ಅನುಮಾನಾಸ್ಪದ ರೀತಿಯಲ್ಲಿ ಕಾಫಿ ಉದ್ಯಮಿಯ ಕೊಲೆ!

Public TV
1 Min Read
MDK MURDER

ಮಡಿಕೇರಿ: ಕಾಫಿ ಉದ್ಯಮಿ ಅನುಮಾನಾಸ್ಪದ ರೀತಿಯಲ್ಲಿ ಕೊಲೆಯಾಗಿರು ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ.

ಉದ್ಯಮಿ ಪ್ರವೀಣ್ ಪೂವಪ್ಪ (42) ರಕ್ತದ ಮಡುವಿನಲ್ಲಿ ಬಿದ್ದು ಕೊಲೆಯಾಗಿರುವ ವ್ಯಕ್ತಿ. ಕುವೆಂಪು ಬಡಾವಣೆಯ ಕೆ.ಪಿ.ಸುಗುಣಾ ಎಂಬುವರ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದ್ದು, ವಿವಾಹಿತ ಪ್ರವೀಣ್ ಜೊತೆಯಲ್ಲಿ ಪತ್ನಿ ವಾಸ ಇರಲಿಲ್ಲ ಎಂಬ ಮಾಹಿತಿ ಲಭಿಸಿದೆ.

MDK MURDER A

ಕಳೆದ ರಾತ್ರಿ ಕಾರಿನಲ್ಲಿ ಅಪರಿಚಿತರು ಮನೆಗೆ ಬಂದು ಹೋಗಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಘಟನೆ ಸಂಬಂಧ ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *