– ನಾಪತ್ತೆ ಪೋಸ್ಟರ್ಗಳಿಗೆ ‘ಕಮಲ’ ಪ್ರತಿಕ್ರಿಯೆ
ಭೋಪಾಲ್: ಕೊರೋನಾ ಮಹಾಮಾರಿ ದೇಶವನ್ನು ಒಕ್ಕರಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಆದರೆ ಬಿಜಪಿ ಸಂಸದೆ ಪ್ರಜ್ಞಾ ಸಿಂಗ್ ಮಾತ್ರ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಸರಗೊಂಡ ಭೋಪಾಲ್ ಮಂದಿ ಸಂಸದೆ ಎಲ್ಲಿದ್ದಾರೆ?, ಠಾಕೂರ್ ನಾಪತ್ತೆಯಾಗಿದ್ದಾರೆ ಎಂಬೆಲ್ಲ ಪೋಸ್ಟರ್ ಗಳನ್ನು ಎಲ್ಲಾ ಕಡೆ ಅಂಟಿಸಿದ್ದಾರೆ. ಇದಕ್ಕೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ.
ಈ ಬಗ್ಗೆ ಸಮರ್ಥಿಸಿಕೊಂಡಿರುವ ಬಿಜೆಪಿ, ಪ್ರಜ್ಞಾ ಸಿಂಗ್ ನಾಪತ್ತೆಯಾಗಿಲ್ಲ. ಅವರು ಅನಾರೋಗ್ಯಕ್ಕೀಡಾಗಿದ್ದು, ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಅವರು ಕಾರ್ಯಕರ್ತರ ಜೊತೆ ಫೋನ್ ಮೂಲಕ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಮೂಲಕ ಪ್ರವಾಸಿ ಕಾರ್ಮಿಕರಿಗೆ ಸಹಾಯ ಮಾಡುತ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಿಂದಾಗಿ ಕಷ್ಟು ಪಡುತ್ತಿರುವವರಿಗೆ ಹಾಗೂ ವಿದ್ಯಾರ್ಥಿಗಳಿಗೂ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ ಎಂದು ತಿಳಿಸಿದೆ.
ಬಜೆಪಿ ವಕ್ತಾರ ರಾಹುಲ್ ಕೊತಾರಿ ಪ್ರತಿಕ್ರಿಯಿಸಿ, ಪ್ರಜ್ಞಾ ಸಿಂಗ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಕ್ಷೇತ್ರದಲ್ಲಿ ಜನರಿಗೆ ಬೇಕಾದ ಆಹಾರ, ದಿನಸಿ ಮೊದಲಾದ ಅಗತ್ಯ ವಸ್ತುಗಳನ್ನು ಇಂದಿಗೂ ಪೂರೈಕೆ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಕಾಣಿಸಿಕೊಳ್ಳುತ್ತಿರುವ ರಾಜಕೀಯ ಪ್ರಹಸನ ಎಂದು ಗರಂ ಆಗಿದ್ದಾರೆ. ಇದನ್ನೂ ಓದಿ: ಗೋಮೂತ್ರದಿಂದ ನನ್ನ ಸ್ತನಕ್ಯಾನ್ಸರ್ ವಾಸಿಯಾಯ್ತು- ಸಾಧ್ವಿ ಪ್ರಜ್ಞಾಸಿಂಗ್