ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೇಗುಲ ಆರಂಭ- ಷರತ್ತುಗಳು ಅನ್ವಯ

Public TV
2 Min Read
CKB DC

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ನಾಳೆ ಜೂನ್ 8 ರಿಂದ ದೇವಾಲಯಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ‘ಎ’, ‘ಬಿ’ ಮತ್ತು ‘ಸಿ’ ದೇವಾಲಯಗಳಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ ಅಂತ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಆರ್.ಲತಾ ಅವರು ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಹಲವು ಷರತ್ತುಗಳನ್ನ ವಿಧಿಸಿದ್ದಾರೆ.
* ಜನಸಂದಣಿ ಸೇರುವ ಉತ್ಸವಗಳಾದ ಬ್ರಹ್ಮ ರಥೋತ್ಸವ/ಜಾತ್ರೆ ಮುಂತಾದ ವಿಶೇಷ ಪೂಜೆಗಳು ಸೇರಿದಂತೆ ಇತರೆ ಎಲ್ಲಾ ರೀತಿಯ ಉತ್ಸವಗಳನ್ನು ಹಾಗೂ ದೇವಾಲಯದಲ್ಲಿ ನಡೆಯುವ ಸೇವೆಗಳನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.
* ದೇವಾಲಯದ ಪ್ರವೇಶ ದ್ವಾರ ಮತ್ತು ಆವರಣಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆ ಕಾಪಾಡುವುದು. ದೇವಾಲಯಕ್ಕೆ ಬರುವ ಭಕ್ತಾಧಿಗಳ ದೇಹದ ಉಷ್ಣತೆಯನ್ನು ಥರ್ಮೋಮೀಟರ್ ನಿಂದ ತಪಾಸಣೆ ಮಾಡಲಾಗುವುದು. ಜೊತೆಗೆ ಕೈಗಳಿಗೆ ಸ್ಯಾನಿಟೈಸರ್ ಬಳಸಬೇಕಿದೆ.

CORONA VIRUS 1

* ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ (6 ಅಡಿ) ಕಾಪಾಡುವುದು. ಭಕ್ತಾಧಿಗಳ ಸರದಿ ಸಾಲಿನಲ್ಲಿ ಮಾರ್ಕ್ ಗಳನ್ನು ಗುರುತಿಸುವುದು. ಆಯಾಯ ದೇವಾಲಯಗಳಲ್ಲಿ ಅಗತ್ಯಕ್ಕೆ ತಕ್ಕಂತೆ ತಾತ್ಕಾಲಿಕ ಸರದಿ ಸಾಲುಗಳನ್ನು ನಿರ್ಮಿಸಿಕೊಂಡಿದ್ದು, ಬಾಕ್ಸ್ ಗಳಲ್ಲಿ ಭಕ್ತರು ನಿಂತು ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆಯಬೇಕು.
* ಬಾಯಿ ಮತ್ತು ಮೂಗನ್ನು ಮುಚ್ಚುವಂತೆ ಮಾಸ್ಕ್ ಅಥವಾ ಮುಖವಸ್ತ್ರಗಳನ್ನು ಕಡ್ಡಾಯವಾಗಿ ಧರಿಸಿದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವಿರುತ್ತದೆ.
* ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು ಪಾದರಕ್ಷೆಗಳನ್ನು ಅವರವರ ವಾಹನಗಳಲ್ಲಿಯೇ ಅಥವಾ ಪ್ರತ್ಯೇಕ ಸ್ಥಳಗಳಲ್ಲಿ ಬಿಡುವುದು. ಪಾದರಕ್ಷೆಗಳನ್ನು ಧರಿಸಿ ದೇವಾಲಯದ ಆವರಣಕ್ಕೆ ಬರುವಂತಿಲ್ಲ.

sanitizer mask

* ದೇವಸ್ಥಾನಕ್ಕೆ ಬರುವ ಭಕ್ತಾಧಿಗಳು ದೇವಾಲಯದ ಗೋಡೆ, ಕಂಬ, ವಿಗ್ರಹ, ರಥ, ಪಲ್ಲಕಿ, ಧಾರ್ಮಿಕ ಗ್ರಂಥ, ಪುಸ್ತಕ ಮುಂತಾದವುಗಳನ್ನು ಮುಟ್ಟುವಂತಿಲ್ಲ.
* ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು, ದೇವಾಲಯದ ಒಳಾಂಗಣ, ಹೊರಾಂಗಣ ಹಾಗೂ ಇತರೆ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅನ್ನು ಅವರವರ ಮೊಬೈಲ್‍ಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ಇನ್ನೂ ದೇವಾಲಯದ ದರ್ಶನಕ್ಕೆ ಮುಂದಿನ ಆದೇಶದವರೆಗೆ 65 ವಯಸ್ಸಿನ ವೃದ್ಧರು, 10 ವರ್ಷದ ಒಳಗಿನ ಮಕ್ಕಳು ಮತ್ತು ಗರ್ಭಿಣಿಯರು ಆದಷ್ಟು ಮನೆಯಲ್ಲಿದ್ದು ಸಹಕರಿಸಬೇಕು. ಜೊತೆಗೆ ಅಸ್ವಸ್ಥರು ದೇವಾಲಯದ ಒಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *