಬಲಿ
– ದಾವರಣಗೆರೆಯಲ್ಲಿ ಕೊರೊನಾ ಸ್ಫೋಟ
– ಹೌಸ್ ಕೀಪರ್, ಕೂಲಿ ಕಾರ್ಮಿಕನಿಗೆ ಡೆಡ್ಲಿ ವೈರಸ್

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಇಂದು ಒಂದೇ ದಿನದಲ್ಲಿ 22 ಮಂದಿಗೆ ಸೋಂಕು ದೃಢಪಟ್ಟಿದೆ. ಅಷ್ಟೇ ಅಲ್ಲದೆ ಇಬ್ಬರು ಹೆಮ್ಮಾರಿ ವೈರಸ್‍ಗೆ ಬಲಿಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಹಾಗೂ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇವತ್ತು ಬಾಗಲಕೋಟೆ, ಮೈಸೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಮೂವರು ಸೇರಿದಂತೆ ಒಟ್ಟು 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ದಾವಣಗೆರೆಯಲ್ಲಿ ಕೊರೊನಾ ಸ್ಫೋಟಗೊಂಡಂತೆ ಕಾಣುತ್ತಿದೆ. ಕೊರೊನಾದಿಂದ ಮುಕ್ತವಾಗಿ ಹಸಿರು ವಲಯದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ಯುವಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಯುವಕನಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು.

Corona aa 1

ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 5 ವರ್ಷದ ಬಾಲಕ ಸೇರಿದಂತೆ 12 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆ ಕಂಡಿದೆ. ಇತ್ತ ಹಸಿರು ವಲಯದಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮೂವರಿಗೆ, ಬಳ್ಳಾರಿ ಜಿಲ್ಲೆಯ ಇಬ್ಬರಿಗೆ, ದಕ್ಷಿಣ ಕನ್ನಡ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ತಗುಲಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ ವಾಸವಾಗಿದ್ದ ಒಂದೇ ಕೋಣೆಯಲ್ಲಿ 7 ಜನರು ವಾಸವಾಗಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಸೋಂಕಿತ ವ್ಯಕ್ತಿ ಕ್ವಾರಂಟೈನ್ ಮಾಡಿದ್ದ ಹೋಟೆಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದು, ಇಲ್ಲಿ 72 ಜನರು ಉಳಿದುಕೊಂಡಿದ್ದರು. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ 13 ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸೋಂಕು ಹೇಗೆ ತಗುಲಿದೆ ಎಂಬುವುದು ತಿಳಿದು ಬಂದಿಲ್ಲ.

DVG 1 1

ಬೆಂಗಳೂರಿನ ಮಂಗಮ್ಮನ ಪಾಳ್ಯದ 45 ವರ್ಷದ ಕೂಲಿ ಕಾರ್ಮಿಕನಿಗೆ ಸೋಂಕು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಯನಗರದ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾದ ಕೋವಿಡ್-19 ಘಟಕಕ್ಕೆ ಶಿಫ್ಟ್ ಮಾಡಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರ್ಮಿಕ ಐದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದನು.

ಸೋಂಕಿತರ ವಿವರ:
1. ರೋಗಿ 652: ಬೆಂಗಳೂರಿನ 30 ವರ್ಷದ ಮಹಿಳೆ. ಸೋಂಕು ಸಂಪರ್ಕ ಮಾಹಿತಿಯನ್ನು ಪತ್ತೆ ಹಚ್ಚಲಾಗುತ್ತಿದೆ.
2. ರೋಗಿ 653: ಬೆಂಗಳೂರಿನ 40 ವರ್ಷದ ಪುರುಷ. ರೋಗಿ 420ರ ಜೊತೆ ಸಂಪರ್ಕ
3. ರೋಗಿ 654: ಬೆಂಗಳೂರಿನ 45 ವರ್ಷದ ಪುರುಷ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.
4. ರೋಗಿ 655: ಬಾಗಲಕೋಟೆಯ 29 ವರ್ಷದ ಮಹಿಳೆ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.
5. ರೋಗಿ 656: ಬಾಗಲಕೋಟೆಯ 29 ವರ್ಷದ ಪುರುಷ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.

corona hospital

6. ರೋಗಿ 657: ಬಳ್ಳಾರಿ 43 ವರ್ಷದ ಪುರುಷ. ಉತ್ತರಾಖಂಡಕ್ಕೆ ಪ್ರಯಾಣದ ಹಿನ್ನೆಲೆ
7. ರೋಗಿ 658: ದಕ್ಷಿಣ ಕನ್ನಡ 51 ವರ್ಷದ ಪುರುಷ. ರೋಗಿ 536ರ ಜೊತೆ ಸಂಪರ್ಕದಲ್ಲಿದ್ದರು.
8. ರೋಗಿ 659: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ 28 ವರ್ಷದ ಯುವಕ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.

ಮಧ್ಯಾಹ್ನದ ವರದಿ:
9. ರೋಗಿ-660: ದಾವಣಗೆರೆಯ 30 ವರ್ಷದ ಪುರುಷ. ರೋಗಿ-556ರ ಸಂಪರ್ಕದಲ್ಲಿದ್ದರು.
10. ರೋಗಿ-660: ದಾವಣಗೆರೆಯ 25 ವರ್ಷದ ಪುರುಷ. ರೋಗಿ-556ರ ಸಂಪರ್ಕದಲ್ಲಿದ್ದರು.
11. ರೋಗಿ-662: ದಾವಣಗೆರೆಯ 50 ವರ್ಷದ ಮಹಿಳೆ. ರೋಗಿ-556ರ ದ್ವಿತೀಯ ಸಂಪರ್ಕದಲ್ಲಿದ್ದರು.
12. ರೋಗಿ-663: ದಾವಣಗೆರೆಯ 51 ವರ್ಷದ ಪುರುಷ. ರೋಗಿ-556ರ ದ್ವಿತೀಯ ಸಂಪರ್ಕದಲ್ಲಿದ್ದರು.

DVG 4

13. ರೋಗಿ-664: ದಾವಣಗೆರೆಯ 48 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದರು.
14. ರೋಗಿ-665: ದಾವಣಗೆರೆಯ 52 ವರ್ಷದ ಮಹಿಳೆ. ರೋಗಿ-556ರ ಸಂಪರ್ಕದಲ್ಲಿದ್ದರು.
15. ರೋಗಿ-666: ದಾವಣಗೆರೆಯ 36 ವರ್ಷದ ಮಹಿಳೆ. ರೋಗಿ-581ರ ಸಂಪರ್ಕದಲ್ಲಿದ್ದರು.
16. ರೋಗಿ-667: ದಾವಣಗೆರೆಯ 15 ವರ್ಷದ ಬಾಲಕಿ. ರೋಗಿ-581ರ ಸಂಪರ್ಕದಲ್ಲಿದ್ದಳು.
17. ರೋಗಿ-668: ದಾವಣಗೆರೆಯ 19 ವರ್ಷದ ಯುವತಿ. ರೋಗಿ-581ರ ಸಂಪರ್ಕದಲ್ಲಿದ್ದರು.
18. ರೋಗಿ-669: ದಾವಣಗೆರೆಯ 27 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದಳು.
19. ರೋಗಿ-670: ದಾವಣಗೆರೆಯ 42 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದರು.

coronavirus 1 1000x600 1

20. ರೋಗಿ-671: ದಾವಣಗೆರೆಯ 5 ವರ್ಷದ ಬಾಲಕ. ರೋಗಿ-581ರ ಸಂಪರ್ಕದಲ್ಲಿದ್ದರು.
21. ರೋಗಿ-672: ಹಾವೇರಿ ಜಿಲ್ಲೆ ಸವನೂರಿನ 40 ವರ್ಷದ ಪುರುಷ. ರೋಗಿ-639ರ ಸಂಪರ್ಕದಲ್ಲಿದ್ದರು.
22. ರೋಗಿ-673: ಧಾರವಾಡದ 26 ವರ್ಷದ ಪುರುಷ. ಮುಂಬೈ ಪ್ರವಾಸದ ಹಿನ್ನಲೆ ಹೊಂದಿದ್ದರು.

ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ 18 ಜನರ ತಂಡದೊಂದಿಗೆ ಉತ್ತರಾಖಂಡ ಪ್ರವಾಸಕೈಗೊಂಡಿದ್ದರು. ಸೋಂಕಿತನ ಸಂಪರ್ಕದಲ್ಲಿದ್ದ 12 ಜನರ ಆರೋಗ್ಯದ ಮೇಲೆ ನಿಗಾ ಇಡಲಾಗಿದ್ದು, ಜಿಲ್ಲಾಡಳಿತ ಎಲ್ಲರ ವರದಿಗಾಗಿ ಕಾಯುತ್ತಿದೆ.

coronavirus india

ರೋಗಿ ನಂಬರ್ 640 (62 ವರ್ಷ)ದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಅಸ್ತಮಾ, ಶ್ವಾಸಕೋಶ ಕಾಯಿಲೆ, ಬೊಜ್ಜು ಸೇರಿ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದು, 3-4 ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಈ ವೃದ್ಧೆಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ ರೋಗಿ ನಂಬರ್ 228 (13 ವರ್ಷ)ದ ಬಾಲಕನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನೆಲೆ ಸೋಂಕು ತಗುಲಿದ್ದು ಧೃಢಪಟ್ಟಿದೆ. ಸಕಲ ವೈದ್ಯಕೀಯ, ಧಾರ್ಮಿಕ ಶಿಷ್ಠಾಚಾರದಂತೆ ವೃದ್ಧೆಯ ಅಂತ್ಯಕ್ರಿಯೆಯನ್ನು ಅಧಿಕಾರಿಗಳು ನೆರವೇರಿಸಿದ್ದಾರೆ.

ರೋಗಿ-662 (50 ವರ್ಷದ) ದಾವಣಗೆರೆ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ ವೈರಲ್ ನ್ಯುಮೋನಿಯಾ ಇತ್ತು. ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

TAGGED:CoronavirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ದಾವಣಗೆರೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

modi trump
Latest

ಟ್ಯಾರಿಫ್‌ ವಾರ್‌ ನಡುವೆ ಮುಂದಿನ ತಿಂಗಳು ಅಮೆರಿಕಗೆ ಮೋದಿ ಭೇಟಿ

Public TV
By Public TV
3 minutes ago
school bus fired
Bengaluru City

ಬೆಂಗಳೂರು| ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ – ವ್ಯಕ್ತಿ ಸಜೀವ ದಹನ

Public TV
By Public TV
31 minutes ago
Dog bite 1
Bidar

ಬೀದರ್‌ನಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ – ಇತ್ತ ಬ್ರಿಮ್ಸ್‌ನಲ್ಲಿ ಫ್ರೀ ಇಂಜೆಕ್ಷನ್ ಕೊಡದೇ ದೋಖಾ

Public TV
By Public TV
36 minutes ago
Asha 2
Bengaluru City

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

Public TV
By Public TV
1 hour ago
Move the Mudola BCM office to the Taluk Administration Building 2
Bagalkot

ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

Public TV
By Public TV
9 hours ago
01 5
Big Bulletin

ಬಿಗ್‌ ಬುಲೆಟಿನ್‌ 12 August 2025 ಭಾಗ-1

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?