Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರದಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರೀಡಾಂಗಣ – ಉ.ಕದಲ್ಲೇ ಏಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರವಾರದಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರೀಡಾಂಗಣ – ಉ.ಕದಲ್ಲೇ ಏಕೆ?

Districts

ಕಾರವಾರದಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರೀಡಾಂಗಣ – ಉ.ಕದಲ್ಲೇ ಏಕೆ?

Public TV
Last updated: June 14, 2020 3:33 pm
Public TV
Share
3 Min Read
Uttara Kannada
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಎರಡನೇ ಅಂತಾರಾಷ್ಟ್ರೀಯ ಕ್ರೀಡಾಂಗಣ ತಲೆ ಎತ್ತಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕೆ.ಎಸ್.ಸಿ.ಎ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಸಂತೋಷ್ ಮೇನನ್ ಅವರನ್ನು ಅವರ ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸದ್ಯ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕಾಗಿ ಕಾರವಾರ-ಗೋವಾ ಗಡಿ ಭಾಗದ ಕಾಳಿನದಿ ಅರಬ್ಬಿ ಸಮದ್ರ ಸೇರುವ ಸಂಗಮ ಸ್ಥಳವಾದ ಸದಾಶಿವಗಡ್‍ನಲ್ಲಿ 12 ಎಕರೆ ಜಮೀನನನ್ನು ನಿಗದಿ ಮಾಡಲಾಗಿದ್ದು, ಪ್ರಸಕ್ತ ಬಜೆಟ್‍ನಲ್ಲಿ ಅನುಮೋದನೆ ಪಡೆದು ಕಾರ್ಯ ಪ್ರಾರಂಭಿಸಲಾಗುತ್ತದೆ.

Uttara Kannada 2

ಇಲ್ಲಿಯೇ ಯಾಕೆ?
ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣವಿದೆ. ಅದನ್ನು ಹೊರತುಪಡಿಸಿದರೆ ಜಿಲ್ಲೆಯ ಮಟ್ಟದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮೊದಲು ಪ್ರಸ್ತಾಪ ಮಾಡಲಾಗಿದೆ. ಇದಕ್ಕೆ ಕಾರಣ ಇಲ್ಲಿನ ಪರಿಸರ. ಹೌದು ಕಾರವಾರ ನೈಸರ್ಗಿಕವಾಗಿ ಅದ್ಭುತ ಪ್ರದೇಶವಾಗಿದೆ. ಜೊತೆಗೆ ಗೋವಾ ರಾಜ್ಯ ಕೂಡ ಸಮೀಪದಲ್ಲಿಯೇ ಇದೆ. ರಾಷ್ಟ್ರ ಕವಿ ರವೀಂದ್ರನಾಥ ಠಾಗೂರ್ ರವರಿಗೆ ಗೀತಾಂಜಲಿ ಕವನ ಸಂಕಲನ ಬರೆಯಲು ಸ್ಫೂರ್ತಿ ನೀಡಿದ ಹಾಗೂ ಅವರಿಂದ ಬಾಯಿತುಂಬಾ ಕರ್ನಾಟಕದ ಕಾಶ್ಮೀರ ಎಂದು ಹೊಗಳಿಸಿಕೊಂಡ ಪ್ರದೇಶವು ಇದೇ ಕಾರವಾರದ ಸಮುದ್ರ ತೀರ.

Uttara Kannada 4

ಒಂದೆಡೆ ಕಾಳಿ ನದಿ, ಇನ್ನೊಂದೆಡೆ ಅರಬ್ಬಿ ಸಮುದ್ರ ಇದರ ಸಂಗಮವಾಗುವುದೇ ಕಾರವಾರದ ಸದಾಶಿವಗಡದಲ್ಲಿ. ಇಲ್ಲಿಯೇ ರಾಜ್ಯ ಸರ್ಕಾರ 12 ಎಕರೆ ವಿಸ್ಥಾರವಾದ ಜಾಗವನ್ನು ಕಾಯ್ದಿರಿಸಿದೆ. ಆರು ಎಕರೆ ಪ್ರದೇಶದಲ್ಲಿ ಕ್ರೀಡಾಂಗಣ, ಉಳಿದ ಆರು ಎಕರೆ ಪ್ರದೇಶದಲ್ಲಿ ಪಾರ್ಕಿಂಗ್, ಕಚೇರಿ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲು ನಿರ್ಧಾರ ಮಾಡಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಅನುಮೋದನೆ ಪಡೆದು 2030ರ ವೇಳೆಗೆ ಕಾರ್ಯಾರಂಭ ಮಾಡುವ ಉದ್ದೇಶ ಸರ್ಕಾರದ್ದಾಗಿದೆ. ಸದ್ಯ ಈ ಕ್ರೀಡಾಂಗಣಕ್ಕೆ ಸಂಪರ್ಕ ಸಾಧಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚತುಷ್ಪತ ಕಾಮಗಾರಿ ಪೂರ್ಣವಾಗುತ್ತಿದೆ.

Uttara Kannada 3

ಅಂಕೋಲದಲ್ಲಿ ನೌಕಾದಳದ ಸಹ ಭಾಗಿತ್ವದ ನಾಗರೀಕ ವಿಮಾನ ನಿಲ್ದಾಣ ಪ್ರಸ್ಥಾಪ ಜಾರಿಯಾಗುವ ಸಾಧ್ಯತೆಗಳಿವೆ. ಕಾರವಾರದಿಂದ ಗೋವಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ 70 ಕಿಲೋಮೀಟರ್ ಅಂತರವಿದ್ದರೆ, ಅಂತಾರಾಷ್ಟ್ರೀಯ ಮಾದರಿಯ ಹೋಟೆಲ್‍ಗಳು 40ರಿಂದ 50 ಕಿಮೀ ವ್ಯಾಪ್ತಿಯಲ್ಲಿದ್ದು ಆಟಗಾರರು, ಅಂತಾರಾಷ್ಟ್ರೀಯ ಅತಿಥಿಗಳಿಗೆ ಉಳಿದುಕೊಳ್ಳಲು ಉತ್ತಮ ಅವಕಾಶ ಹಾಗೂ ವ್ಯವಸ್ಥೆಗಳಿವೆ. ಇದಲ್ಲದೇ ಜನರಿಗೆ ಸಂಚರಿಸಲು ಕೊಂಕಣ ರೈಲ್ವೆ ಮಾರ್ಗ ಸಹ ಉತ್ತಮವಾಗಿದ್ದು ರಾಜ್ಯ ಮತ್ತು ಹೊರ ರಾಜ್ಯದ ನಾನಾ ಭಾಗದಿಂದ ಇಲ್ಲಿಗೆ ಬರಲು ರೈಲ್ವೆ ವ್ಯವಸ್ಥೆ ಸಹ ಇದೆ. ಶೀಘ್ರದಲ್ಲೇ ಹುಬ್ಬಳ್ಳಿ ಅಂಕೋಲ ಭಾಗಕ್ಕೂ ರೈಲ್ವೇ ಮಾರ್ಗ ಮಾಡಲು ಸಿದ್ಧತೆ ನಡೆದಿದೆ.

Uttara Kannada 5

ಜಿಲ್ಲೆಯ ಅಭಿವೃದ್ಧಿಗೆ ಪೂರಕ
ಕಾರವಾರ ನೈಸರ್ಗಿಕ ಸಂಪತ್ಬರಿತ ತಾಲೂಕಾಗಿದ್ದರೂ ಅತೀ ಹಿಂದುಳಿದ ಅಭಿವೃದ್ಧಿ ಕಾಣದ ತಾಲೂಕಿನಲ್ಲಿ ಇದು ಒಂದಾಗಿದೆ. ಮೀನುಗಾರಿಕೆ ಇಲ್ಲಿನ ಮುಖ್ಯ ಕಸಬು. ಆದರೇ ಈ ಪ್ರದೇಶದಲ್ಲಿ ದೊಡ್ಡ ಕಾರ್ಖಾನೆಯಾಗಲಿ, ಕಂಪನಿಗಳಾಗಲಿ ಇಲ್ಲ. ಇಲ್ಲಿನ ಜನರು ಉದ್ಯೋಗಕ್ಕಾಗಿ ನೆರೆಯ ಗೋವಾವನ್ನು ಅವಲಂಬಿಸಿದ್ದಾರೆ. ಪ್ರವಾಸೋದ್ಯಮ ಉತ್ತಮ ಅವಕಾಶ ಇದ್ದರೂ ಸಹ ಏಷ್ಯಾದ ಅತಿದೊಡ್ಡ ನೌಕಾ ನೆಲೆಯಾದ ಕದಂಬ ನೌಕಾ ನೆಲೆಗಾಗಿ ಸಮುದ್ರ ಭಾಗದ ತೀರ ಪ್ರದೇಶ ಸೇರಿದಂತೆ ಹಲವು ಭಾಗವನ್ನು ದೇಶದ ಹಿತಕ್ಕಾಗಿ ದಾರೆ ಎರೆದಿದ್ದಾರೆ.

Uttara Kannada 6

ಇಂತಹ ಸ್ಥಿತಿಯಲ್ಲಿ ಪ್ರವಾಸೋದ್ಯಮ ಅವಕಾಶ ಸಹ ಕ್ಷೀಣಿಸಿತ್ತು. ಆದರೇ ಕಳೆದ ಹತ್ತು ವರ್ಷಗಳಲ್ಲಿ ಕಾರವಾರ ಭಾಗ ಸಾಕಷ್ಟು ಬದಲಾವಣೆಯಾಗಿದ್ದು, ಪ್ರವಾಸೋದ್ಯಮ ಇಲಾಖೆಯ ಸಹಕಾರದಲ್ಲಿ ಇಲ್ಲಿನ ಜನರು ಪ್ರವಾಸೋದ್ಯಮದಲ್ಲಿ ಉದ್ಯೋಗ ಹುಡುಕಿಕೊಂಡಿದ್ದಾರೆ. ಹೀಗಾಗಿ ಅಂತಾರಾಷ್ಟ್ರೀಯ ಕ್ರೀಡಾಂಗಣವಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಜೊತೆಗೆ ಉದ್ಯೋಗ ಸೃಷ್ಟಿ ಸಹ ಆಗಲಿದೆ. ಅಂತಾರಾಷ್ಟ್ರೀಯ ಮನ್ನಣೆಯ ಜೊತೆ ನೆರೆಯ ಗೋವಾದಂತೆ ಕಾರವಾರವೂ ಅಭಿವೃದ್ಧಿಯಾಗಲಿದೆ.

TAGGED:governmentInternational stadiumkarwarPublic TVtourismUttara Kannadaಅಂತರಾಷ್ಟೀಯ ಮೈದಾನಉತ್ತರ ಕನ್ನಡಕಾರವಾರಪಬ್ಲಿಕ್ ಟಿವಿಪ್ರವಾಸೋದ್ಯಮಸರ್ಕಾರ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
4 minutes ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
29 minutes ago
Using Mobile
Bengaluru City

ಸ್ಕೂಲ್, ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? – ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಕ್ಕೆ ಮನವಿ

Public TV
By Public TV
1 hour ago
Abhishek Sharma Hardik Pandya
Cricket

ಅಭಿಷೇಕ್‌, ಹಾರ್ದಿಕ್‌ ಸ್ಫೋಟಕ ಫಿಫ್ಟಿ; ಜಿಂಬಾಬ್ವೆಗೆ 257 ಬೃಹತ್‌ ರನ್‌ಗಳ ಗುರಿ

Public TV
By Public TV
1 hour ago
bank loan
Hassan

9 ರೂಪಾಯಿ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್‌ – 10 ರೂ. ಲೋನ್ ಕಟ್ಟಿ 66 ಪೈಸೆ ವಾಪಸ್ ಕೊಡಿ ಅಂತ ಗ್ರಾಹಕ ಪಟ್ಟು

Public TV
By Public TV
2 hours ago
DK Shivakumar 1 1
Districts

ಸರ್ಕಾರಕ್ಕೆ ಹೊರೆಯಾದ್ರೂ ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ: ಡಿಕೆಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?