Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಂ ಇಂಡಿಯಾಗೆ ಈ ನಾಲ್ವರ ಕಮ್‍ಬ್ಯಾಕ್ ಕಷ್ಟ ಕಷ್ಟ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾಗೆ ಈ ನಾಲ್ವರ ಕಮ್‍ಬ್ಯಾಕ್ ಕಷ್ಟ ಕಷ್ಟ!

Cricket

ಟೀಂ ಇಂಡಿಯಾಗೆ ಈ ನಾಲ್ವರ ಕಮ್‍ಬ್ಯಾಕ್ ಕಷ್ಟ ಕಷ್ಟ!

Public TV
Last updated: June 12, 2020 3:20 pm
Public TV
Share
3 Min Read
Team India
SHARE

ನವದೆಹಲಿ: ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡಲು ಮಾಜಿ ನಾಯಕ ಎಂ.ಎಸ್.ಧೋನಿ ಸೇರಿದಂತೆ ಅನೇಕರು ಸರ್ವ ಪ್ರಯತ್ನ ನಡೆಸಿದ್ದಾರೆ. ಈ ಪೈಕಿ ನಾಲ್ವರು ಮತ್ತೆ ರಾಷ್ಟ್ರೀಯ ತಂಡ ಸೇರುವುದು ಕಷ್ಟ ಎಂಬ ಮಾತುಗಳು ಕೇಳಿ ಬಂದಿವೆ.

ಭಾರತದ ಕ್ರಿಕೆಟ್ ತಂಡದ ಪರ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಹರ್ಭಜನ್ ಸಿಂಗ್ ಇತ್ತೀಚೆಗೆ ತಂಡಕ್ಕೆ ಕಮ್‍ಬ್ಯಾಕ್ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಐಪಿಎಲ್ ಮೂಲಕ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡಲು ಎಂ.ಎಸ್.ಧೋನಿ ಮುಂದಾಗಿದ್ದರು. ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಟೂರ್ನಿ ಅನಿರ್ಧಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ.

MS Dhoni Harbhajan Singh

ಹರ್ಭಜನ್ ಸಿಂಗ್ ಸುಮಾರು 11 ವರ್ಷಗಳ ಕಾಲ ರಾಷ್ಟ್ರೀಯ ತಂಡದಲ್ಲಿ ಪ್ರಮುಖ ಆಯ್ಕೆಯಾಗಿದ್ದರು. 2011ರ ವಿಶ್ವಕಪ್ ನಂತರ ಎಂ.ಎಸ್. ಧೋನಿ ಮತ್ತು ತಂಡದ ಆಡಳಿತ ಮಂಡಳಿ ಅವರನ್ನು ಕೈಬಿಟ್ಟು ಆರ್.ಅಶ್ವಿನ್‍ಗೆ ಮಣೆ ಹಾಕಿತು. ಹೀಗಾಗಿ ಮುಂದಿನ 6 ವರ್ಷಗಳವರೆಗೆ ಎಲ್ಲಾ ಸ್ವರೂಪಗಳಲ್ಲಿ ಸ್ಪಿನ್ ದಾಳಿಯನ್ನು ಆರ್.ಅಶ್ವಿನ್ ಮುನ್ನಡೆಸಿದರು.

ಸದ್ಯ ಐಪಿಎಲ್ ಮಾತ್ರ ಆಡುತ್ತಿರುವ ಹರ್ಭಜನ್ ಸಿಂಗ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಆಯ್ಕೆಯಾಗುವ ನಿರೀಕ್ಷೆಯಿಲ್ಲ. ಆದರೆ ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಹೊರತಾಗಿಯೂ ಐಪಿಎಲ್ ಅಥವಾ ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ. ಇತ್ತ ಅಂಬಟಿ ರಾಯುಡು, ಸ್ಟುವರ್ಟ್ ಬಿನ್ನಿ, ಮನೋಜ್ ತಿವಾರಿ ಹಾಗೂ ಪಾರ್ಥಿವ್ ಪಟೇಲ್ ಅವರು ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡುವುದು ಭಾರೀ ಕಷ್ಟ ಎನ್ನಲಾಗುತ್ತಿದೆ.

Ambati Rayudu

ಅಂಬಟಿ ರಾಯುಡು:
2019ರ ವಿಶ್ವಕಪ್‍ಗೆ ಅಂಬಟಿ ರಾಯುಡು ಅವರನ್ನು ಆಯ್ಕೆ ಸಮಿತಿ ಕೈಬಿಟ್ಟಿದ್ದು ಅಚ್ಚರಿ ಮೂಡಿಸಿತ್ತು. ಅಷ್ಟೇ ಅಲ್ಲದೆ ಟೂರ್ನಿ ನಡುವೆ ಆಟಗಾರರು ಗಾಯದಿಂದ ವಿಶ್ರಾಂತಿಗೆ ಜಾರಿದಾಗ ಎರಡು ಅವಕಾಶಗಳು ಇದ್ದಾಗಲೂ ಅವರನ್ನು ಕಡೆಗಣಿಸಲಾಗಿತ್ತು. ಬದಲಾಗಿ ರಿಷಬ್ ಪಂತ್ ಮತ್ತು ಮಾಯಾಂಕ್ ಅಗರ್ವಾಲ್ ಅವರಿಗೆ ಮಣೆ ಹಾಕಲಾಗಿತ್ತು. ಈ ಮೂಲಕ ಟೀಂ ಇಂಡಿಯಾದಲ್ಲಿ ಅಂಬಟಿ ರಾಯುಡು ಕಮ್‍ಬ್ಯಾಕ್ ಕಷ್ಟ ಎನ್ನುವ ಸಂದೇಶವನ್ನು ಬಿಸಿಸಿಐ ಪರೋಕ್ಷವಾಗಿ ರವಾನಿಸಿತ್ತು. ಶ್ರೇಯಸ್ ಅಯ್ಯರ್ ಉತ್ತಮ ಫಾರ್ಮ್ ನಲ್ಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದರಿಂದಾಗಿ ರಾಯುಡು ಅವರಿಗಿದ್ದ ಅವಕಾಶ ಕೈತಪ್ಪಿದೆ.

Stuart Binny A 1

ಸ್ಟುವರ್ಟ್ ಬಿನ್ನಿ:
2016ರಿಂದ ಟೀಂ ಇಂಡಿಯಾದಿಂದ ಹೊರಗುಳಿದ ನಂತರ ಸ್ಟುವರ್ಟ್ ಬಿನ್ನಿ ದೇಶೀಯ ಕ್ರಿಕೆಟ್‍ನಲ್ಲಿ ಮುಂದುವರಿದಿದ್ದಾರೆ. 2018ರಲ್ಲಿ ಅವರು ಕರ್ನಾಟಕ ತಂಡದಿಂದ ಹೊರಗುಳಿದಿದ್ದರು. 2019-20ರ ಮಧ್ಯೆ ನಾಗಾಲ್ಯಾಂಡ್ ತಂಡ ಸೇರಲು ಮುಂದಾಗಿದ್ದರು. ಐಪಿಎಲ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ತಂಡವು ಬಿನ್ನಿ ಅವರನ್ನು 13ನೇ ಆವೃತ್ತಿಗೆ ಕೈಬಿಟ್ಟಿದೆ. ಬಳಿಕ ನಡೆದ ಹರಾಜಿನಲ್ಲಿ ಸ್ಟುವರ್ಟ್ ಬಿನ್ನಿ ಅವರನ್ನು ಯಾವುದೇ ತಂಡ ಖರೀದಿಸಲು ಮುಂದೆ ಬರಲಿಲ್ಲ.

ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದಲ್ಲಿ ಆಲ್‍ರೌಂಡರ್ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ ಬಿನ್ನಿ ಕಮ್‍ಬ್ಯಾಕ್ ಕಷ್ಟ ಎಂದು ಹೇಳಲಾಗುತ್ತಿದೆ. 2015ರ ವಿಶ್ವಕಪ್ ತಂಡದ ಸದಸ್ಯರಾಗಿದ್ದ ಬಿನ್ನಿ 2014ರಿಂದ 2016ರವರೆಗೆ ಆರು ಟೆಸ್ಟ್, 14 ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಿದ್ದಾರೆ.

Manoj Tiwary

ಮನೋಜ್ ತಿವಾರಿ:
ಎಂ.ಎಸ್.ಧೋನಿ ಹಾಗೂ ತಂಡದ ಆಯ್ಕೆ ಸಮಿತಿಯ ಒಂದು ಕಾಲದ ಮೊದಲ ಆಯ್ಕೆಯ ಆಟಗಾರ ಮನೋಜ್ ತಿವಾರಿ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪರದಾಡಿದರು. ಶತಕ ಗಳಿಸಿದ ನಂತರವೂ ಅವರು ಆಡುವ ಇಲೆವನ್ ತಂಡದಿಂದ ಹೊರಗುಳಿದರು. ಟೀಂ ಇಂಡಿಯಾ ಜೊತೆಗೆ ಪ್ರಪಂಚದಾದ್ಯಂತ ಪ್ರವಾಸ ಮಾಡಿದರು ಮನೋಜ್ ತಿವಾರಿ, 2008ರಿಂದ 2015ರವರೆಗೆ ಕೇವಲ 12 ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಅವರು 2018ರಿಂದ ಭಾರತ ಎ ಪರ ಆಡಿಲ್ಲ. ತಿವಾರಿ ದೇಶೀಯ ಕ್ರಿಕೆಟ್‍ನಲ್ಲಿ ಬಂಗಾಳ ಪರ ಆಡುವುದನ್ನು ಮುಂದುವರಿಸಿದ್ದಾರೆ. ಆದರೆ ರಾಷ್ಟ್ರೀಯ ತಂಡಕ್ಕೆ ಕರೆಸಿಕೊಳ್ಳುವ ಸಾಧ್ಯತೆಗಳು ವಿರಳ ಎನ್ನಲಾಗುತ್ತಿದೆ.

Parthiv Patel b

ಪಾರ್ಥಿವ್ ಪಟೇಲ್:
ಎಂ.ಎಸ್.ಧೋನಿ ಅವರ ಎಂಟ್ರಿ ಪಾರ್ಥಿವ್ ಪಟೇಲ್ ಅವರನ್ನು ಟೀಂ ಇಂಡಿಯಾದಿಂದ ದೂರವಾಗುವಂತೆ ಮಾಡಿತು ಎನ್ನಲಾಗುತ್ತಿದೆ. 2018-19ರಲ್ಲಿ ನಡೆದ ಆಸ್ಟ್ರೇಲಿಯಾ ಪ್ರವಾಸದ ಸಂದರ್ಭದಲ್ಲಿ ಅವರು ಟೆಸ್ಟ್ ತಂಡದ ಭಾಗವಾಗಿದ್ದರು. ಆದರೆ ರಿಷಬ್ ಪಂತ್ ಅವರು ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರಿಂದ ಅವಕಾಶ ಸಿಗಲಿಲ್ಲ. ಪಾರ್ಥಿವ್ ಪಟೇಲ್ ಐಪಿಎಲ್ ಮತ್ತು ದೇಶೀಯ ಕ್ರಿಕೆಟ್ ಆಡುವುದನ್ನು ಮುಂದುವರಿಸಿದ್ದಾರೆ. ಆದರೆ ವೃದ್ಧಿಮಾನ್ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

TAGGED:Ambati RayuduManoj TiwaryParthiv PatelPublic TVStuart BinnyTeam Indianಅಂಬಟಿ ರಾಯುಡುಕಮ್‍ಬ್ಯಾಕ್ಟೀಂ ಇಂಡಿಯಾಪಬ್ಲಿಕ್ ಟಿವಿಪಾರ್ಥಿವ್ ಪಟೇಲ್ಮನೋಜ್ ತಿವಾರಿಸ್ಟುವರ್ಟ್ ಬಿನ್ನಿ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
1 minute ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
4 minutes ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
32 minutes ago
Chitradurga Murder
Chitradurga

ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲ್ಲಿ ಅಮಾಯಕ ಬಲಿ

Public TV
By Public TV
38 minutes ago
dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
3 hours ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?