Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು- ತಾಯಿ ಸೇರಿ ಐವರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು- ತಾಯಿ ಸೇರಿ ಐವರು ಅರೆಸ್ಟ್

Crime

15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು- ತಾಯಿ ಸೇರಿ ಐವರು ಅರೆಸ್ಟ್

Public TV
Last updated: June 3, 2020 11:30 am
Public TV
Share
2 Min Read
KPL
SHARE

– ಮಗಳ, ತಾಯಿ ಗಲಾಟೆಯಲ್ಲಿ ಪ್ರಕರಣ ಬಯಲಿಗೆ
– 2015ರಲ್ಲಿ ಅಸ್ಥಿ ಪಂಜರ ಪತ್ತೆ
– ಅನೈತಿಕ ಸಂಬಂಧಕ್ಕೆ ಪತಿಯ ಕೊಲೆ

ಕೊಪ್ಪಳ: 15 ವರ್ಷಗಳ ಹಿಂದೆ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿಸಿ ಮುಚ್ಚಿ ಹಾಕಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಶಂಕರ್‌ಸಿಂಗ್ ಮೃತ ವ್ಯಕ್ತಿ. ಬಂಧಿತ ಆರೋಪಿಗಳನ್ನು ಗಂಗಾವತಿಯ ವಿರುಪಾಪೂರ ನಗರದ ಮೃತನ ಪತ್ನಿ ಲಕ್ಷ್ಮೀಸಿಂಗ್, ರಾಂಪೂರ ಪೇಟೆಯ ಅಮ್ಜದ್‍ಖಾನ್, ಕಿಲ್ಲಾ ಏರಿಯಾದ ಅಬ್ದುಲ್ ಹಫೀಜ್, ಬಾಬಾ ಜಾಕೀರಬಾಷಾ ಹಾಗೂ ಈಳಿಗನೂರ ಗ್ರಾಮದ ಶಿವನಗೌಡ ಎಂದು ಗುರುತಿಸಲಾಗಿದೆ. ಮೃತನ ಮಗಳು ತನ್ನ ತಂದೆಯ ಕೊಲೆಯ ರಹಸ್ಯವನ್ನು ಬಹಿರಂಗಪಡಿಸಿದ್ದಾಳೆ.

KPL 4

ಅನೈತಿಕ ಸಂಬಂಧಕ್ಕೆ ಪತಿಯ ಕೊಲೆ:
ಮೃತ ಶಂಕರ್‌ಸಿಂಗ್ ನನ್ನು ಹಲವಾರು ವರ್ಷಗಳ ಹಿಂದೆಯೇ ಆರೋಪಿ ಲಕ್ಷ್ಮೀಸಿಂಗ್ ಮದುವೆಯಾಗಿದ್ದಳು. ವಿವಾಹ ನಂತರ ಲಕ್ಷ್ಮೀಸಿಂಗ್ ಅಮ್ಜದ್‍ಖಾನ್, ಅಬ್ದುಲ್ ಹಫೀಜ್ ಮತ್ತು ಬಾಬಾ ಜಾಕೀರಬಾಷಾ ಇವರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಪತಿಗೆ ಗೊತ್ತಾಗಿ ಪತ್ನಿಗೆ ಹೊಡೆದು ಎಚ್ಚರಿಗೆ ನೀಡಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ಆತನನ್ನು ಕೊಲೆ ಮಾಡಲು ನಿರ್ಧರಿಸಿದ್ದಳು. ಅದರಂತೆಯೇ 2005ರಲ್ಲಿ ಆಗಸ್ಟ್ ತಿಂಗಳ ಒಂದು ದಿನ ಶಂಕರಸಿಂಗ್‍ಗೆ ಚಹಾದಲ್ಲಿ ನಿದ್ದೆ ಮಾತ್ರೆ ಹಾಕಿ ಕೊಟ್ಟು ಮಲಗಿಸಿದ್ದಾಳೆ. ಆಗ ಆರೋಪಿಗಳು ಆತನ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಆತನ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ ಮನೆಯ ಪಕ್ಕದಲ್ಲಿ ಖಾಲಿಯಿದ್ದ ಸ್ಥಳದಲ್ಲಿ ಸಮಾಧಿ ಮಾಡಿಸಿದ್ದಾಳೆ.

KPL 3

2015ರಲ್ಲಿ ಅಸ್ಥಿ ಪಂಜರ ಪತ್ತೆ:
ಗಂಗಾವತಿಯ ಜಯನಗರದಲ್ಲಿ ಕೊಲೆಯನ್ನು ಮಾಡಿ ಮನೆಯ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ದೇಹವನ್ನು ಮುಚ್ಚಿ ಹಾಕಿದ್ದರು. ನಂತರ 2015ರಲ್ಲಿ ಆ ಖಾಲಿ ನಿವೇಶನವನ್ನು ಈಳಿಗನೂರ ಗ್ರಾಮದ ಶಿವನಗೌಡನಿಗೆ ಮಾರಾಟ ಮಾಡಿದ್ದಾಳೆ. ಮನೆ ಖರೀದಿ ಮಾಡಿದ ಶಿವನಗೌಡ ಮನೆಯನ್ನು ಕಟ್ಟಿಸುತ್ತಿರುವ ವೇಳೆಯಲ್ಲಿ ಶವದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಸೇರಿದಂತೆ ಬಟ್ಟೆ ಹಾಗೂ ದೇಹದ ಮೇಲಿದ್ದ ಇತರ ವಸ್ತುಗಳಿಂದ ನಮ್ಮ ತಂದೆ ಎಂದು ಮಕ್ಕಳು ಗುರುತಿಸಿದ್ದಾರೆ. ಆಗ ಮಗಳು ತನ್ನ ತಾಯಿಯನ್ನು ವಿಚಾರಿಸಿದಾಗ ಅಮ್ಜದ್‍ಖಾನ್, ಅಬ್ದುಲ್ ಹಫೀಜ್ ಮತ್ತು ಬಾಬಾ ಜಾಕೀರಬಾಷಾ ಸೇರಿ ಕೊಲೆ ಮಾಡಿ ತಾನೇ ಸಮಾಧಿ ಮಾಡಿರುವುದಾಗಿ ಹೇಳಿದ್ದಾಳೆ. ಈ ವಿಚಾರ ಮಕ್ಕಳಿಗೆ ಗೊತ್ತಾಗಿದ್ದರಿಂದ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಮರುದಿನ ಶವದ ಮೂಳೆಗಳನ್ನು ಸುಟ್ಟು ಹಾಕಿ ಸಾಕ್ಷಿ ನಾಶ ಮಾಡಿದ್ದಾರೆ. ಅಲ್ಲದೇ ಮಗಳ ಫೋನಿನಲ್ಲಿದ್ದ ಅಸ್ಥಿಪಂಜರದ ಫೋಟೋಗಳನ್ನು ಡಿಲೀಟ್ ಮಾಡಿಸಿದ್ದಾಳೆ.

vlcsnap 2020 06 03 09h05m19s92

ಮಗಳ, ತಾಯಿ ಗಲಾಟೆಯಲ್ಲಿ ಪ್ರಕರಣ ಬಯಲಿಗೆ:
ಸುಮಾರು 5 ವರ್ಷಗಳ ನಂತರ ಇತ್ತೀಚೆಗೆ ಆರೋಪಿ ಲಕ್ಷ್ಮೀಸಿಂಗ್ ಮತ್ತು ಮೃತನ ಮಗಳ ಮಧ್ಯೆ ಜಗಳ ನಡೆದಿದೆ. ಆಗ ಆರೋಪಿ ತಾಯಿ ಅವಾಚ್ಯ ಶಬ್ದದಿಂದ ಬೈದು, ಹೊಡೆದು, ನಿಮ್ಮ ಅಪ್ಪನಿಗೆ ಮಾಡಿದಂತೆ ನಿನಗೂ ಒಂದು ಗತಿ ಕಾಣಿಸುತ್ತೇನೆ ಎಂದು ಹೆದರಿಸಿದ್ದಾಳೆ. ಇದರಿಂದ ಭಯಗೊಂಡ ಮಗಳು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಅಲ್ಲದೇ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ತನಿಖೆಯನ್ನು ನಡೆಸಿ, ಒಟ್ಟು 4 ಜನ ಕೊಲೆ ಮಾಡಿರುವ ಆರೋಪಿಗಳನ್ನು ಹಾಗೂ ಶವದ ಮೂಳೆಗಳನ್ನು ಸುಟ್ಟು ಸಾಕ್ಷಿ ನಾಶ ಪಡಿಸಿರುವ ಶಿವನಗೌಡ ಅವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿ.ಸಂಗೀತಾ ತಿಳಿಸಿದ್ದಾರೆ.

KPL 1

TAGGED:accusedarrestdaughterfatherKoppalpoliceWifeಅರೆಸ್ಟ್ಆರೋಪಿಗಳುಕೊಪ್ಪಳತಂದೆಪತ್ನಿಪೊಲೀಸ್ಮಗಳು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
3 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
18 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
54 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
1 hour ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?