Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ – ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ

Public TV
Last updated: May 14, 2020 8:10 pm
Public TV
Share
1 Min Read
vegetable market 1 e1589466985710
Onions displayed at APMC Yard during Lorry strike which entered 10th day in Bengaluru on Saturday. -KPN ### Lorry strike 10th day
SHARE

ಬೆಂಗಳೂರು: ಪ್ರತಿಪಕ್ಷಗಳು, ರೈತರ ವಿರೋಧದ ನಡುವೆಯೂ ವಿವಾದಾತ್ಮಕ ಕರ್ನಾಟಕ ಕೃಷಿ ಉತ್ಪನ್ನಗಳ ಮಾರಾಟ ನಿಯಂತ್ರಣ ಮತ್ತು ಅಭಿವೃದ್ಧಿ (ಎಪಿಎಂಸಿ) ಮಸೂದೆ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮಂಗಳವಾರವಷ್ಟೇ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದರು. ಕಾರ್ಪೊರೇಟ್ ಕಂಪನಿಗಳಿಗೆ ಕೆಂಪು ಹಾಸು ಹಾಸುವ ಈ ಸುಗ್ರೀವಾಜ್ಞೆ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಸುಗ್ರೀವಾಜ್ಞೆಯನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಂಪುಟ ಸಮಿತಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ.

RCR APMC

ವರ್ತಕರ ಏಕಸ್ವಾಮ್ಯ ಇಲ್ಲದಂತಾಗುತ್ತದೆ. ಈ ಕಾಯಿದೆಯಿಂದ ರೈತರಿಗೆ ಹೆಚ್ಚು ಅನುಕೂಲ ಆಗಲಿದೆ ಅಂತ ಸಮರ್ಥಿಸಿಕೊಂಡಿದ್ದರು. ಹೀಗಾಗಿ, ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಎಪಿಎಂಸಿ ಕಾಯಿದೆ ಜೊತೆಗೆ ಬಿಡಿಎ ಕಾಯಿದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೂ ಕೂಡ ಕ್ಯಾಬಿನೆಟ್ ಸಮ್ಮತಿಸಿದೆ.

ಎಪಿಎಂಸಿ ಸುಗ್ರೀವಾಜ್ಞೆಯಲ್ಲಿ ಏನಿದೆ?
ಎಪಿಎಂಸಿಯ 2 ಸೆಕ್ಷನ್‍ಗಳಿಗೆ ಮಾತ್ರ ತಿದ್ದುಪಡಿ ಮಾಡಲಾಗಿದೆ. ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಬೇಕು ಎಂಬ ಸೆಕ್ಷನ್ ಗೆ ತಿದ್ದುಪಡಿ ಮಾಡಲಾಗಿದ್ದು ಇನ್ಮುಂದೆ ರೈತರು ಮಾರುಕಟ್ಟೆ ಮಾತ್ರವಲ್ಲ, ಎಲ್ಲಿ ಬೇಕಾದರೂ ಮಾರಬಹುದಾಗಿದೆ. ಆಯಾ ತಾಲೂಕು ಮಾರುಕಟ್ಟೆ ಸಮಿತಿ ಇದ್ದೇ ಇರುತ್ತದೆ. ಆದರೆ, ಮಾರುಕಟ್ಟೆ ಒಳಗೆ ಮಾತ್ರ ಸಮಿತಿಗೆ ನಿಯಂತ್ರಣ ಇರುತ್ತದೆ. ರಾಜ್ಯ ಸರ್ಕಾರ ಮಾರುಕಟ್ಟೆ ಸಮಿತಿ ವ್ಯಾಪ್ತಿಯ ಅಧಿಕಾರ ಮೊಟಕುಗೊಳಿಸಿಲ್ಲ.

ಈ ರೀತಿ ಏಕಾಏಕಿ ತೀರ್ಮಾನ ಕೈಗೊಂಡರೆ ರೈತರು ಸಂಕಷ್ಟಕ್ಕೀಡಾಗುವರು ಮಧ್ಯವರ್ತಿಗಳ‌‌ ಕಪಿಮುಷ್ಟಿಯಿಂದ ಎಪಿಎಂಸಿ ಕಾಯ್ದೆ ರೈತರಿಗೆ ತಕ್ಕ ಮಟ್ಟಿನ ರಕ್ಷಣೆ ನೀಡಿತ್ತು ಆದರೆ ಎಪಿಎಂಸಿಯ ತಿದ್ದುಪಡಿ ಕಾಯ್ದೆ ಜಾರಿಯಾದರೆ ಬಂಡವಾಳಶಾಹಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಂದ ರೈತರು ಶೋಷಣೆಗೊಳಗಾಗುವ ಅಪಾಯವಿದೆ.

— H D Devegowda (@H_D_Devegowda) May 14, 2020

ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡುತ್ತಿರುವುದಕ್ಕೆ ಬಿಎಸ್‍ವೈ ಕ್ಯಾಬಿನೆಟ್‍ನ ಹಲವು ಸಚಿವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಂತೂ, ಕಾಯಿದೆ ತಿದ್ದುಪಡಿಗೆ ಸರ್ಕಾರ ಒಪ್ಪಬಾರದು. ರಾಜ್ಯದ ವಿಷಯಕ್ಕೆ ಕೇಂದ್ರ ಒತ್ತಡ ಹೇರಿ ತಿದ್ದುಪಡಿಗೆ ಮುಂದಾಗುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ತಿದ್ದುಪಡಿಯಾದರೆ ಕೃಷಿ ಕ್ಷೇತ್ರ ನಾಶವಾಗಲಿದೆ ಎಂದಿದ್ದಾರೆ.

ಪ್ರಸ್ತಾಪಿತ ತಿದ್ದುಪಡಿ ಪ್ರಕಾರ ಖಾಸಗಿ ಕಂಪೆನಿಗಳು ಎಪಿಎಂಸಿಯ ಯಾರ್ಡ್ ನ ಒಳಭಾಗದಲ್ಲಿಯೇ ಮಾರುಕಟ್ಟೆಗಳನ್ನು ತೆರೆಯಬಹುದು. ಪ್ರಾರಂಭದಲ್ಲಿ ರೈತರಿಗೆ ಒಳ್ಳೆಯ ಬೆಲೆ ನೀಡಿ ಎಪಿಎಂಸಿಗಳನ್ನೇ ಅಪ್ರಸ್ತುತಗೊಳಿಸಿ ನಂತರ ಮಾರುಕಟ್ಟೆಯಲ್ಲಿ ಆಧಿಪತ್ಯ ಸ್ಥಾಪಿಸಿ ರೈತರನ್ನು ಶೋಷಿಸುವುದು ತಿದ್ದುಪಡಿಯ ದುರುದ್ದೇಶ. 5/6#SaveAPMC

— Siddaramaiah (@siddaramaiah) May 12, 2020

ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿದ್ದು, ರೈತ ಸಮುದಾಯದ ಅಭಿಪ್ರಾಯ ಪಡೆಯದೇ, ಸದನದಲ್ಲಿ ಕಾಯಿದೆ ಮಂಡಿಸದೇ ಜಾರಿಗೆ ತರಬಾರದು ಎಂದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ, ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು. ಇದು ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಅಂತ ಟ್ವೀಟ್ ಮಾಡಿದ್ದಾರೆ.

ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ. ಅಭದ್ರತೆಯ ಈ ವ್ಯವಸ್ಥೆಗೆ ಕೃಷಿ, ರೈತರನ್ನು ಒಳಪಡಿಸುವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. ₹20 ಲಕ್ಷ ಕೋಟಿ ಪ್ಯಾಕೇಜ್ ವೇಳೆ 'Localisation' ಬಗ್ಗೆ ಮೋದಿ ಮಾತನಾಡಿದ್ದರು. ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವ localisation?
2/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2020

TAGGED:apmccabinetkannada newskarnatakaOrdinanceಎಪಿಎಂಸಿಕರ್ನಾಟಕಕೃಷಿಮಾರುಕಟ್ಟೆಸುಗ್ರೀವಾಜ್ಞೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
8 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
23 minutes ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
27 minutes ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
31 minutes ago
karwar landslide
Latest

ಕಾರವಾರದಲ್ಲಿ ಅಬ್ಬರದ ಮಳೆಗೆ ಕುಸಿದ ಗುಡ್ಡ

Public TV
By Public TV
45 minutes ago
Air Hostess Roshni
Latest

Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

Public TV
By Public TV
45 minutes ago
Kerala taluk officer suspended for casteist slur at nurse Ranjitha killed in Air India crash
Latest

ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

Public TV
By Public TV
45 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?