ಮನೆ ಸೌಂದರ್ಯಕ್ಕೆ ಅಡ್ಡಿ- ಸರ್ಕಾರಿ ಬಸ್ ನಿಲ್ದಾಣ ಧ್ವಂಸ ಮಾಡಿದ ಗ್ರಾ.ಪಂ.ಅಧ್ಯಕ್ಷೆ

Public TV
1 Min Read
CKM 9

ಚಿಕ್ಕಮಗಳೂರು: ರಸ್ತೆ ಪಕ್ಕದಲ್ಲಿರುವ ಮನೆ ಕಾಣವುದಿಲ್ಲ. ಬಸ್ ನಿಲ್ದಾಣ ಮನೆಯ ಸೌಂದರ್ಯಕ್ಕೆ ಅಡ್ಡಿಯಾಗುತ್ತೆಂದು ಗ್ರಾಮೀಣ ಭಾಗದ ಸರ್ಕಾರಿ ಬಸ್ ನಿಲ್ದಾಣವನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.

ಎಸ್.ಬಿದರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ಈ ನಡೆದಿದೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ದ್ರಾಕ್ಷಾಯಣಮ್ಮ ಹಾಗೂ ಅವರ ಮಕ್ಕಳು ಸರ್ಕಾರಿ ಬಸ್ ನಿಲ್ದಾಣವನ್ನ ಧ್ವಂಸ ಮಾಡಿದ್ದಾರೆ. ಗ್ರಾಮ ಪಂಚಾಯತಿ ಅಧ್ಯಕ್ಷರ ಸ್ಥಾನವನ್ನ ದುರುಪಯೋಗಪಡಿಸಿಕೊಂಡು ಬಸ್ ನಿಲ್ದಾಣವನ್ನೇ ಧ್ವಂಸ ಮಾಡಿದ್ದಾರೆಂದು ಸ್ಥಳೀಯರು ಅಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

vlcsnap 2020 06 22 11h17m37s93

ನಮ್ಮ ಮನೆಗೆ ದಾರಿ ಇರಲಿಲ್ಲ. ಸಾಲದಕ್ಕೆ ರಸ್ತೆ ಪಕ್ಕದ ಮನೆಗೆ ಬಸ್ ನಿಲ್ದಾಣ ಅಡ್ಡವಾಗಿತ್ತು. ಇದರಿಂದ ಮನೆಯೂ ಕಾಣಿಸುತ್ತಿರಲಿಲ್ಲ. ಮನೆಯ ಸೌಂದರ್ಯವೂ ಕಾಣುತ್ತಿರಲಿಲ್ಲ ಎಂದು ಅಧ್ಯಕ್ಷೆ ದ್ರಾಕ್ಷಾಯಣಮ್ಮ ಹಾಗೂ ಅವರ ಮಕ್ಕಳಾದ ಪ್ರಭಾಕರ್, ಜಗದೀಶ್ ಜೆಸಿಬಿ ಮತ್ತು ಟ್ರ್ಯಾಕ್ಟರ್ ತಂದು ಬಸ್ ನಿಲ್ದಾಣವನ್ನ ನೆಲಮಗೊಳಿಸಿದ್ದಾರೆ.

ಇದೀಗ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿರುವ ಸಿದ್ದಾಪುರ ಜನ ಅಧ್ಯಕ್ಷರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅಲ್ಲದೇ ದ್ರಾಕ್ಷಾಯಣಮ್ಮ ಸದಸ್ಯತ್ವನ್ನ ರದ್ದು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಮತ್ತು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಜೊತೆಗೆ ಬಸ್ ನಿಲ್ದಾಣ ತೆರವುಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ವರಿಷ್ಠಾಧಿಕಾರಿಗೂ ದೂರು ನೀಡಿದ್ದಾರೆ.

vlcsnap 2020 06 22 11h16m55s185

Share This Article
Leave a Comment

Leave a Reply

Your email address will not be published. Required fields are marked *