Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡೂವರೆ ತಿಂಗಳ ಬಳಿಕ ಬಹುತೇಕ ದೇವಾಲಯಗಳು ಓಪನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಎರಡೂವರೆ ತಿಂಗಳ ಬಳಿಕ ಬಹುತೇಕ ದೇವಾಲಯಗಳು ಓಪನ್

Corona

ಎರಡೂವರೆ ತಿಂಗಳ ಬಳಿಕ ಬಹುತೇಕ ದೇವಾಲಯಗಳು ಓಪನ್

Public TV
Last updated: June 8, 2020 9:15 am
Public TV
Share
2 Min Read
temples
SHARE

– ಸರದಿ ಸಾಲಲ್ಲಿ ನಿಂತು ಭಕ್ತರಿಂದ ದೇವರ ದರ್ಶನ

ಮಂಗಳೂರು/ಉಡುಪಿ: ಕೊರೊನಾ ಆತಂಕದಿಂದ ಕಳೆದ ಎರಡೂವರೆ ತಿಂಗಳಿಂದ ಲಾಕ್ ಆಗಿದ್ದ ದೇವಾಲಯಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಎರಡೂವರೆ ತಿಂಗಳ ಬಳಿಕ ಬಹುತೇಕ ದೇವಾಲಯಗಳು ಇಂದು ಮುಂಜಾನೆಯಿಂದಲೇ ಓಪನ್ ಆಗಿವೆ.

ಮಂಗಳೂರಿನಾದ್ಯಂತ ಇಂದು ದೇವಸ್ಥಾನಗಳು ಓಪನ್ ಆಗಿವೆ. ಮಂಗಳೂರಿನ ಕದ್ರಿ ಮಂಜುನಾಥಸ್ವಾಮಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ, ಗಣಪತಿ ದೇವಸ್ಥಾನ ಮತ್ತು ಮಂಗಳಾದೇವಿ ದೇವಸ್ಥಾನ ಓಪನ್ ಆಗಿವೆ. ಬೆಳಗ್ಗೆ 6 ಗಂಟೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

templs 10

ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೇವಸ್ಥಾನ ಓಪನ್ ಆಗಿದ್ದು, ಬೆಳಗ್ಗೆಯಿಂದಲೂ ಭಕ್ತರು ಸರದಿ ಸಾಲಲ್ಲಿ ನಿಂತು ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ. ಇದಕ್ಕೂ ಮುನ್ನ ಬಂದಂತಹ ಭಕ್ತರು ಹರಕೆ ತೀರಿಸಲು ಮುಡಿಕೇಂದ್ರದಲ್ಲಿ ಮುಡಿಕೊಟ್ಟು, ನೇತ್ರಾವತಿ ನದಿಯಲ್ಲಿ ಮಿಂದು ಮಂಜುನಾಥನ ದರ್ಶನಕ್ಕೆ ಮುಂದಾಗುತ್ತಿದ್ದಾರೆ.

ಮುಡಿಕೇಂದ್ರದ ಮಾರ್ಗದುದ್ಧಕ್ಕೂ ಸಿಬ್ಬಂದಿ ಭಕ್ತರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸರಳುಗಳನ್ನ ಮುಟ್ಟಬೇಡಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಮಾಸ್ಕ್ ಹಾಕಿ ಎಂದು ಕೂಗಿ-ಕೂಗಿ ಹೇಳುತ್ತಿದ್ದಾರೆ. ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಿದ್ದು, ಸ್ಯಾನಿಟೈಸರ್ ಹಾಕುತ್ತಿದ್ದಾರೆ. ಅಲ್ಲದೇ ಮುಡಿಕೇಂದ್ರದಲ್ಲಿ ಆಗಾಗ ಶುಚಿಮಾಡುತ್ತಿದ್ದು, ಒಬ್ಬರ ಮುಡಿ ಆದ ಬಳಿಕ ಚೇರ್ ಸುತ್ತಮುತ್ತ ಕ್ಲೀನ್ ಮಾಡಿ ಮತ್ತೊಬ್ಬರನ್ನ ಕೂರಿಸುತ್ತಿದ್ದಾರೆ.

templs 4

ಉಡುಪಿ ಜಿಲ್ಲೆ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಭಕ್ತರಿಗೆ ದರ್ಶನ ಅವಕಾಶ ಆರಂಭವಾಗಿದೆ. ಬೆಳಗ್ಗೆ 5.30ಕ್ಕೆ ದೇಗುಲ ಓಪನ್ ಆಗಿದ್ದು, ಬೆರಳೆಣಿಕೆ ಭಕ್ತರು ಮಾತ್ರ ಕಾಣಿಸಿಕೊಂಡಿದ್ದಾರೆ. ಮೂಕಾಂಬಿಕೆಯ ಗರ್ಭಗುಡಿ ಸಮೀಪ ದರ್ಶನಕ್ಕೆ ಅವಕಾಶ ನೀಡದ ದೇಗುಲ, ಧ್ವಜಸ್ತಂಭ ಬಳಿಯಲ್ಲೇ ಭಕ್ತರು ದೇವಿಗೆ ನಮಸ್ಕರಿಸಿ ಹೋಗಬೇಕು ಎಂಬ ನಿಯಮ ಮಾಡಿದೆ. ಶರ್ಟ್ ಬನಿಯನ್ ತೆಗೆದು ದೇವಸ್ಥಾನ ಪ್ರವೇಶದ ನಿಯಮವನ್ನು ಸದ್ಯ ಆಡಳಿತ ಮಂಡಳಿ ಕೈಬಿಟ್ಟಿದೆ.

ಇನ್ನೂ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಯ ದರ್ಶನ ಆರಂಭವಾಗಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಎರಡುವರೆ ತಿಂಗಳ ಬಳಿಕ ಇಂದಿನಿಂದ ದೇವಸ್ಥಾನಗಳಿಗೆ ಭಕ್ತರ ಪ್ರವೇಶವನ್ನು ಕಲ್ಪಿಸಲಾಗಿದೆ. ಮಲೆ ಮಹದೇಶ್ವರ ದೇವಸ್ಥಾನದಲ್ಲಿ 7 ಗಂಟೆಯಿಂದ ದೇವರ ದರ್ಶನ ಆರಂಭವಾಗಿದೆ. ಚಾಮರಾಜನಗರದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

templs 2

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಪುರಾಣ ಪ್ರಸಿದ್ಧ, ಐತಿಹಾಸಿ ದೇವಸ್ಥಾನ ಚಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಭಕ್ತರೇ ಇಲ್ಲದೇ ಬಣಗುಟ್ಟುತ್ತಿದೆ. ಸಾವಿರಾರು ಭಕ್ತರು ಬರುತ್ತಿದ್ದ ಧಾರ್ಮಿಕ ಸ್ಥಳದಲ್ಲಿ ಕೊರೊನಾ ಭಯದಿಂದ ಭಕ್ತರೇ ಇಲ್ಲದಂತೆ ಆಗಿದೆ.

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶಿರಸಿ ಮಾರಿಕಾಂಬಾ, ಮುರುಡೇಶ್ವರದ ಈಶ್ವರ ದೇವಸ್ಥಾನ ಹಾಗೂ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಗಳಲ್ಲಿ ಪೂಜೆಗಳು ನಡೆದವು. ಶಿರಸಿಯಲ್ಲಿ ಹಲವು ಭಕ್ತರು ಬಂದು ದೇವಿ ದರ್ಶನ ಪಡೆದರೆ, ಪ್ರಸಿದ್ಧ ಮುರುಡೇಶ್ವರದಲ್ಲಿ ಭಕ್ತರಿಲ್ಲದೇ ದೇವಸ್ಥಾನ ಬಣಗುತ್ತಿದೆ. ಗೋಕರ್ಣದಲ್ಲಿ ಸ್ಥಳೀಯರಿಗೆ ಮಾತ್ರ ಅವಕಾಶ ಕಲ್ಪುಸಿದ್ದರಿಂದ ಭಕ್ತರ ಸಂಖ್ಯೆ ವಿರಳವಾಗಿದ್ದು, ದಕ್ಷಿಣ ಕಾಶಿಯಲ್ಲಿ ಭಕ್ತರು ದೇವರ ದರ್ಶನ ಪಡೆದರು.

TAGGED:CoronadevoteesLockdownMangaluruPublic TVtempleudupiಉಡುಪಿಕೊರೊನಾದೇವಾಲಯಪಬ್ಲಿಕ್ ಟಿವಿಭಕ್ತರುಮಂಗಳೂರುಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
49 seconds ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
51 minutes ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
1 hour ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
2 hours ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?