Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಧಾನ ಪರಿಷತ್ ಚುನಾವಣೆ- ಜೆಡಿಯು ಅಭ್ಯರ್ಥಿಯಾಗಿ ಚಂದ್ರಶೇಖರ್ ಸ್ಥಾವರಮಠ ಕಣಕ್ಕೆ

Public TV
Last updated: July 2, 2020 6:51 pm
Public TV
Share
2 Min Read
mahima patel
SHARE

– ಮಹಿಮಾ ಪಟೇಲ್ ಘೋಷಣೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಜೆಡಿಯು ಪಕ್ಷದಿಂದ ಚಂದ್ರಶೇಖರ್ ವಿ. ಸ್ಥಾವರಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಅವರು ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಮಟ್ಟದಿಂದ ನಮ್ಮ ಹೋರಾಟ ನಡೆದಿದೆ. ಗ್ರಾಮ ಸ್ವರಾಜ್ಯ ನಮ್ಮ ಕಲ್ಪನೆ. ಗ್ರಾಮಗಳ ಉದ್ಧಾರವೇ ನಮ್ಮ ಪಕ್ಷ ಧ್ಯೇಯವಾಗಿದೆ. ಜೆಡಿಯು ಹಿಂದಿನಿಂದಲೂ ಶಿಕ್ಷಕರ ಪರ ಹೋರಾಟ ಮಾಡುತ್ತಿದೆ. ಪರಿಷತ್ ನಲ್ಲಿ ನಮ್ಮ ಹೋರಾಟ ಮುಂದುವರೆಯಲಿದ್ದು, ಚಂದ್ರಶೇಖರ್ ಸ್ಥಾವರಮಠ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ನೇಮಕ ಮಾಡಲಾಗಿದೆ ಎಂದರು.

JD U symbol

ಕೋವಿಡ್-19 ಮಹಾಮಾರಿ ಕಾರಣಕ್ಕೆ ಪರಿಷತ್ ಚುನಾವಣೆ ಮುಂದೂಡುವ ಸಾಧ್ಯತೆ ಇದೆ. ಆದರೆ ನಾವು ಪಕ್ಷದ ವತಿಯಿಂದ ಚಂದ್ರಶೇಖರ್ ಸ್ಥಾವರಮಠ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಸಂಪರ್ಕ ಮಾಡುವ ಕೆಲಸ ಮಾಡುತ್ತೇವೆ. ಅಲ್ಲದೆ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸೂಕ್ತ ಅಭ್ಯರ್ಥಿಯ ಹುಡುಕಾಟ ನಡೆಸುತ್ತೇವೆ ಎಂದರು.

ಚಂದ್ರಶೇಖರ್ ಸ್ಥಾವರಮಠ ಸ್ವತಃ ಶಿಕ್ಷಕರಾಗಿರುವ ಕಾರಣ ಶಿಕ್ಷಕರ ಪರ ಹೋರಾಟ ನಡೆಸಲಿದ್ದಾರೆ. ಸಾಮಾಜಿಕ ಕಳಕಳಿ ಇರುವ ಚಂದ್ರಶೇಖರ್, ಶಿಕ್ಷಕರ ಹಕ್ಕುಗಳಿಗಾಗಿ ಹೋರಾಟ ಮಾಡಲಿದ್ದಾರೆ ಎಂದರು.

ಪಕ್ಷ ಸಂಘಟನೆ ಎಂದರೆ ಪ್ರತಿಭಟನೆ, ಹೋರಾಟ ಮಾತ್ರವಲ್ಲ. ಅದಕ್ಕೆ ಮೂಲ ಉದ್ದೇಶ ಇರಬೇಕು. ಗ್ರಾಮ ಸ್ವರಾಜ್ಯದ ಕಲ್ಪನೆಯೊಂದಿಗೆ ಜೆಡಿಯು ಸಂಘಟನೆಯನ್ನು ಗ್ರಾಮೀಣ ಮಟ್ಟದಲ್ಲಿ ಮಾಡುತ್ತಿದ್ದೇವೆ. ಗ್ರಾಮೀಣ ಪ್ರದೇಶದವರ ಸ್ಥಿತಿ ಸುಧಾರಿಸಿದರೆ ದೇಶದ ಸ್ಥಿತಿ ಸುಧಾರಣೆ ಆಗುತ್ತದೆ. ಇತ್ತೀಚಿನ ಸರ್ಕಾರಗಳು ಗ್ರಾಮೀಣ ಪ್ರದೇಶದವರನ್ನು ಬಿಕಾರಿಗಳನ್ನಾಗಿ ಮಾಡಿವೆ. ರೈತರನ್ನು, ಹಳ್ಳಿಯವರಿಗೆ ಒಂದಷ್ಟು ಹಣ, ಕೊಡುಗೆ ಕೊಟ್ಟು ಅವರ ಸ್ವಾಭಿಮಾನಕ್ಕೆ ಧಕ್ಕೆ ತರುತ್ತಿವೆ. ಹೀಗಾಗಿ ಈ ಮಾರ್ಗ ಬಿಟ್ಟು ಗ್ರಾಮಗಳನ್ನು ಸಶಕ್ತೀಕರಣ ಮಾಡಲು ಗ್ರಾಮಸ್ವರಾಜ್ ಕಲ್ಪನೆಯೊಂದಿಗೆ, ಪಂಚಾಯತ್ ರಾಜ್ ವ್ಯವಸ್ಥೆ ಭದ್ರಪಡಿಸಲು ಗ್ರಾಮೀಣ ಪ್ರದೇಶಗಳಿಗೆ ಹೋಗುತ್ತಿದ್ದೇವೆ ಎಂದರು.

vlcsnap 2020 07 02 18h49m57s197

ಜೆಡಿಯು ಅಭ್ಯರ್ಥಿ ಚಂದ್ರಶೇಖರ್ ಸ್ಥಾವರಮಠ ಮಾತನಾಡಿ, ಈ ಹಿಂದೆ ಶಿಕ್ಷಕರನ್ನು ಸೃಷ್ಟಿಕರ್ತ ಬ್ರಹ್ಮನಿಗೆ ಹೋಲಿಸುತ್ತಿದ್ದೆವು. ಉತ್ತಮ ರಾಷ್ಟ್ರವನ್ನು, ಸಮಾಜವನ್ನು ಕಟ್ಟುವ ಶಕ್ತಿ ಹೊಂದಿದ್ದ ಶಿಕ್ಷಕರನ್ನು 70ರ ದಶಕದ ನಂತರ ಅಧಿಕಾರಕ್ಕೆ ಬಂದ ಸರ್ಕಾರರಗಳು ಶಿಕ್ಷಕರನ್ನು ಕಡೆಗಣನೆ ಮಾಡುತ್ತಾ ಬಂದಿವೆ. ಇದೀಗ ಕೋವಿಡ್-19 ನಿಂದ ರಾಜ್ಯಾದ್ಯಂತ 35 ಸಾವಿರ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹಲವು ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿವೆ. ಈ ನಿಟ್ಟಿನಲ್ಲಿ ಜೆಡಿಯುನಿಂದ ಜ್ಯೋತಿ ಯಾತ್ರೆ ಆರಂಭಿಸುತ್ತಿದ್ದೇವೆ. ಪಕ್ಷದ ಕಚೇರಿಯಿಂದ ಜ್ಯೋತಿ ಯಾತ್ರೆ ಆರಂಭಿಸಿ ಮುಖ್ಯಮಂತ್ರಿಗಳ ಕಚೇರಿವರೆಗೆ ತೆರಳಿ ಮನವಿ ನೀಡುವ ಮೂಲಕ ಜನಾಭಿಯಾನ ಆರಂಭಿಸುತ್ತಿದ್ದೇವೆ ಎಂದರು.

TAGGED:electionsjduMahima PatelPublic TVState Legislative Councilಚುನಾವಣೆಜೆಡಿಯುಪಬ್ಲಿಕ್ ಟಿವಿಮಹಿಮಾ ಪಟೇಲ್ವಿಧಾನ ಪರಿಷತ್
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
10 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
16 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
33 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
38 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
41 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?