ಮಹಾಲಕ್ಷ್ಮಿಲೇಔಟ್‍ನಿಂದ ರಾಜ್ಯಾದ್ಯಂತ ಕೆಲಸ ಮಾಡ್ತೀನಿ- ಸಚಿವ ಗೋಪಾಲಯ್ಯ

Public TV
1 Min Read
gopalaiah

– ಹಾಸನ ಜಿಲ್ಲೆಯ ಅಭಿವೃದ್ಧಿ ನನ್ನ ಗುರಿ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‍ನಿಂದ ಇದೀಗ ರಾಜ್ಯಾದ್ಯಂತ ಕೆಲಸ ಮಾಡುತ್ತೀನಿ. ಅಲ್ಲದೇ ಕೋವಿಡ್-19 ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ ಪಡಿತರ ಸಿಗುವಂತೆ ಮಾಡುವುದೇ ನಮ್ಮ ಉದ್ದೇಶ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು.

ಸಚಿವ ಗೋಪಾಲಯ್ಯ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯಲ್ಲಿ ನಾಗರಿಕರಿಗೆ ಸುಮಾರು 3 ಸಾವಿರ ಆಹಾರ ಕಿಟ್ ವಿತರಣೆ ಮಾಡಿದರು. ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಎಸ್.ಮುನಿರಾಜು ನೇತೃತ್ವದಲ್ಲಿ ಬಿಜೆಪಿ ಮುಖಂಡ ನರಸಿಂಹಮೂರ್ತಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಕಿಟ್ ವಿತರಣೆ ಮಾಡಿದರು.

NML 1

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಗೋಪಾಲಯ್ಯ, ರಾಜ್ಯ ಸರ್ಕಾರ ಹಾಸನಕ್ಕೆ ಉಸ್ತವಾರಿಯಾಗಿ ನೇಮಕ ಮಾಡಿ ನನ್ನನ್ನು ಹಾಸನಕ್ಕೆ ಕಳುಹಿಸಿದ್ದು ಕೆಲಸ ಮಾಡಲಿಕ್ಕೆ. ಹಾಸನ ಕ್ಷೇತ್ರದಲ್ಲಿ ರೈತಾಪಿ ಕುಟುಂಬ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಕೆಲಸ ಮಾಡುತ್ತೀನಿ. ಪ್ರಾಮಾಣಿಕವಾಗಿ ನಾನು ಮಹಾಲಕ್ಷ್ಮಿ ಲೇಔಟ್‍ನಿಂದ ಇದೀಗ ರಾಜ್ಯಾದ್ಯಂತ ಕೆಲಸ ಮಾಡುತ್ತೀನಿ ಎಂದರು.

ನನಗೆ ಗೊತ್ತಿರೋದು ಕೆಲಸ ಮಾಡೋದು ಅದನ್ನೆ ಅಲ್ಲಿಯೂ ಮಾಡುತ್ತೀನಿ. ಹಾಸನದಲ್ಲಿ ಎಲ್ಲ ಶಾಸಕರು, ಸಂಸದರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೀನಿ. ಆ ಶಕ್ತಿಯನ್ನ ಹಾಸನಾಂಬೆ ನನಗೆ ಕೊಡುತ್ತಾಳೆ. ಜಿಲ್ಲೆಯ ಅಭಿವೃದ್ಧಿ ಮಾಡಲು ನನ್ನನ್ನು ಕಳುಹಿಸಿದ್ದಾರೆ. ಹೀಗಾಗಿ ಅಭಿವೃದ್ಧಿಯೇ ನನ್ನ ಗುರಿ ಎಂದು ಹೇಳಿದರು.

NML 2

ಈ ವೇಳೆ ಮಾಜಿ ಶಾಸಕ ಎಸ್. ಮುನಿರಾಜು, ಬಿಜೆಪಿ ಮುಖಂಡ ನರಸಿಂಹಮೂರ್ತಿ, ಗೋಪಾಲಕೃಷ್ಣ, ನಾರಾಯಣ ಸ್ವಾಮಿ, ನರಸಿಂಹಮೂರ್ತಿ, ವಿಜಯ್ ಕುಮಾರ್, ಕೃಷ್ಣ ಮೂರ್ತಿ ಮತ್ತಿತರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *