Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಗೋಕರ್ಣ: ಗ್ರಹಣಕಾಲದಲ್ಲಿ ಸಮುದ್ರದಲ್ಲಿ ಮಿಂದೆದ್ದ ಮಹಾಬಲೇಶ್ವರ ಭಕ್ತರು

Public TV
Last updated: June 21, 2020 3:44 pm
Public TV
Share
2 Min Read
Gokarna Sea Bathing 1
SHARE

ಕಾರವಾರ: ಖಂಡಗ್ರಾಸ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಸ್ಥಳೀಯ ಜನರು ಹಾಗೂ ಯಾತ್ರಿಕರು ಸಮುದ್ರ ಸ್ನಾನ ಮಾಡಿ ಗ್ರಹಣ ದೋಷ ನಿವಾರಣೆಗಾಗಿ ಜಪತಪ ಕೈಗೊಂಡರು.

ಗ್ರಹಣ ಪ್ರಾರಂಭವಾಗುತ್ತಿದ್ದಂತೆ ಗೋಕರ್ಣದ ಕಡಲತೀರಕ್ಕೆ ಆಗಮಿಸಿದ ಜನರು ಮೊದಲು ಪವಿತ್ರ ಸಮುದ್ರ ಸ್ನಾನ ನೆರವೇರಿಸಿದರು. ನಂತರ ಕಡಲತೀರದ ಮರಳಿನಲ್ಲಿ ಲಿಂಗವನ್ನು ಸೃಷ್ಟಿಸಿ ಪೂಜೆ ನೆರವೇರಿಸಿ ಗ್ರಹಣ ಮುಗಿಯುವವರೆಗೂ ಮಹಾಬಲೇಶ್ವರನ ಧ್ಯಾನದಲ್ಲಿ ನಿರತರಾಗಿ ನಂತರ ಗೋಕರ್ಣದ ಮಹಾಬಲೇಶ್ವರನ ದರ್ಶನ ನೆರವೇರಿಸಿದರು.

Gokarna Sea Bathing 3

ಸಮುದ್ರ ಸ್ನಾನ-ಆರೋಗ್ಯಕ್ಕೂ ಹಿತ: ಹಲವು ನದಿಗಳು ಸೇರುವ ಅರಬ್ಬಿ ಸಮುದ್ರದ ಗೋಕರ್ಣ ಕಡಲತೀರವು ಮಹೇಶ್ವರನ ಆತ್ಮಲಿಂಗ ನೆಲೆಯೂರಿದ ಸ್ಥಳವಾಗಿದೆ. ಧಾರ್ಮಿಕ ಕಾರಣದಿಂದ ಗೋಕರ್ಣ ವಿಶೇಷ ಸ್ಥಾನ ಪಡೆದಿದ್ದು, ಇಲ್ಲಿನ ಸಮುದ್ರವೂ ವಿಶೇಷ ಪ್ರಾಮುಖ್ಯತೆ ಹೊಂದಿದೆ. ಸಮುದ್ರಕ್ಕೆ ಹಲವು ನದಿಗಳು ಸೇರುವುದರಿಂದ ಸಮುದ್ರಕ್ಕೆ ಮಹಾ ಗಂಗಾ ಎಂದು ಹೇಳಲಾಗುತ್ತದೆ. ಹಲವು ರೋಗ ರುಜನೆಗಳನ್ನು ಪರಿಹರಿಸುವ ಶಕ್ತಿ ಈ ಸಮುದ್ರಕ್ಕಿದೆ ಎಂಬ ನಂಬಿಕೆಯಾಗಿದ್ದು, ನಮ್ಮ ದೇಹದ ನೆಗೆಟಿವ್ ಎನರ್ಜಿಯನ್ನು ತೆಗೆದುಹಾಕುತ್ತದೆ ಎಂಬ ನಂಬಿಕೆ.

ಗ್ರಹಣ ಸಮಯದಲ್ಲಿ ಸಮುದ್ರ ಹಾಗೂ ನದಿ ಸ್ನಾನ ಮಾಡುವ ಸಂಪ್ರದಾಯವಿದೆ. ಸಮುದ್ರದ ನೀರು ಉಪ್ಪಾಗಿರುವ ಕಾರಣದಿಂದ ಅದು ಚರ್ಮ ರೋಗಗಳನ್ನು ನಿವಾರಣೆ ಮಾಡಿ ದೇಹಕ್ಕೆ ಒಳ್ಳೆಯದನ್ನು ಮಾಡಲಿದೆ ಎನ್ನುತ್ತೆ ವಿಜ್ಞಾನ. ನಮ್ಮ ಪೂರ್ವಜರು ಹಿಂದಿನಿಂದಲೂ ಈ ರೀತಿಯ ಸ್ನಾನದ ಆಚರಣೆಗಳನ್ನು ಮಾಡಿಕೊಂಡು ಬಂದಿದ್ದಾರೆ. ಸಮುದ್ರ ಸ್ನಾನ ಮಾಡುವುದರಿಂದ ನೀರಿನ ತೇಜದಾಯಕ ಸ್ಪರ್ಶದಿಂದ ದೇಹದಲ್ಲಿನ ಚೇತನವೂ ಜಾಗೃತವಾಗಿ ಅದು ದೇಹದ ಟೊಳ್ಳುಗಳಲ್ಲಿ ಸಂಗ್ರಹವಾಗಿರುವ ಮತ್ತು ಘನೀಕೃತವಾಗಿರುವ ರಜ-ತಮಾತ್ಮಕ ಲಹರಿಗಳನ್ನು ಜಾಗೃತಗೊಳಿಸಿ ಹೊರಗೆ ತಳ್ಳುತ್ತದೆ.

Gokarna Sea Bathing 4

ಸಮುದ್ರದಲ್ಲಿ ಸ್ನಾನ ಮಾಡುವುದಕ್ಕಿಂತ ಮೊದಲು ಜನರು ಜಲದೇವತೆಯನ್ನು ಪ್ರಾರ್ಥಿಸಿ ಸೂರ್ಯನಮಸ್ಕಾರ ಹಾಗೂ ಅರ್ಗೆಯನ್ನು ಕೊಟ್ಟು ಪೂಜಿಸುತ್ತಾರೆ. ನಂತರ ನಾಮಜಪ ಮಾಡುತ್ತಾ ಅಥವಾ ಶ್ಲೋಕವನ್ನು ಹೇಳುತ್ತಾ ಸೂರ್ಯನಿಗೆ ಮುಖ ಮಾಡಿ ಗ್ರಹಣ ಕಳೆಯುವವರೆಗೂ ಇಷ್ಟ ದೇವರ ಜಪ ಮಾಡಲಾಗುತ್ತದೆ. ಹೀಗೆ ಮಾಡುವ ಮೂಲಕ ದೇಹದ ನೆಗಟಿವ್ ಎನರ್ಜಿಯನ್ನು ಹೊರಹಾಕಿ ಮನಸ್ಸು ಶುಭ್ರತೆಯಡೆ ತಿರುಗುತ್ತದೆ ಎಂಬುದು ನಂಬಿಕೆ ಇದ್ದು, ಇಂದು ನೂರಾರು ಜನರು ಸಮುದ್ರ ಸ್ನಾನ ಮಾಡಿ ಗೋಕರ್ಣದ ಮಹಾಬಲೇಶ್ವರನ ಪೂಜೆ ಗೈದು ಗ್ರಹಣ ದೋಷ ಪರಿಹಾರಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

Gokarna Sea Bathing 2

TAGGED:GokarnakarwarMahabaleshwarNegative EnergyPublic TVSea BathingSolar Eclipse 2020ಕಾರವಾರಗೋಕರ್ಣನೆಗೆಟಿವ್ ಎನರ್ಜಿಪಬ್ಲಿಕ್ ಟಿವಿಮಹಾಬಲೇಶ್ವರಸಮುದ್ರ ಸ್ನಾನಸೂರ್ಯ ಗ್ರಹಣ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
4 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
23 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
23 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Lawrence Daniels
Latest

Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

Public TV
By Public TV
22 minutes ago
Lone Survivor Ramesh
Latest

ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ: ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

Public TV
By Public TV
24 minutes ago
shagan shubha ahmedabad plane crash
Latest

ಏರ್‌ ಇಂಡಿಯಾ ವಿಮಾನ ಪತನ – ದುರಂತದಲ್ಲಿ ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಮಕ್ಕಳು ಸಾವು

Public TV
By Public TV
39 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
52 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
1 hour ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?