Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಜೆಸಿಬಿ ಚಾಲಕನ ಮೇಲೆ ಹಲ್ಲೆ – ಪೊಲೀಸರಿಂದ ಮಾಜಿ ಶಾಸಕ ಬಂಡಿಸಿದ್ದೇಗೌಡ ಅರೆಸ್ಟ್

Public TV
Last updated: July 9, 2020 10:38 pm
Public TV
Share
3 Min Read
mnd ex mla
SHARE

– ರಸ್ತೆ ಅಗಲೀಕರಣಕ್ಕಾಗಿ ತೆರವು ಕಾರ್ಯಾಚರಣೆ ವೇಳೆ ಹಲ್ಲೆ
– ನ್ಯಾಯಾಲಯದಿಂದ ಜಾಮೀನು ಮಂಜೂರು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಕೊರೊನಾ ನಡುವೆಯೂ ಹಾಲಿ, ಮಾಜಿ ಶಾಸಕರ ಪ್ರತಿಷ್ಠೆ ರಾಜಕೀಯ ಜೋರಾಗಿದೆ. ಉಭಯ ಮುಖಂಡರ ಬೆಂಬಲಿಗರು ಮಹಾಮಾರಿಯ ಆತಂಕವಿಲ್ಲದೇ ಗುಂಪು ಗಲಾಟೆ ಮಾಡಿಕೊಳ್ಳುತ್ತಾ ರಂಪಾಟ ಮಾಡುತ್ತಿದ್ದಾರೆ. ಇಂದು ರಸ್ತೆ ಅಗಲೀಕರಣಕ್ಕಾಗಿ ತೆರವು ಕಾರ್ಯಾಚರಣೆ ಮಾಡುತ್ತಿದ್ದ ಜೆಸಿಬಿ ಚಾಲಕನಿಗೆ ಮಾಜಿ ಶಾಸಕ ಹಲ್ಲೆ ಮಾಡಿ ದರ್ಪ ಮೆರೆದಿದ್ದಾರೆ.

ಕೊರೊನಾದಿಂದ ಇಡೀ ದೇಶವೇ ತತ್ತರಿಸುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲೂ ಮಹಾಮಾರಿ ರುದ್ರನರ್ತನ ಕಡಿಮೆಯಾಗುತ್ತಿಲ್ಲ. ಹೀಗಿದ್ದರೂ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಪ್ರತಿಷ್ಠೆಯ ರಾಜಕೀಯ ಜೋರಾಗಿದೆ. ಅಲ್ಲದೇ ಉಭಯ ಮುಖಂಡರ ಬೆಂಬಲಿಗರು ಕೊರೊನಾ ಆತಂಕವಿಲ್ಲದೇ ಗುಂಪು ಗುಂಪಾಗಿ ಜಗಳವಾಡಿಕೊಂಡು ರಂಪಾಟ ಮಾಡಿಕೊಳ್ಳಿತ್ತಿದ್ದಾರೆ. ಮೊನ್ನೆಯಷ್ಟೇ ಶ್ರೀರಂಗಪಟ್ಟಣ ಪಿಎಲ್‍ಡಿ ಬ್ಯಾಂಕ್ ಆವರಣದಲ್ಲಿ ಮಳಿಗೆ ಉದ್ಘಾಟನೆ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಇಂದು ರಸ್ತೆ ಅಗಲೀಕರಣದ ವಿಚಾರದಲ್ಲಿ ರಂಪಾಟ ನಡೆಸಿದ್ದಾರೆ.

mnd ex mla 2

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಮುಖ್ಯರಸ್ತೆ ಅಗಲೀಕರಣದ ವಿಚಾರದಲ್ಲಿ ಮಾಲಿ ಹಾಗೂ ಮಾಜಿ ಶಾಸಕರು ಪ್ರತಿಷ್ಠೆಗೆ ಬಿದ್ದಿದ್ದಾರೆ. 10 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಗ್ರಾಮದ ರಸ್ತೆ ಅಗಲೀಕರಣಕ್ಕೆ ಮುಂದಾಗಿದೆ. ಹೀಗಾಗಿ ರಸ್ತೆ ಬದಿಯ ಮನೆ ಹಾಗೂ ಅಂಗಡಿಗಳನ್ನು ತೆರವುಗೊಳಿಸಲು ಇಂದು ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಂದಿದ್ದಾರೆ. ಜೆಸಿಬಿ ಮೂಲಕ ಬಸ್ ನಿಲ್ದಾಣ ತೆರವು ಮಾಡುತ್ತಿದ್ದಂತೆ ಆಕ್ರೋಶಗೊಂಡ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಬೆಂಬಲಿಗರು ಕಲ್ಲು ತೂರಾಡಿದ್ದಾರೆ. ಈ ವೇಳೆ ರಮೇಶ್ ಬಂಡಿಸಿದ್ದೇಗೌಡ ಜೆಸಿಬಿ ಚಾಲಕನ್ನು ಎಳೆದಾಡಿ ಹಲ್ಲೆಗೆ ಮುಂದಾಗಿದ್ದಾರೆ. ಇದ್ರಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣೆ ನಿರ್ಮಾಣಗೊಂಡಿತ್ತು.

mnd ex mla 4

ಗಲಾಟೆಗೆ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ದ್ವೇಷದ ರಾಜಕಾರಣವೇ ಕಾರಣ ಎಂದು ರಮೇಶ್ ಬಂಡಿಸಿದ್ದೇಗೌಡ ಆರೋಪಿಸಿದ್ದಾರೆ. ಗ್ರಾಮದಲ್ಲಿ ರಸ್ತೆ ಅಗಲೀಕರಣ ಅವಶ್ಯಕತೆ ಇರಲಿಲ್ಲ. ರಸ್ತೆ ಬದಿಯಲ್ಲಿ ನಮ್ಮ ಬೆಂಬಲಿಗರ ಮನೆಗಳು ಇರುವುದರಿಂದ ಅವರಿಗೆ ತೊಂದರೆ ಕೊಡಬೇಕೆಂದೇ ಅಗಲೀಕರಣ ಕಾಮಗಾರಿಕ್ಕೆ ಕೈಹಾಕಿದ್ದಾರೆ. ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್ ಯಾವುದೇ ಕಟ್ಟಡ ತೆರವು ಮಾಡದಂತೆ ಸೂಚನೆ ನೀಡಿದ್ದರು. ಅದರೂ ಶಾಸಕರ ಪ್ರಭಾವದಿಂದ ಬಸ್ ನಿಲ್ದಾಣ ಒಡೆದಿದ್ದಾರೆ. ನಾನು ಜೆಸಿಬಿ ಚಾಲಕನ್ನು ಹಿಡಿದುಕೊಂಡಿದ್ದು ತಪ್ಪು. ಅವರು ಬಸ್ ನಿಲ್ದಾಣ ಒಡಿಸಿದ್ದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

mnd ex mla 5

ಒಂದೆಡೆ ಮಾಜಿ ಶಾಸಕ ಹಾಗೂ ಅವರ ಬೆಂಬಲಿಗರು ತೆರವು ಕಾರ್ಯಾಚರಣೆ ತಡೆದಿದ್ದರೆ, ಇನ್ನೊಂದೆಡೆ ಕಾರ್ಯಾಚರಣೆ ಮುಂದುವರೆಸುವಂತೆ ಹಾಲಿ ಶಾಸಕರ ಬೆಂಬಲಿಗರು ಘೋಷಣೆ ಕೂಗಲು ಆರಂಭಿಸಿದರು. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆ ಅರಿತ ಅಧಿಕಾರಿಗಳು ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ, ತೆರವುಗೊಳಿಸುವ ಬಗ್ಗೆ ನಿರ್ಧರಿಸಲು ಚಿಂತನೆ ನಡೆಸಿದ್ದಾರೆ.

mnd ex mla 3

ಅರಕೆರೆ ಗ್ರಾಮದಲ್ಲಿ ಈವರೆಗೆ 10 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಹಲವರು ಕ್ವಾರಂಟೈನ್‍ನಲ್ಲಿದ್ದಾರೆ. ಪರಿಸ್ಥಿತಿ ಹೀಗಿದ್ರೂ ಮಾಜಿ ಹಾಲಿ ಶಾಸಕರು ಗುಂಪುಗಟ್ಟಿಕೊಂಡು ರಂಪಾಟ ಮಾಡುತ್ತಿರುವುದು ವಿಪರ್ಯಾಸವೇ ಸರಿ. ಸಂಜೆ ವೇಳೆಗೆ ಲೋಕೋಪಯೋಗಿ ಎಇಇ ಮಹೇಶ್ ಸರ್ಕಾರಿ ಕಾಮಗಾರಿಗೆ ಅಡ್ಡಿ ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆ ನಡೆಸಿರುವುದರ ಬಗ್ಗೆ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ವಿರುದ್ಧ ಅರಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದರು. ದೂರಿನ ಅನ್ವಯ ಪೊಲೀಸರು ರಮೇಶ್ ಬಾಬು ಬಂಡಿಸಿದ್ದೇಗೌಡ ಅವರನ್ನು ಬಂಧಿಸಿ, ಶ್ರೀರಂಗಪಟ್ಟಣದ ಜೆಎಂಎಫ್‍ಸಿ ಕೊರ್ಟ್‍ನ ನ್ಯಾಯಾಧೀಶರ ಮುಂದೆ ನಿಲ್ಲಿಸಿದರು. ನಂತರ ನ್ಯಾಯಾಧೀಶರು ರಮೇಶ್ ಬಾಬು ಬಂಡಿಸಿದ್ದೇಗೌಡರಿಗೆ ಷರತ್ತು ಬದ್ಧ ಜಾಮೀನು ನೀಡಿ, ಇದೇ ತಿಂಗಳ 15ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ.

TAGGED:bailFormer MLAmandyapolicepoliticsPublic TVRoad Wideningಜಾಮೀನುಪಬ್ಲಿಕ್ ಟಿವಿಪೊಲೀಸ್ಮಂಡ್ಯಮಾಜಿ ಎಂಎಲ್‍ಎರಸ್ತೆ ಅಗಲೀಕರಣರಾಜಕೀಯ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
5 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
6 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
6 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
8 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
2 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
2 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
2 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
2 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
2 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?