Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊರೊನಾ ಅಪಾಯಕಾರಿ ರಾಜ್ಯಗಳಿಂದ ಬಂದವರಿಗೆ ಸ್ವಂತ ಖರ್ಚಿನಲ್ಲೇ ಕೋವಿಡ್ ಟೆಸ್ಟ್

Public TV
Last updated: May 29, 2020 9:53 pm
Public TV
Share
2 Min Read
Corona Lab a
SHARE

ಬೆಂಗಳೂರು: ಕೊರೊನಾ ಅಪಾಯಕಾರಿ ರಾಜ್ಯದಿಂದ ವಿಮಾನ, ರೈಲಿನಲ್ಲಿ ಬಂದವರಿಗೆ ಇನ್ನುಮುಂದೆ ಸ್ವಂತ ಖರ್ಚಿನಲ್ಲಿ ಕೋವಿಡ್-19 ಟೆಸ್ಟ್‍ಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇದುವರೆಗೂ ಸರ್ಕಾರದ ವತಿಯಿಂದ ಗಂಟಲು ದ್ರವ ಸಂಗ್ರಹಿಸಿ ಉಚಿತ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ ಈಗ ಪ್ರತಿಯೊಬ್ಬರು ಪರೀಕ್ಷೆಗೆ 650 ರೂಪಾಯಿ ನೀಡಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಒಂದೇ ದಿನ ಅತೀ ಹೆಚ್ಚು 248 ಮಂದಿಗೆ ಕೊರೊನಾ- 2,781ಕ್ಕೆ ಏರಿದ ಸೋಂಕಿತರ ಸಂಖ್ಯೆ

CORONA VIRUS 5

ಪ್ರಕಟಣೆಯಲ್ಲಿ ಏನಿದೆ?:
ಕೋವಿಡ್-19 ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಗೊಳಿಸುವ ವಿಷಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಮತ್ತು ಉಳಿದ ಎಲ್ಲಾ ಜಿಲ್ಲೆಗಳ ಸಾಮರ್ಥ್ಯದಲ್ಲಿ ಪರಿಮಿತಿ ಇರುತ್ತದೆ. ಕೋವಿಡ್-19ರ ಸಂಕಷ್ಟದಲ್ಲಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರೆಲ್ಲರನ್ನು ಹೋಟೆಲ್/ವಸತಿ ಗೃಹಗಳಲ್ಲಿ 7 ದಿನಗಳ ಕಾಲ ಕ್ವಾರಂಟೈನ್‍ಗೆ ಒಳಪಡಿಸಲು ಸಾಧ್ಯವಾಗುವುದಿಲ್ಲ. ಕಾರಣವೇನೆಂದರೆ ಹೋಟೆಲ್/ ವಸತಿ ವಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅನೇಕ ಪೂರ್ವ ಮತ್ತು ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಹಿಂದಿರುಗಿರುತ್ತಾರೆ.

Corona Test

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಒಳಪಡುವ ಕೆಲವು ವಿಶಿಷ್ಟ ಗುಂಪಿನ ಪ್ರಯಾಣಿಕರ ಗಂಟಲು ದ್ರವವನ್ನು ಮಾತ್ರ ಲ್ಯಾಬ್ ಪರೀಕ್ಷೆ ಮಾಡುವ ನಿರ್ಣಯವನ್ನು ರಾಜ್ಯ ಕೈಗೊಂಡಿದೆ. ಈ ಮೂಲಕ ಕೋವಿಡ್ ಶಂಕಿತರನ್ನು ಶೀಘ್ರಗತಿಯಲ್ಲಿ ಪರೀಕ್ಷೆ ಮಾಡಲು ಖಾಸಗಿ ಪ್ರಯೋಗಾಲಯಗಳ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅನುಕೂಲವಾಗುತ್ತದೆ.

ಇತ್ತೀಚೆಗೆ ಅವರೊಂದಿಗೆ ನಡೆಸಿದ ವಿಮಾನ ಮತ್ತು ರೈಲುಗಳ ಮುಖಾಂತರ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರ ಗಂಟಲು ಮಾದರಿಗಳನ್ನು ಸಂಗ್ರಹಿಸಿ ಪ್ರಸಕ್ತ ರಾಜ್ಯ ಸರ್ಕಾರದ ಪರೀಕ್ಷಾ ನಿಯಮದಂತೆ ಕೋವಿಡ್-19 ಆರ್‌ಟಿ- ಪಿಸಿಆರ್ ಪರೀಕ್ಷೆ ನಡೆಸಿ 24 ಗಂಟೆಯ ಒಳಗಾಗಿ ಫಲಿತಾಂಶ ನೀಡುವ ಸಾಮರ್ಥ್ಯ ಮತ್ತು ಸನ್ನದ್ದತೆ ಕುರಿತು ಖಾಸಗಿ ಪ್ರಯೋಗಾಲಗಳೊಂದಿಗೆ ಚರ್ಚೆ ನಡೆಸಲಾಗಿರುತ್ತದೆ. ಪ್ರಯೋಗಾಲಯ ಪರೀಕ್ಷೆಗಳ ಕುರಿತು ಆರೋಗ್ಯ ಇಲಾಖೆಯ ಪ್ರಸ್ತಾವನೆಯನ್ನು ಸದರಿ ಖಾಸಗಿ ಲ್ಯಾಬ್‍ಗಳಿಗೆ ಒಪ್ಪಿರುತ್ತಾರೆ.

Corona Test A

ಗಂಟಲು, ರಕ್ತದ ಮಾದರಿಗಳನ್ನು ಪೊಲಿಂಗ್ ವಿಧಾನದಲ್ಲಿ ಪರೀಕ್ಷಿಸಲು (ಐಸಿಎಂಆರ್ ಮಾರ್ಗಸೂಚಿಯಂತೆ 1 ಪೊಲ್‍ನಲ್ಲಿ 5 ಮಾದರಿಗಳು ಇರತಕ್ಕದ್ದು) ಪರೀಕ್ಷೆ ಶುಲ್ಕವಾಗಿ ಪ್ರತಿ ಯಾತ್ರಿಕರಿಂದ, ಫಲಿತಾಂಶ ಪಾಸಿಟಿವ್ ಇರಲಿ ಅಥವಾ ನೆಗೆಟಿವ್ ಇರಲಿತಲಾ 650 ರೂ. ನಂತೆ ಶುಲ್ಕವನ್ನು ಖಾಸಗಿ ಲ್ಯಾಬ್‍ಗಳು ಪಡೆಯತಕ್ಕದ್ದು.

Corona 3

TAGGED:CoronavirusCovid 19feeskarnatakaPrivate LabPublic TVtestಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಕೊರೊನಾ ವೈರಸ್ಕೋವಿಡ್ 19ಖಾಸಗಿ ಲ್ಯಾಬ್ಟೆಸ್ಟ್ಪಬ್ಲಿಕ್ ಟಿವಿಲ್ಯಾಬ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
4 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
22 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
23 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
24 hours ago

You Might Also Like

shagan shubha ahmedabad plane crash
Latest

ಏರ್‌ ಇಂಡಿಯಾ ವಿಮಾನ ಪತನ – ದುರಂತದಲ್ಲಿ ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಮಕ್ಕಳು ಸಾವು

Public TV
By Public TV
6 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
19 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
52 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
1 hour ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
2 hours ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?