Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲ ಬದಲಾವಣೆಗಳೊಂದಿಗೆ ಅಂಗಳಕ್ಕೆ ಇಳಿಯಲಿದ್ದಾರೆ ಆಟಗಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೆಲ ಬದಲಾವಣೆಗಳೊಂದಿಗೆ ಅಂಗಳಕ್ಕೆ ಇಳಿಯಲಿದ್ದಾರೆ ಆಟಗಾರರು

Corona

ಕೆಲ ಬದಲಾವಣೆಗಳೊಂದಿಗೆ ಅಂಗಳಕ್ಕೆ ಇಳಿಯಲಿದ್ದಾರೆ ಆಟಗಾರರು

Public TV
Last updated: July 8, 2020 5:16 pm
Public TV
Share
2 Min Read
icc
SHARE

ನವದೆಹಲಿ: ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಟಿವಿ ಪರದೆಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನೋಡುವ ಅವಕಾಶ ಲಭಿಸಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಟೂರ್ನಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಟದ ನಿಯಮಗಳಲ್ಲಿ ಕೆಲ ಮಧ್ಯಂತರ ಬದಲಾವಣೆಗಳನ್ನು ಮಾಡಿ ಮಾಹಿತಿ ನೀಡಿದೆ.

ಪಂದ್ಯದ ವೇಳೆ ಚೆಂಡು ಹೊಳೆಯುವಂತೆ ಮಾಡಲು ಲಾಲಾರಸ(ಎಂಜಲು) ಹಾಕುವುದನ್ನು ನಿಷೇಧಿಸಿದೆ. ಅಲ್ಲದೇ ಅಂತಾರಾಷ್ಟ್ರೀಯ ಟೂರ್ನಿಗಳ ಪಂದ್ಯಗಳಲ್ಲಿ ಹೋಂ ಅಂಪೈರ್ ಗಳಿಗೆ ಅವಕಾಶ ಕಲ್ಪಿಸಿದೆ.

Anil Kumble

ಅನಿಲ್ ಕುಂಬ್ಳೆ ನೇತೃತ್ವದ ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಸಮಿತಿಯ ಶಿಫಾರಸುಗಳನ್ನು ಮಂಡಳಿ ಅಂಗೀಕರಿಸಿದೆ. ಕೋವಿಡ್-19 ನಿಂದ ಉಂಟಾಗುತ್ತಿರುವ ಅಪಾಯವನ್ನು ತಗ್ಗಿಸಲು ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಚುಟುವಟಿಕೆಗಳನ್ನು ಪುನರ್ ಆರಂಭಿಸಲು ಸೇರಿದಂತೆ ಆಟಗಾರರು ಮತ್ತು ಅಧಿಕಾರಿಗಳ ಸುರಕ್ಷತೆಯ ಉದ್ದೇಶದಿಂದ ಶಿಫಾರಸುಗಳನ್ನು ಜಾರಿಗೊಳಿಸಿದೆ.

ಕೋವಿಡ್-19 ರಿಪ್ಲೇಸ್‍ಮೆಂಟ್: ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಕೋವಿಡ್-19 ಲಕ್ಷಣ ಹೊಂದಿರುವ ಆಟಗಾರರ ಬದಲಿಸಲು ತಂಡಗಳಿಗೆ ಅವಕಾಶ ನೀಡಲಾಗಿದೆ. ಪಂದ್ಯದ ರೆಫರಿ ಬದಲಿ ಆಟಗಾರರನ್ನು ತಂಡಗಳು ಪಡೆಯಲು ಅನುಮತಿ ನೀಡುತ್ತಾರೆ. ಆದರೆ ಈ ಕೋವಿಡ್-19 ಬದಲಿ ನಿಯಮ ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಅನ್ವಯವಾಗುವುದಿಲ್ಲ.

icc

ಎಂಜಲು ಬಳಕೆ ನಿಷೇಧ: ಬೌಲರ್ ಗಳು ಚೆಂಡಿನ ಒಳಪು ಹೆಚ್ಚಿಸಲು ಲಾಲಾರಸ (ಎಂಜಲು) ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ ಆಟಗಾರ ಚೆಂಡಿನ ಹೊಳಪು ಹೆಚ್ಚಿಸಲು ಲಾಲಾರಸ ಬಳಸಿದರೆ ಅಂಪೈರ್ ಸಂದರ್ಭವನ್ನು ನಿಭಾಯಿಸುತ್ತಾರೆ. ಆದರೆ ಈ ವರ್ತನೆ ಪುನರವರ್ತನೆಯಾದರೆ ಅಂಪೈರ್ ತಂಡಕ್ಕೆ ಎಚ್ಚರಿಕೆ ನೀಡುತ್ತಾರೆ.

ಪಂದ್ಯದ ಸಂದರ್ಭದಲ್ಲಿ ಅಂಪೈರ್ ಗಳು ಎರಡು ಬಾರಿ ಎಚ್ಚರಿಕೆ ನೀಡುತ್ತಾರೆ. ಆ ಬಳಿಕವೂ ನಿಯಮ ಉಲ್ಲಂಘಿಸಿದರೆ ತಂಡಕ್ಕೆ 5 ರನ್ ದಂಡ ವಿಧಿಸಬಹುದಾಗಿದೆ. ಪ್ರತಿ ಬಾರಿ ಆಟಗಾರ ಎಂಜಲು ಬಳಸಿದ ಸಂದರ್ಭದಲ್ಲಿ ಆಟ ಆರಂಭವಾಗುವ ಮುನ್ನ ಅಂಪೈರ್ ಚೆಂಡಿನ ಸ್ವಚ್ಛತೆಗೆ ಸೂಚಿಸಬೇಕಾಗುತ್ತದೆ.

CRICKET GROUND ENGLAND

ತಟಸ್ಥರಲ್ಲದ ಅಂಪೈರ್: ಸದ್ಯದ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ಸವಾಲು ಎದುರಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಗಳಿಂದ ಅಂತಾರಾಷ್ಟ್ರೀಯ ತಟಸ್ಥ ಅಂಪೈರ್ (ಅತಿಥೇಯ ದೇಶದ) ನೇಮಿಸುವ ನಿಯಮಗಳನ್ನು ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದೆ. ಐಸಿಸಿ ಸ್ಥಳೀಯ ಪಂದ್ಯದ ಅಧಿಕಾರಿಗಳನ್ನು ನೇಮಿಸಲಿದೆ. ಎಮಿರೇಟ್ಸ್ ಐಸಿಸಿ ಎಲೈಟ್ ಮತ್ತು ಎಮಿರೇಟ್ಸ್ ಐಸಿಸಿ ಇಂಟರ್ ನ್ಯಾಷನಲ್ ಪ್ಯಾನಲ್ ಆಫ್ ಮ್ಯಾಚ್ ಆಫೀಸಿಯಲ್ಸ್ ಆಧಾರ ಮೇಲೆ ಅಂಪೈರ್‍ಗಳನ್ನು ನೇಮಕ ಮಾಡಲಾಗುತ್ತದೆ.

ಹೆಚ್ಚುವರಿ ಡಿಆರ್‌ಎಸ್ ಮನವಿ: ಪಂದ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಪೈರ್ ಗಳ ಅನುಭವದ ಆಧಾರದ ಮೇಲೆ ತಂಡಗಳಿಗೆ ಹೆಚ್ಚಿನ ಡಿಆರ್‌ಎಸ್ (ಅಂಪೈರ್‌ ತೀರ್ಪು ಮರುಪರಿಶೀಲನಾ ವ್ಯವಸ್ಥೆ) ಮನವಿಗಳಿಗೆ ಅವಕಾಶ ನೀಡಲಾಗುತ್ತದೆ. ಟೆಸ್ಟ್ ಪಂದ್ಯಗಳಲ್ಲಿ ಪ್ರತಿ ತಂಡಕ್ಕೆ ಮೂರು ಮತ್ತು ಸೀಮಿತ ಓವರ್ ಗಳ ಮಾದರಿಯಲ್ಲಿ ಪ್ರತಿ ತಂಡಕ್ಕೆ ಹೆಚ್ಚುವರಿಯಾಗಿ 2 ಅವಕಾಶಗಳನ್ನು ನೀಡಬಹುದಾಗಿದೆ.

cricket death

ಹೆಚ್ಚುವರಿ ಲೋಗೋ: ಮುಂದಿನ 12 ತಿಂಗಳ ಕಾಲ ಹೆಚ್ಚುವರಿ ಲೋಗೋ ಬಳಕೆಗೂ ಅವಕಾಶ ನೀಡಲಾಗಿದೆ. ಲೋಗೋ 32 ಚದರ ಇಂಚುಗಳನ್ನು ಮೀರುವಂತಿಲ್ಲ ಎಂಬ ನಿಯಮವಿದ್ದು, ಲೋಗೋವನ್ನು ಟೆಸ್ಟ್ ಪಂದ್ಯದ ಶರ್ಟ್, ಸ್ವೆಟರ್ ನ ಎದೆಯ ಮೇಲೆ ಇತರ ಮೂರು ಲೋಗೋಗಳ ಜೊತೆಗೆ ಇರಿಸಲು ಅವಕಾಶ ನೀಡಲಾಗಿದೆ. ಸದ್ಯದವರೆಗೂ ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಮಾತ್ರ ಬಳಸಲು ಅನುಮತಿ ನೀಡಲಾಗಿದೆ.

TAGGED:anil kumbleCoronaCricket RuleICCPublic TVtest cricketಅನಿಲ್ ಕುಂಬ್ಳೆಐಸಿಸಿಕೊರೊನಾಕ್ರಿಕೆಟ್ ನಿಯಮಟೆಸ್ಟ್ ಕ್ರಿಕೆಟ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
10 minutes ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
35 minutes ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
42 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
2 hours ago
DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
2 hours ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?