Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

Chikkaballapur

ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

Public TV
Last updated: May 16, 2020 2:52 pm
Public TV
Share
2 Min Read
sudhakar 2 1
SHARE

– ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಎರಡು ಯಂತ್ರಗಳಿದ್ದು, ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಪ್ರತಿದಿನ 80 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲು ಅಗತ್ಯವಾದ ಕ್ರಮಗಳನ್ನ ಕೈಗೊಳ್ಳುವುದಾಗಿ ತಿಳಿಸಿದರು.

sudhakar 3 1

ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಹ ಆಗಿದ್ದಾರೆ. 06 ಸಕ್ರಿಯ ಪ್ರಕರಣಗಳಿದ್ದು ಅವರಲ್ಲಿ ಇಂದು ಸಹ ಇಬ್ಬರು ಡಿಸ್ಚಾರ್ಜ್ ಆಗಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೇವಲ 4 ಆ್ಯಕ್ಟೀವ್ ಪ್ರಕರಣಗಳಿರಲಿವೆ ಅಂತ ಸಚಿವ ಸುಧಾಕರ್ ಮಾಹಿತಿ ನೀಡಿದರು.

ಕೊರೊನಾ ಪರೀಕ್ಷೆಗಳನ್ನ ಮಾಡಿರುವುದರಲ್ಲಿ ಇಡೀ ದೇಶದಲ್ಲಿ ಚಿಕ್ಕಬಳ್ಳಾಪುರ ನಂಬರ್ 1 ಮೊದಲ ಸ್ಥಾನದಲ್ಲಿದೆ. ಕಾರಣ ಜಿಲ್ಲೆಯಲ್ಲಿ ಇದುವರೆಗೂ 6,239 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 24 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸರಾಸರಿ ಆಧಾರದ ಮೇರೆಗೆ 243 ಮಾದರಿ ಪರೀಕ್ಷೆಗಳಿಗೆ ಒಬ್ಬ ಸೋಂಕಿತರಾಗಿದ್ದಾರೆ. ಹೀಗಾಗಿ ಅತಿ ಹೆಚ್ಚಿನ ಟೆಸ್ಟ್ ಗಳನ್ನ ಮಾಡುವ ಮೂಲಕ ದೇಶದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಿದೆ ಎಂದರು.

sudhakar 4

ಈ ಕಷ್ಟಕಾಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜನ ಅರ್ಥಿಕವಾಗಿ ಪುನಶ್ಚೇತನವಾಗಬೇಕು ಅಂತ ಸರ್ಕಾರ ಹಲವು ಪ್ಯಾಕೇಜ್ ಗಳನ್ನ ಘೋಷಣೆ ಮಾಡಿದೆ. ಇದರ ಜೊತೆ ಜೊತೆ ಎಲ್ಲರ ಜೀವವನ್ನು ಉಳಿಸುವ ಕೆಲಸವನ್ನು ಹೆಲ್ತ್ ವಾರಿಯರ್ಸ್ ಹಾಗೂ ಆಶಾಕಾರ್ಯಕರ್ತೆಯರು, ವೈದ್ಯರು, ಅನೇಕ ಇಲಾಖೆಯ ಆಧಿಕಾರಿಗಳು ಕೊರೊನಾ ನಿಗ್ರಹ ಮಾಡಲು ಭಾಗಿಯಾಗಿದ್ದು ಅವರಿಗೆಲ್ಲಾ ಕೃತಜ್ಞತೆಗಳನ್ನು ಅರ್ಪಿಸುವುದಾಗಿ ತಿಳಿಸಿದರು.

ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ಸರ್ಕಾರ ಸ್ಪಂದಿಸಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ತಲಾ ರೈತನಿಗೆ 5,000 ಪ್ರೋತ್ಸಾಹ ಧನ. ಆಶಾಕಾಯಕರ್ತೆಯರಿಗೆ 3,000 ಪ್ರೋತ್ಸಾಹ ಧನ ನೀಡಲಾಗುವುದು. ಕೊರೊನಾ ವಾರಿಯರ್ಸ್ ಗೆ ಆರೋಗ್ಯ ವಿಮೆ ಮಾಡಿಸಲಾಗಿದೆ. ಕೊರೊನಾ ಸೋಂಕಿತರು ಹೆಚ್ಚಾಗುತ್ತಾರೆ ಅದಕ್ಕಾಗಿ ಆತಂಕ ಬೇಡ. ಇವತ್ತು ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ವಿದೇಶದಿಂದ ಕನ್ನಡಿಗರು ಆಗಮಿಸುತ್ತಿದ್ದಾರೆ. ಇತರೆ ರಾಜ್ಯಗಳಿಂದಲೂ ನಮ್ಮ ರಾಜ್ಯದವರು ಆಗಮಿಸುತ್ತಿದ್ದಾರೆ. ಹೀಗಾಗಿ ಅವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ಪ್ರಕರಣಗಳ ವರದಿ ಹೆಚ್ಚಾಗುತ್ತಿದೆ. ಉದಾಹರಣೆಗೆ ಹೇಳೋದಾದರೆ ನಿನ್ನೆ ದುಬೈ ಹಾಗೂ ಮಹಾರಾಷ್ಟ್ರದಿಂದ ಬಂದವರಿಗೆ ಅತೀ ಹೆಚ್ಚಿನ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಸಮುದಾಯಕ್ಕೆ ಹರಡದಂತೆ ಜನ ಕೂಡ ಎಚ್ಚರ ವಹಿಸಬೇಕು ಎಂದರು.

sudhakar 4 1

ವಲಸೆ ಕಾರ್ಮಿಕರು ವಿಚಾರದಲ್ಲಿ ಕ್ರಮ ಕೈಗೊಳುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಡಿಲಿಕೆ ಮಾಡಿದ ಕೂಡಲೇ ಒಮ್ಮೆಲೆ ಲಕ್ಷಾಂತರ ಮಂದಿ ಕಾರ್ಮಿಕರನ್ನು ಕಳುಹಿಸಬೇಕಾದರೆ ಸಮಸ್ಯೆ ಆಗುತ್ತದೆ. ಹೀಗಾಗಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕಳುಹಿಸುವುದು. ನಮ್ಮ ಜವಾಬ್ದಾರಿ, ಹಂತ ಹಂತವಾಗಿ ನಾವು ಕಳುಹಿಸಿಕೊಡುತ್ತೇವೆ. ಅಲ್ಲಿಯವರೆಗೂ ವಲಸೆ ಕಾರ್ಮಿಕರು ಆತುರ ಪಡಬೇಡಿ. ಬೇರೆ ರಾಜ್ಯಗಳಲ್ಲಿರುವ ಕನ್ನಡಿಗರನ್ನ ಕರೆತರುವುದು ನಮ್ಮ ಕರ್ತವ್ಯ ನಾವು ಅದನ್ನ ಮಾಡ್ತೇವೆ ಎಂದರು.

TAGGED:chikkaballapurCoronaK SudhakarMigrant WorkersPublic TVtesting centerಕೆ.ಸುಧಾಕರ್ಕೊರೊನಾಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪರೀಕ್ಷಾ ಕೇಂದ್ರವಲಸೆ ಕಾರ್ಮಿಕರು
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
2 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
2 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
2 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
3 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
3 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?