ಪಡಿತರ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ- ಗುಣಮಟ್ಟ ಪರಿಶೀಲನೆ

Public TV
1 Min Read
NML 6

ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಗೋಪಾಲಯ್ಯ ಇಂದು ಬೆಂಗಳೂರು ಹೊರವಲಯ ನೆಲಮಂಗಲ ಬಸ್ ನಿಲ್ದಾಣದ ಹಿಂಭಾಗದ ಪಡಿತರ ಅಂಗಡಿಗೆ ದಿಢೀರ್ ಭೇಟಿ ನೀಡಿದ್ದಾರೆ.

ಪಡಿತರ ಅಂಗಡಿಗೆ ಭೇಟಿ ನೀಡಿದ ಸಚಿವ ಗೋಪಾಲಯ್ಯ ಅವರು ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಿದ್ದಾರೆ. ಪ್ರತಿಯೊಬ್ಬರಿಗೂ ಸಮವಾಗಿ ಪಡಿತರ ನೀಡಬೇಕು. ಆಹಾರ ಮತ್ತು ನಾಗರಿಕ ಪೂರೈಕೆಯಲ್ಲಿ ವ್ಯತ್ಯಾಸವಾದರೆ ಸರಿ ಇರುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

NML 1 1

ಅಲ್ಲದೇ ಸಚಿವರ ಮುಂದೆ ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದರು. ನಂತರ ಸ್ವತಃ ತಾವೇ ಬೇಳೆಯ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಇನ್ನೂ ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವ ಗೋಪಾಲಯ್ಯ, ಆಧಾರ್ ಕಾರ್ಡ್ ಅನುಗುಣವಾಗಿ ಆಹಾರ ಪೂರೈಕೆ ಮಾಡಿ ಮತ್ತು ಯೂನಿಟ್ ಆಧಾರದಲ್ಲಿ ನೀಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.

NML 2 1

Share This Article
Leave a Comment

Leave a Reply

Your email address will not be published. Required fields are marked *