Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಲ್ಲರೂ ಈಜಿ ದಡ ಸೇರಿದರು, ನಾನು ಸೇರಿಲ್ಲ: ಎಚ್.ವಿಶ್ವನಾಥ್

Public TV
Last updated: June 18, 2020 11:11 am
Public TV
Share
2 Min Read
h vishwanath
SHARE

– ನನ್ನ ಧ್ವನಿ ಅಡಗಿಸಲು ಸಾಧ್ಯವಿಲ್ಲ

ಬೆಂಗಳೂರು: ಭಾರೀ ನಿರೀಕ್ಷೆ ಹುಟ್ಟಿಸಿದ್ದ ಬಿಜೆಪಿಯ ವಿಧಾನ ಪರಿಷತ್ ಟಿಕೆಟ್ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ನಿರೀಕ್ಷೆಯಂತೆಯೇ ಬಿಜೆಪಿ ಸರ್ಕಾರ ರಚಿಸಲು ಕಾರಣರಾದವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಚ್.ವಿಶ್ವನಾಥ್ ಅವರನ್ನು ಕೈ ಬಿಡಲಾಗಿದೆ.

BJP MLC Election Candidates 1

ಈ ಕುರಿತು ಮಾಜಿ ಸಚಿವ ಎಚ್.ವಿಶ್ವನಾಥ್ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ನಾನು ಬಿಜೆಪಿಗೆ ಹೊಸಬ, ನನಗೆ ಬಿಜೆಪಿಯ ಆಳ ಅಗಲ ಗೊತ್ತಿಲ್ಲ. ನನ್ನ ಜೊತೆಗೆ ಬಂದವರು ಎಲ್ಲರೂ ಈಜಿ ದಡ ಸೇರಿದ್ದಾರೆ. ನಾನು ಇನ್ನು ಸೇರಿಲ್ಲ. ನಾನು ಹಿಂದುಳಿದ ವರ್ಗದ ಹಿರಿಯ ನಾಯಕ. ಯಾಕೆ ಟಿಕೆಟ್ ತಪ್ಪಿಸಿದ್ದಾರೆ ಗೊತ್ತಿಲ್ಲ. ಇದರಿಂದ ನಾನು ಹತಾಷನಾಗಿಲ್ಲ. ನಮ್ಮ ನಾಯಕ ಯಡಿಯೂರಪ್ಪ, ತ್ಯಾಗಕ್ಕೆ ಪ್ರತಿಫಲ ಸಿಗುತ್ತೆ. ಈಗಲು ಯಡಿಯೂರಪ್ಪನವರ ಮೇಲೆ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BJP MLC Election Candidates 3

ರಾಜ್ಯ ನಾಯಕರು ನಾಲ್ಕು ಜನರ ಹೆಸರನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಿದ್ದರು. ಆದರೆ ಇದೀಗ ನನ್ನ ಹೆಸರನ್ನು ಕೈ ಬಿಡಲಾಗಿದೆ. ಕಡೆ ಘಳಿಗೆವರೆಗೂ ಯಡಿಯೂರಪ್ಪನವರು ನನ್ನ ಪರವಾಗಿ ಪ್ರಯತ್ನ ಮಾಡಿದ್ದಾರೆ. ಆದರೆ ದೆಹಲಿಯಲ್ಲಿ ನನಗೆ ಟಿಕೆಟ್ ತಪ್ಪಿದೆ. ಇದರ ಹಿಂದೆ ಯಾರಿದ್ದಾರೆ ಗೊತ್ತಿಲ್ಲ. ಇಂತಹ ಸಾಕಷ್ಟು ಸಂಕಷ್ಟಗಳನ್ನ ಎದುರಿಸಿಯೇ ನಾನು ಈ ಹಂತಕ್ಕೆ ಬಂದಿದ್ದೇನೆ. ನನಗೆ ಇದು ಹೊಸತೇನು ಅಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ಈಗಲೂ ನಂಬಿಕೆ ಇದೆ. ಕಾದು ನೋಡೋಣ ಎಂದು ತಿಳಿಸಿದ್ದಾರೆ.

BJP MLC Election Candidates 5

ಯಾರ ಕೈವಾಡವಿದೆ ಎಂದು ತಿಳಿದಿಲ್ಲ. ವೈಯಕ್ತಿಕವಾಗಿ ನನಗೆ ಬೇಸರವಿಲ್ಲ. ಆದರೆ ನನ್ನಂಥ ಒಬ್ಬ ಹಿರಿಯ ಹಿಂದುಳಿದ ನಾಯಕನಿಗೆ ಯಾಕೆ ಟಿಕೆಟ್ ತಪ್ಪಿತು ಎಂಬ ನೋವಿದೆ. ಈಗಾಗಲೇ ಹಲವು ನೋವುಗಳನ್ನು ನುಂಗಿಕೊಂಡು ಬಂದವನು. ಈಗ ಎಂಎಲ್‍ಸಿ ಟಿಕೆಟ್ ಸಿಗಲಿಲ್ಲವೆಂದು ಹತಾಶನಾಗಿಲ್ಲ.

ನನ್ನ ಧ್ವನಿ ಅಡಗಲಿಕ್ಕೆ ಸಾಧ್ಯವಿಲ್ಲ, ಯಾರಿಂದಲೂ ಅಡಗಿಸಲೂ ಸಾಧ್ಯವಿಲ್ಲ. ವಿಶ್ವನಾಥ್ ಧ್ವನಿ ಯಾವಾಗಲೂ ಮಾರ್ಧನಿಸುತ್ತಿರುತ್ತದೆ. ಮೆತ್ತಗಾಗುವ ಪ್ರಶ್ನೆಯೇ ಇಲ್ಲ. ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.

BJP MLC Election Candidates 4

ತಡರಾತ್ರಿ ಬಿಜೆಪಿ ತನ್ನ ಮೇಲ್ಮನೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಂದು ನಾಲ್ವರು ನಾಮಪತ್ರ ಸಲ್ಲಿಸಲಿದ್ದಾರೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಹೆಚ್. ವಿಶ್ವನಾಥ್ ಬಿಜೆಪಿ ಬಿಗ್ ಶಾಕ್ ನೀಡಿದೆ. ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ನಾಲ್ವರಿಗೆ ಟಿಕೆಟ್ ಸಿಕ್ಕಿದೆ. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್ ಗೆ ನೀಡಿದ ಮಾತನ್ನು ಸಿಎಂ ಯಡಿಯೂರಪ್ಪ ಉಳಿಸಿಕೊಂಡಿದ್ದಾರೆ. ಆದರೆ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿಎಂ ವಿಫಲವಾಗಿರೋದು ಮೇಲ್ನೋಟಕ್ಕೆ ಕಾಣಿಸುತ್ತಿದೆ.

TAGGED:bjph vishwanathPublic TVState Legislative Councilಎಚ್ ವಿಶ್ವನಾಥ್ಪಬ್ಲಿಕ್ ಟಿವಿಬಿಜೆಪಿವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema Updates

Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
10 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
5 hours ago

You Might Also Like

01 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-1

Public TV
By Public TV
9 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
15 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
26 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
42 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?