Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

Latest

ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

Public TV
Last updated: June 18, 2020 2:55 pm
Public TV
Share
3 Min Read
india china army
SHARE

ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ.

ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್‌ ಅನ್ನು ಭಾರತದ ನೆಲೆಗೆ ತಂದಿದ್ದು, ಅದರ ಫೋಟೋ ಈಗ ವೈರಲ್‌ ಆಗಿದೆ.

ಪಾಕಿಸ್ತಾನದ ಬಾರ್ಡರ್‌ ಆಕ್ಷನ್‌ ಪಡೆ ಸಹ ಈ ತಂತ್ರವನ್ನೇ ಅನುಸರಿಸುತ್ತದೆ. ವೀರ ಯೋಧರ ಮರಣೋತ್ತರ ಪರೀಕ್ಷೆಯಲ್ಲೂ ದೇಹದ ಮೇಲೆ ಗಂಭೀರ ಗಾಯ ಇರುವುದು ದೃಢಪಟ್ಟಿದೆ.

india china amry

ಘಟನೆ ಹೇಗಾಯ್ತು?
ಗಾಲ್ವಾನ್ ನದಿ ಪ್ರದೇಶದಲ್ಲಿ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಚೀನಾ ಟೆಂಟ್‌ ನಿರ್ಮಿಸಿತ್ತು. ಕಳೆದ ವಾರ ಲೆಫ್ಟಿನೆಂಟ್ ಕಮಾಂಡರ್ ಮಟ್ಟದಲ್ಲಿ ಪಾಯಿಂಟ್ 14ನಲ್ಲಿ ಸಭೆ ನಡೆಸಿತ್ತು. ಮಾತುಕತೆಯಂತೆ ಟೆಂಟ್ ತೆರವು ಆಗಿದ್ಯಾ? ಇಲ್ವಾ? ಅಂತ ಪರಿಶೀಲನೆಗೆ ಭಾರತ ಹೋಗಿತ್ತು. ವಾಹನದಲ್ಲಿ ಕರ್ನಲ್ ಸಂತೋಷ್ ಬಾಬು, ಪಳನಿ, ಓಝೋ ಗಸ್ತು ಹೋಗಿದ್ದರು.

ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ ತೆರವು ಮಾಡದ ಹಿನ್ನೆಲೆಯಲ್ಲಿ ಮಾತುಕತೆ ನಡೆಸುತ್ತಿದ್ದಾಗಲೇ ಚೀನಿ ಸೈನಿಕರು ಹಲ್ಲೆ ನಡೆಸಿದ್ದರು. ನಡೆಸಿದ ವಿಚಾರ ತಿಳಿದು ಭಾರತದ ಸೈನಿಕರು ಮತ್ತಷ್ಟು ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದಾಗ ಚೀನಿಯರು ಕಲ್ಲು ತೂರಾಟ ನಡೆಸಿ ಕಬ್ಬಿಣದ ರಾಡ್‌ಗಳಿಂದ ಹೊಡೆದಿದ್ದಾರೆ. ಪರಿಣಾಮ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ. ಈ ವೇಳೆ ಭಾರತದ ಸೈನಿಕರು ತಿರುಗೇಟು ನೀಡಿ 43 ಚೀನಿ ಸೈನಿಕರನ್ನು ಹತ್ಯೆ ಮಾಡಿದ್ದಾರೆ.

india china 1

ಗನ್‌ ಫೈರ್‌ ಮಾಡುವಂತಿಲ್ಲ:
ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು, ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಗುಂಡಿನ ದಾಳಿಯ ಬದಲು ಪರಸ್ಪರ ಕಲ್ಲು, ದೊಣ್ಣೆಗಳಿಂದ ಬಡಿದಾಡಿಕೊಳ್ಳುತ್ತಾರೆ.

LADAKH INDIAN CHINA

ಭಾರತ ಹೇಳಿದ್ದು ಏನು?
ಜೂನ್‌ 6 ರಂದು ನಡೆದ ಮಿಲಿಟರಿ ಕಮಾಂಡರ್‌ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್‌ ನಿರ್ಮಿಸಿತ್ತು. ವಿವಾದಕ್ಕೆ ಕಾರಣವಾದ ಈ ಟೆಂಟ್‌ ಅನ್ನು ಚೀನಾ ತೆರವು ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ ಚೀನಾ ಸೇನೆ ಪೂರ್ವ ನಿಗದಿಯಂತೆ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ.

ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಜೂನ್‌ 6 ರಂದು ಕಮಾಂಡರ್‌ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.

india china ladakh border conflict

ಚೀನಾ ಹೇಳಿದ್ದು ಏನು?
ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತ ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಈ ಕೃತ್ಯ ಎಸಗಿದೆ. ಚೀನಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು. ನೂರು ಕೋಟಿ ಜನಸಂಖ್ಯೆ ಇರುವ ದೇಶಗಳಾದ ನಾವು ಅಭಿವೃದ್ಧಿ ವಿಚಾರಗಳಿಗೆ ಮನ್ನಣೆ ನೀಡಬೇಕು.

TAGGED:chinaChina ArmyindiaIndian soldierskannada newsಎಲ್‍ಎಸಿಕಬ್ಬಿಣದ ರಾಡ್ಗಾಲ್ವಾನ್‌ಚೀನಾಭಾರತಮೊಳೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
4 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
18 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
1 hour ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?