Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3 ಗಂಟೆಯ ಅವಧಿಯಲ್ಲಿ 12 ಕಾಲ್‌ – ಲಾಕ್‌ಡೌನ್‌ ನಿರ್ಧಾರದ ಇನ್‌ಸೈಡ್‌ ಸ್ಟೋರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 3 ಗಂಟೆಯ ಅವಧಿಯಲ್ಲಿ 12 ಕಾಲ್‌ – ಲಾಕ್‌ಡೌನ್‌ ನಿರ್ಧಾರದ ಇನ್‌ಸೈಡ್‌ ಸ್ಟೋರಿ

Bengaluru City

3 ಗಂಟೆಯ ಅವಧಿಯಲ್ಲಿ 12 ಕಾಲ್‌ – ಲಾಕ್‌ಡೌನ್‌ ನಿರ್ಧಾರದ ಇನ್‌ಸೈಡ್‌ ಸ್ಟೋರಿ

Public TV
Last updated: July 12, 2020 8:44 am
Public TV
Share
3 Min Read
CM MEETING
SHARE

ಬೆಂಗಳೂರು: ಮೂರು ಗಂಟೆಯ ಅವಧಿಯ ಒಳಗಡೆ ಮುಖ್ಯಮಂತ್ರಿ ಯಡಿಯೂರಪ್ಪ 12 ಬಾರಿ ಕರೆ ಮಾಡಿ ಅಂತಿಮವಾಗಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಹೌದು. ಶನಿವಾರ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಿಎಂ 12 ಬಾರಿ ದೂರವಾಣಿ ಕರೆ ಮಾಡಿ ಅಂತಿಮವಾಗಿ ಒಂದು ವಾರಗಳ ಕಾಲ ಲಾಕ್‌ಡೌನ್‌ ಘೋಷಣೆ ಮಾಡಿದ್ದಾರೆ. ಲಾಕ್‌ಡೌನ್‌ ಮಾಡಲು ಕಾರಣ ಏನು? ಯಾರಿಗೆಲ್ಲ ಕರೆ ಮಾಡಿದ್ದಾರೆ ಈ ಎಲ್ಲ ವಿಚಾರಗಳು ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

CM MEETING 5

ಮತ್ತೆ ಲಾಕ್‌ ಯಾಕೆ?
ಎರಡು ತಿಂಗಳ ಹಿಂದೆ ದೇಶಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಈಗ ಒಂದೇ ಬಾರಿಗೆ ಕೊರೊನಾ ಸ್ಫೋಟಗೊಳ್ಳುತ್ತಿರುವುದು ಸಿಎಂ ಯಡಿಯೂರಪ್ಪನವರ ಆತಂಕಕ್ಕೆ ಕಾರಣವಾಗಿತ್ತು. ಅಷ್ಟೇ ಅಲ್ಲದೇ ಈ ಹಿಂದೆ ತಜ್ಞರು ಬೆಂಗಳೂರಿನಲ್ಲಿ ಒಂದು ಸಾವಿರ ಪ್ರಕರಣಗಳು ದಿನ ನಿತ್ಯ ದಾಖಲಾದರೆ ಲಾಕ್‌ಡೌನ್ ಮಾಡುವುದು ಸೂಕ್ತ ಎಂದು ಸಲಹೆ ನೀಡಿದ್ದರು.

ತಜ್ಞರು ಈ ಸಲಹೆ ನೀಡಿದ್ದರೂ ಲಾಕ್‌ಡೌನ್ ಮಾಡಿದರೆ ಆರ್ಥಿಕತೆಗೆ ಭಾರೀ ಸಮಸ್ಯೆಯಾಗಲಿದೆ. ಹೀಗಾಗಿ ಲಾಕ್‌ಡೌನ್‌ ಮಾಡದೇ ಇರಲು ಸಿಎಂ ನಿರ್ಧರಿಸಿದ್ದರು. ಕಳೆದ ವಾರ ಬೆಂಗಳೂರಿನ ಶಾಸಕರ ಜೊತೆಗಿನ ಸಭೆಯಲ್ಲೂ ಈ ವಿಚಾರವನ್ನು ಪ್ರಸ್ತಾಪ ಮಾಡಿ ಲಾಕ್‌ಡೌನ್ ‌ಬಿಟ್ಟು ಬೇರೆ ಯಾವುದಾದರೂ ಸಲಹೆ ಇದ್ದರೆ ತಿಳಿಸಿ ಎಂದು ಕೇಳಿದ್ದರು.

YEDIYURPPA CORONA COVID 19 DOCTOR MEETING

ಈ ನಡುವೆ ಒಂದು ವಾರದಲ್ಲಿ ಕೊರೊನಾ ರಾಕೆಟ್‌ ವೇಗದಲ್ಲಿ ಬೆಂಗಳೂರಿನಲ್ಲಿ ಹರಡುತ್ತಿರುವುದು ಸಿಎಂ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಮುಖ್ಯ ಕಾರ್ಯದರ್ಶಿ ವಿಜಯ್‌ ಭಾಸ್ಕರ್‌ ಅವರು ಕರೆ ಮಾಡಿ ಕೊರೊನಾ ವರದಿ ತರಿಸಿಕೊಂಡಿದ್ದಾರೆ. ಇದರ ಜೊತೆ ಬೆಂಗಳೂರಿನ ಉಸ್ತುವಾರಿ ಹೊತ್ತುಕೊಂಡಿರುವ 8 ಮಂದಿ ನಾಯಕರಿಂದ ಮೌಖಿಕ ವರದಿ ಪಡೆದಿದ್ದಾರೆ.

ಎಲ್ಲ ವರದಿ ನೋಡಿ “ಆರ್ಥಿಕತೆ ಲೆಕ್ಕ ಹಾಕಿದ್ರೆ ನಮ್ಮ ಮೇಲೆ ಗೂಬೆ ಕೂರಿಸುತ್ತಾರೆ. ಹೀಗಾಗಿ ಲಾಕ್‍ಡೌನ್ ಮಾಡೋಣ. ಕೊರೊನಾ ಹರಡುವ ವೇಗ ಕಡಿಮೆಯಾಗುತ್ತದೆ” ಎಂದು ಸಿಎಂ ಮುಖ್ಯ ಕಾರ್ಯದರ್ಶಿ‌ ಅವರಲ್ಲಿ ಹೇಳಿದ್ದಾರೆ. ಬಳಿಕ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರ ಬಳಿ ಲಾಕ್‌‌‌‌ಡೌನ್‌ ನಿರ್ಧಾರದ ಬಗ್ಗೆ ಚರ್ಚೆ‌ ನಡೆಸಿದ್ದಾರೆ. ಕೊನೆಗೆ ಕೇಂದ್ರದ ಪ್ರತಿನಿಧಿಯ ಜೊತೆ ಈ ಬಗ್ಗೆ ಮಾತನಾಡಿ ಅಂತಿಮವಾಗಿ ಲಾಕ್‌ಡೌನ್‌ ನಿರ್ಧಾರ ಪ್ರಕಟಿಸಿದರು.

Bengaluru Lockdown 3

ರಾತ್ರಿ 8.11ಕ್ಕೆ ಟ್ವೀಟ್‌ ಮಾಡಿದ ಸಿಎಂ, ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಅಧಿಕೃತವಾಗಿ ರಾಜ್ಯದ ಜನತೆಗೆ ತಿಳಿಸಿದರು.

ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು.
ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದೆ. (2/2)

— B.S.Yediyurappa (@BSYBJP) July 11, 2020

ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದೆ ಎಂದು ಎರಡನೇ ಟ್ವೀಟ್‌ ನಲ್ಲಿ ಹೇಳಿದರು.

Lockdown 14

ತಜ್ಞರು ನೀಡಿದ್ದ ಸಲಹೆ ಏನು?
ಎರಡು ವಾರಗಳ ಹಿಂದೆ ಸಿಎಂ ತಜ್ಞ ವೈದ್ಯರುಗಳಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ಡಾ.ಗಿರೀಶ್, ಡಾ.ಸುದರ್ಶನ್ ಅವರ ಜೊತೆ ಸಭೆ ನಡೆಸಿದ್ದರು. ಈ ವೇಳೆ ವೈದ್ಯರು ಹಲವು ಸಲಹೆಗಳನ್ನು ನೀಡಿದ್ದರು.
1. ಬೆಂಗಳೂರಿಗೆ ಅಂತರ್ ಜಿಲ್ಲಾ ವಾಹನ ಓಡಾಟವನ್ನು 3 ವಾರ ಸಂಪೂರ್ಣ ಬಂದ್ ಮಾಡಿ. ಹೀಗೆ ಮಾಡಿದ್ದಲ್ಲಿ ಬೆಂಗಳೂರಿನಿಂದ ಹಳ್ಳಿಗೆ ಕೊರೊನಾ ವ್ಯಾಪಿಸುವುದನ್ನು ತಡೆಯಬಹುದು.
2. ಬೆಂಗಳೂರಿನಲ್ಲಿ 2 ವಾರ ಪರಿಸ್ಥಿತಿ ಮಾನಿಟರ್ ಮಾಡಿ

Lockdown 15
3. ದಿನಕ್ಕೆ ಸಾವಿರ ಪ್ರಕರಣ ಬಂದಾಗ ಬಹುತೇಕ ಲಾಕ್‍ಡೌನ್ ನಿರ್ಧಾರ ಮಾಡೋಣ
4. ಬೆಂಗಳೂರಿನಲ್ಲಿ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಎದುರಾಗಿದೆ. ಇದನ್ನು ಈಗಲೇ ತಡೆಯಬೇಕು.
5. ಮನೆಗಳು ದೊಡ್ಡದಾಗಿದ್ದರೆ, ಅಲ್ಲಿಯೇ ಚಿಕಿತ್ಸೆ ನೀಡಲು ಮುಂದಾಗಿ
6. ಕೊರೋನಾ ಪರೀಕ್ಷೆಯನ್ನು ಹೆಚ್ಚಳ ಮಾಡಿ ನಿರ್ಲಕ್ಷ್ಯ ಮಾಡಬೇಡಿ
7. ಕಂಟೈನ್ಮೆಂಟ್ ಝೋನ್ ಕಟ್ಟುನಿಟ್ಟಾಗಿ ಪಾಲನೆ ಆಗ್ತಿಲ್ಲ, ಇದನ್ನು ಬಿಗಿಗೊಳಿಸಿ

 

TAGGED:bengaluruCorona VirusCovid 19Karnataka newsLockdownYediyurppaಕೊರೊನಾಕೊರೊನಾ ವೈರಸ್ಕೋವಿಡ್ 19ಬೆಂಗಳೂರುಯಡಿಯೂರಪ್ಪಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
1 hour ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
2 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
2 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
2 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
3 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?