Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆತನನ್ನ ತುಂಬಾ ಪ್ರೀತಿಸ್ತೇನೆ, ಅವನ ತಪ್ಪಿಗೆ ಶಿಕ್ಷೆ ಅನುಭವಿಸ್ತಾನೆ- ಪೈಲಟ್‍ನ ಟೆಕ್ಕಿ ಪತ್ನಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಆತನನ್ನ ತುಂಬಾ ಪ್ರೀತಿಸ್ತೇನೆ, ಅವನ ತಪ್ಪಿಗೆ ಶಿಕ್ಷೆ ಅನುಭವಿಸ್ತಾನೆ- ಪೈಲಟ್‍ನ ಟೆಕ್ಕಿ ಪತ್ನಿ ಆತ್ಮಹತ್ಯೆ

Crime

ಆತನನ್ನ ತುಂಬಾ ಪ್ರೀತಿಸ್ತೇನೆ, ಅವನ ತಪ್ಪಿಗೆ ಶಿಕ್ಷೆ ಅನುಭವಿಸ್ತಾನೆ- ಪೈಲಟ್‍ನ ಟೆಕ್ಕಿ ಪತ್ನಿ ಆತ್ಮಹತ್ಯೆ

Public TV
Last updated: June 27, 2020 2:08 pm
Public TV
Share
3 Min Read
LAVANYA
SHARE

– ಮದ್ವೆಯಾಗಿ 8 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಕಿರುಕುಳ
– ಅಪ್ಪ, ಅಮ್ಮಾ ದಯವಿಟ್ಟು ನನ್ನನ್ನ ಕ್ಷಮಿಸಿ

ಹೈದರಾಬಾದ್: ಪತಿಯ ಕಿರುಕುಳವನ್ನು ಸಹಿಸಲಾಗದೇ ಪೈಲಟ್ ಪತ್ನಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಲಾವಣ್ಯ (32) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಲಾವಣ್ಯ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೋಶಿಯಲ್ ಮೀಡಿದಲ್ಲಿ ಅನೇಕ ಪೋಸ್ಟ್‌ಗಳನ್ನು ಹಾಕುವ ಮೂಲಕ ತನಗೆ ಆಗುತ್ತಿರುವ ಕಿರುಕುಳವನ್ನು ವಿವರಿಸಿದ್ದಾರೆ. ಇದೀಗ ಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ.

Can lust and love coexist in relationship

ಏನಿದು ಪ್ರಕರಣ?
ಮೃತ ಲಾವಣ್ಯ ಎಂಎನ್‍ಸಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, 2012 ರಲ್ಲಿ ಎಂ.ವೆಂಕಟೇಶ್ ಜೊತೆ ಮದುವೆಯಾಗಿದ್ದರು. ಪತಿ ವೆಂಕಟೇಶ್ ಟ್ರೂಜೆಟ್ ಏರ್‌ಲೈನ್ಸ್‌ನ ಹಿರಿಯ ಪೈಲಟ್ ಆಗಿ ಕೆಲಸ ಮಾಡುತ್ತಿದ್ದನು. ಈ ದಂಪತಿ ಮದುವೆಯಾಗಿ ಎಂಟು ವರ್ಷಗಳಾಗಿದ್ದರೂ ಮಕ್ಕಳಾಗಿರಲಿಲ್ಲ. ಇದರಿಂದ ಪತಿ ಮತ್ತು ಮನೆಯವರು ಲಾವಣ್ಯಗೆ ಕಿರುಕುಳ ನೀಡುತ್ತಿದ್ದರು. ಇದನ್ನು ಸಹಿಸಿಕೊಳ್ಳಲಾಗದೆ ಲಾವಣ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

marriage

ತೆಲಂಗಾಣದ ಶಂಶಾಬಾದ್‍ನಲ್ಲಿರುವ ಅವರ ನಿವಾಸದಲ್ಲಿ ಲಾವಣ್ಯ ಶವವಾಗಿ ಪತ್ತೆಯಾಗಿದ್ದರು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದಾರೆ. “ಹಲವಾರು ತಿಂಗಳುಗಳಿಂದ ನನ್ನ ಪತಿ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ನೀಡುತ್ತಿದ್ದು, ಅದನ್ನು ಸಹಿಸಿಕೊಂಡಿದ್ದೇನೆ. ಯಾಕೆಂದರೆ ನಾನು ಅವನನ್ನು ತುಂಬಾ ಪ್ರೀತಿಸುತ್ತಿದ್ದೆ. ಆದರೆ ಅವನು ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದನು. ಈ ಬಗ್ಗೆ ನನಗೂ ತಿಳಿಸಿದ್ದನು. ಆದರೆ ನಾನು ಅವನ ಅನೈತಿಕ ಸಂಬಂಧವನ್ನು ಒಪ್ಪಿಕೊಳ್ಳುವುದಿಲ್ಲ. ಹೀಗಾಗಿ ನಾನು ಅವನನ್ನು ಯಾಕೆ ಪ್ರೀತಿಸಬೇಕು ಮತ್ತು ನಾನು ಯಾಕೆ ಬದುಕಬೇಕು?” ಎಂದು ನೋವಿನಿಂದ ಪ್ರಶ್ನೆ ಮಾಡಿದ್ದಾರೆ.

BABY

ನನ್ನ ತಪ್ಪುಗಳಿಂದ ನಾನು ಕೆಲವು ವಿಷಯಗಳನ್ನು ಅರಿತುಕೊಂಡಿದ್ದೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ಆದರೆ ನನಗೆ ಮೋಸ ಮಾಡುತ್ತಿದ್ದಾನೆ. ಆತ ಬೇರೆ ಬೇರೆ ಮಹಿಳೆಯರೊಂದಿಗೆ ಸಂಬಂಧ ಇಟ್ಟುಕೊಂಡಿದ್ದಾನೆ. ನನಗೆ ಸುಳ್ಳು ಹೇಳಿ ಮಹಿಳೆಯೊಂದಿಗೆ ಹೋಟೆಲ್‍ಗೆ ಹೋಗುತ್ತಾನೆ. ನಾನು ಎಷ್ಟೇ ಹೇಳಿದರೂ ಆತ ತನ್ನ ತಪ್ಪನ್ನು ಸರಿಪಡಿಸಿಕೊಂಡಿಲ್ಲ. ಇಂತಹವನ ಜೊತೆ ಬದುಕಲು ಸಾಧ್ಯವಿಲ್ಲದೆ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅಪ್ಪ, ಅಮ್ಮಾ ನನ್ನನ್ನು ಕ್ಷಮಿಸಿ. ನೀವು ನನಗೆ ತುಂಬಾ ಪ್ರೀತಿ ಕೊಟ್ಟಿದ್ದೀರಿ. ತುಂಬಾ ಚೆನ್ನಾಗಿ ನೋಡಿಕೊಂಡಿದ್ದೀರಿ. ಆದರೆ ಈತ ಮಾಡುವುದೆಲ್ಲವನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆತ ಮಾಡಿದ ತಪ್ಪಿಗೆ ಅವನೇ ಶಿಕ್ಷೆ ಅನುಭವಿಸುತ್ತಾನೆ ಎಂದು ಕೊನೆಯ ವಿಡಿಯೋದಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

3 4

ನಮ್ಮ ಅಳಿಯ ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ. ಮದುವೆಯಾಗಿ 8 ವರ್ಷಗಳಾದರೂ ಮಕ್ಕಳಾಗಿಲ್ಲ. ಇದರಿಂದ ಕೋಪಗೊಂಡು ನನ್ನ ಮಗಳನ್ನು ದೂಷಿಸುತ್ತಿದ್ದನು. ಕೆಲವು ವರ್ಷಗಳಿಗೆ ಮಗಳಿಗೆ ದೈಹಿಕವಾಗಿ ಕಿರುಕುಳ ನೀಡುತ್ತಿದ್ದನು. ಆದರೆ ನನ್ನ ಮಗಳು ಇತ್ತೀಚೆಗೆ ನಮಗೆ ತಿಳಿಸಿದ್ದನು. ಹೀಗಾಗಿ ಅವಳು ಆತ್ಮಹತ್ಯೆ ಮಾಡಿಕೊಂಡಳು ಎಂದರೆ ನಾನು ನಂಬುವುದಿಲ್ಲ. ನನ್ನ ಮಗಳನ್ನು ವೆಂಕಟೇಶ್ ಕೊಂದು ಆತ್ಮಹತ್ಯೆಯಂತೆ ಬಿಂಬಿಸಲು ನೇಣು ಹಾಕಿದ್ದಾನೆ ಎಂದು ಲಾವಣ್ಯ ತಂದೆ ಆರೋಪಿಸಿದ್ದಾರೆ.

ಅಲ್ಲದೇ ವೆಂಕಟೇಶ್ ತಮ್ಮ ಮಗಳ ಮೇಲೆ ಹಲ್ಲೆ ಮಾಡಿರುವ ವಿಡಿಯೋವನ್ನು ಪೊಲೀಸರಿಗೆ ನೀಡಿದ್ದಾರೆ. ವಿಡಿಯೋದಲ್ಲಿ ಆರೋಪಿ ವೆಂಕಟೇಶ್ ಪತ್ನಿಗೆ ಅಮಾನವೀಯವಾಗಿ ಹೊಡೆದಿದ್ದಾನೆ. ಇದೇ ವೇಳೆ ಸಾಕಿದ್ದ ನಾಯಿ ಹೊಡೆಯುತ್ತಿರುವುದನ್ನು ಬಿಡಿಸಲು ಪ್ರಯತ್ನ ಮಾಡಿದೆ.

Police I

ವೆಂಕಟೇಶ್ ಹೈದರಾಬಾದ್ ಮತ್ತು ಚೆನ್ನೈನ ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾನೆಂದು ತನಿಖೆಯಿಂದ ತಿಳಿದುಬಂದಿದೆ. ಈ ದಂಪತಿ 2012ರಲ್ಲಿ ವಿವಾಹವಾಗಿದ್ದರು. ಮದುವೆ ನಂತರ ವೆಂಕಟೇಶ್ ತನ್ನ ಕೆಲಸ ಕಳೆದುಕೊಂಡಿದ್ದನು. ಆಗ ಮೃತ ಲಾವಣ್ಯ ಕೆಲಸಕ್ಕೆ ಹೋಗಿ ಆತನ ಕುಟುಂಬದವರನ್ನು ಪೋಷಣೆ ಮಾಡಿದ್ದರು. ಬಳಿಕ ವೆಂಕಟೇಶ್ ಪೈಲಟ್ ಆಗಿ ಕೆಲಸ ಮಾಡಿದ್ದು, ತಿಂಗಳಿಗೆ ಸುಮಾರು 7 ಲಕ್ಷ ಸಂಪಾದಿಸುತ್ತಿದ್ದನು. ಆದರೆ ಮಕ್ಕಳಾಗಿಲ್ಲ ಎಂದು ಅಸಮಾಧಾನಗೊಂಡು ಪತ್ನಿಯನ್ನು ದೈಹಿಕವಾಗಿ ಹಿಂಸುತ್ತಿದ್ದನು. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ತಿಳಿಸಿದ್ದಾರೆ.

Domestic violence 1200

TAGGED:childrenHyderabadmarriagepilotpolicePublic TVtechievideoಟೆಕ್ಕಿಪಬ್ಲಿಕ್ ಟಿವಿಪೈಲಟ್ಪೊಲೀಸ್ಮಕ್ಕಳುಮದುವೆವಿಡಿಯೋಹೈದರಾಬಾದ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
23 seconds ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
3 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
15 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
47 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
57 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?