Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜನಸಂಖ್ಯೆಗೆ ಹೋಲಿಸಿದ್ರೆ ಭಾರತದಲ್ಲಿ ಅತೀ ಕಡಿಮೆ ಕೊರೊನಾ ಪ್ರಕರಣ: WHO ವರದಿ

Public TV
Last updated: July 8, 2020 10:26 am
Public TV
Share
2 Min Read
corona who
SHARE

ನವದೆಹಲಿ: ಪ್ರತಿ ಹತ್ತು ಲಕ್ಷ ಜನರಲ್ಲಿ 505.37 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಭಾರತ ಅತೀ ಕಡಿಮೆ ಕೊರೊನಾ ಪ್ರಕರಣ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ಸ್ಥಿತಿಗತಿ ಕುರಿತು ಜುಲೈ 6ರಂದು ವರದಿ ಬಿಡುಗಡೆ ಮಾಡಿದ್ದು, ಪ್ರತಿ 10 ಲಕ್ಷ ಜನರಲ್ಲಿ ಎಷ್ಟು ಮಂದಿಗೆ ಸೋಂಕು ತಗುಲಿದೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬ ಅಂಕಿ ಅಂಶವನ್ನು ತಿಳಿಸಿದೆ. ವರದಿ ಪ್ರಕಾರ ಭಾರತ ಪ್ರತಿ 10 ಲಕ್ಷ ಜನರಲ್ಲಿ ಅತೀ ಕಡಿಮೆ ಪ್ರಕರಣ ಹೊಂದಿದ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

Coronavirus in India

ಭಾರತದಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ಸರಾಸರಿ 505.37 ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ವಿಶ್ವದಲ್ಲಿ ಪ್ರತಿ 10 ಲಕ್ಷ ಜನರಲ್ಲಿ ಸರಾಸರಿ 1453.25 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ದಕ್ಷಿಣ ಅಮೆರಿಕದ ಚೈಲ್‍ನಲ್ಲಿ ಪ್ರತಿ ಮಿಲಿಯನ್ ಜನರ ಪೈಕಿ 15,459.8 ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ ಪ್ರತಿ ಮಿಲಿಯನ್ ಜನರ ಪೈಕಿ ಪೆರು 9070.8, ಅಮೆರಿಕ 8560.5, ಬ್ರೆಜಿಲ್ 7419.1, ಹಾಗೂ ಸ್ಪೇನ್ 5358.7 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

ಭಾರತದಲ್ಲಿ ಪ್ರತಿ ಹತ್ತು ಲಕ್ಷ ಜನರ ಪೈಕಿ ಸೋಂಕು ತಗುಲಿದ ಪ್ರಕರಣಗಳು ಕಡಿಮೆಯಾಗಿದ್ದು, ಅದೇ ರೀತಿ ಸಾವಿನ ಪ್ರಮಾಣ ಸಹ ತೀರಾ ಕಡಿಮೆ ಇದೆ ಎಂದು ಡಬ್ಲ್ಯುಎಚ್‍ಒ ತನ್ನ ವರದಿಯಲ್ಲಿ ತಿಳಿಸಿದೆ. ಭಾರತದಲ್ಲಿ ಪ್ರತಿ ಹತ್ತು ಲಕ್ಷ ಜನರ ಪೈಕಿ ಕೊರೊನಾದಿಂದಾಗಿ 14.27 ಜನ ಸಾವನ್ನಪ್ಪುತ್ತಿದ್ದಾರೆ. ವಿಶ್ವ ಮಟ್ಟದಲ್ಲಿ ಇದರ ನಾಲ್ಕು ಪಟ್ಟು ಜನ ಸಾವನ್ನಪ್ಪುತ್ತಿದ್ದು, ಪ್ರತಿ ಮಿಲಿಯನ್‍ಗೆ 68.29ರಷ್ಟು ಜನ ಸಾವನ್ನಪ್ಪುತ್ತಿದ್ದಾರೆ.

america corona

ಕೊರೊನಾ ವಿರುದ್ಧದ ಸಮರದಲ್ಲಿ ಭಾರತ ಪ್ರಕರಣಗಳನ್ನು ಅಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಹೆಚ್ಚಿಸಿದೆ. ಕೊರೊನಾ ವಿರುದ್ಧ ಹೋರಾಡಲು ಪೂರ್ವ ಸಿದ್ಧತೆಯ ಭಾಗವಾಗಿ ಆಮ್ಲಜನಕ, ಐಸಿಯು ಹಾಗೂ ವೆಂಟಿಲೇಟರ್ ಸೌಲಭ್ಯಗಳನ್ನು ಹೆಚ್ಚಿಸಿದೆ.

ಜುಲೈ 7ರ ಅಂಕಿ ಅಂಶದ ಪ್ರಕಾರ ದೇಶದಲ್ಲಿ 1,201 ಆಸ್ಪತ್ರೆಗಳನ್ನು ಕೊರೊನಾಗಾಗಿ ಮೀಸಲಿರಿಸಲಾಗಿದೆ. 2,611 ಕೊರೊನಾ ಹೆಲ್ತ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ. ಅತೀ ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಸೋಂಕಿತರಿಗಾಗಿ 9,909 ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಕಳೆದ 24 ಗಂಟೆಗಳಲ್ಲಿ 15,515 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವರಗೆ ದೇಶದಲ್ಲಿ 4.40 ಲಕ್ಷ ಜನ ಗುಣಮುಖರಾಗಿದ್ದಾರೆ.

Corona 12

ಈ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕೊರೊನಾವೈರಸ್ ತಡೆಗಟ್ಟುವಿಕೆ, ನಿಯಂತ್ರಣ ಹಾಗೂ ನಿರ್ವಹಣೆಗಾಗಿ ರಾಷ್ಟ್ರೀಯ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ. ಸಕ್ರಿಯ ಪ್ರಕರಣಗಳು ಹಾಗೂ ಗುಣಮುಖವಾಗುತ್ತಿರುವ ಪ್ರಕರಣಗಳಲ್ಲಿ ಅಂತರ ಕಾಯ್ದುಕೊಳ್ಳುವ ಮೂಲಕ ಉತ್ತಮ ಫಲಿತಾಂಶ ಲಭ್ಯವಾಗುತ್ತಿದೆ. ಜುಲೈ 7ರಂದು 1,80,390 ಜನ ಗುಣಮುಖರಾಗಿದ್ದು, ಇದು ಸಕ್ರಿಯ ಪ್ರಕರಣಗಳಿಗಿಂತ ಹೆಚ್ಚಿದೆ. ಅಲ್ಲದೆ ಇಂದು ಗುಣಮುಖರಾಗಿರುವ ಪ್ರಮಾಣ ಶೇ.61.13ರಷ್ಟಿದೆ ಎಂದು ತಿಳಿಸಿದೆ.

corona 4

ಪ್ರಸ್ತುತ ಭಾರತದಲ್ಲಿ 2,59,557 ಅಕ್ರಿಯ ಪ್ರಕರಣಗಳಿದ್ದು, ಎಲ್ಲರೂ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,41,430 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈ ವರೆಗೆ ದೇಶದಲ್ಲಿ 1.02 ಕೋಟಿ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

TAGGED:Corona VirusindiaPublic TVwhoಕೊರೊನಾ ವೈರಸ್ಡಬ್ಲ್ಯುಎಚ್‍ಒಪಬ್ಲಿಕ್ ಟಿವಿಭಾರತ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest

You Might Also Like

Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
44 minutes ago
auto driver organ donation
Latest

ಎಂಟು ಜನರಿಗೆ ಅಂಗಾಂಗ ದಾನ ಮಾಡಿ ಉಸಿರು ಬಿಟ್ಟ ಸಿದ್ದಾಪುರದ ಆಟೋ ಚಾಲಕ

Public TV
By Public TV
45 minutes ago
M.P Renukacharya
Davanagere

ರಾಹುಲ್ ಗಾಂಧಿಯ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ

Public TV
By Public TV
46 minutes ago
Rahul Gandhi
Bengaluru City

ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

Public TV
By Public TV
1 hour ago
Dasara Gajapade
Districts

ಅರಣ್ಯ ಭವನದಲ್ಲಿ ದಸರಾ ಗಜಪಡೆಗೆ ಪೂಜೆ – ಅರಮನೆಗೆ ಎಂಟ್ರಿ ಕೊಟ್ಟ ಅಭಿಮನ್ಯು ಟೀಂ

Public TV
By Public TV
1 hour ago
Vidhya Mandira 5 1
Bengaluru City

ಪಬ್ಲಿಕ್ ಟಿವಿ `ವಿದ್ಯಾಮಂದಿರ’ಕ್ಕೆ ಭರ್ಜರಿ ರೆಸ್ಪಾನ್ಸ್ – 4ನೇ ಆವೃತ್ತಿಯ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?