ರಾಮ ಜನ್ಮಭೂಮಿ ನೇಪಾಳದಲ್ಲಿದೆ, ಮೊಬೈಲ್‌ ಇಲ್ಲದ ಆ ಸಮಯದಲ್ಲಿ ವಿವಾಹ ಮಾತುಕತೆ ನಡೆದಿದ್ದು ಹೇಗೆ :ಪ್ರಧಾನಿ ಓಲಿ

Public TV
2 Min Read
kp sharma oli rama main

ಕಠ್ಮಂಡು: ವಿವಾದಿತ ನಕ್ಷೆ ವಿಚಾರ ಭಾರತದ ಜೊತೆ ಕಿರಿಕ್‌ ಮಾಡಿಕೊಂಡಿದ್ದ ಚೀನಾ ಸ್ನೇಹಿ ನೇಪಾಳದ ಪ್ರಧಾನಿ ಕೆಪಿ ಶರ್ಮಾ ಓಲಿ ಈಗ ರಾಮನ ಜನ್ಮ ಭೂಮಿ ಅಯೋಧ್ಯೆ ಇರುವುದು ನೇಪಾಳದಲ್ಲಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹುಟ್ಟಿದ್ದಾನೆ ಎಂದು ಭಾರತ ಹೇಳುತ್ತಿರುವ ಕಾರಣ ಸೀತೆ ಭಾರತದ ರಾಜಕುಮಾರ ರಾಮನನ್ನು ವಿವಾಹವಾಗಿದ್ದಳು ಎಂದು ನಾವು ನಂಬಿದ್ದೇವೆ. ಆದರೆ  ನಿಜವಾದ ಅಯೋಧ್ಯೆ ಬಿರ್‌ಗುಂಜ್‌ನ ಪಶ್ಚಿಮ ಭಾಗದಲ್ಲಿರುನ ಥೋರಿ ನಗರದಲ್ಲಿದೆ ಎಂದು ಓಲಿ ಹೇಳಿದ್ದಾರೆ.

ತನ್ನ ನಿವಾಸದಲ್ಲಿ ನಡೆದ ಭಾನುಭಕ್ತ ಆಚಾರ್ಯ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಯೋಧ್ಯೆ ಹೆಸರಿನ ಗ್ರಾಮ ಬಿರ್‌ಗುಂಜ್‌ನಲ್ಲಿದೆ. ನಾವು ಸಾಂಸ್ಕೃತಿಕವಾಗಿ ಭಾರತದ ದಬ್ಬಾಳಿಕೆಗೆ ಒಳಗಾಗಿದ್ದೇವೆ. ವಾಲ್ಮೀಕಿ ಆಶ್ರಮ ನೇಪಾಳದಲ್ಲಿದಲ್ಲಿದೆ. ರಾಜ ದಶರಥ ಪುತ್ರನನ್ನು ಪಡೆಯಲು ಧಾರ್ಮಿಕ ವಿಧಿಗಳನ್ನು ನೆರವೇರಿಸಿದ್ದು ರಿಧಿಯಲ್ಲಿ ಎಂದಿದ್ದಾರೆ.

kp sharma oli china

ಯಾವುದೇ ಸಂಪರ್ಕ ವ್ಯವಸ್ಥೆ ಇಲ್ಲದೇ ಇರುವ ಸಂದರ್ಭದಲ್ಲಿ ರಾಮ ಸೀತೆಯನ್ನು ಮದುವೆಯಾಗಲು ಜನಕಪುರಿಗೆ ಬಂದಿದ್ದು ಹೇಗೆ? ಜನಕಪುರಿ ನೇಪಾಳದಲ್ಲಿರುವಾಗ ಭಾರತದಲ್ಲಿರುವ ಅಯೋಧ್ಯೆಯಿಂದ ರಾಮ ಜನಕಪುರಿಗೆ ಬರುವುದು ಅಸಾಧ್ಯ. ಫೋನ್‌ ಅಥವಾ ಮೊಬೈಲ್‌ ಇಲ್ಲದ ಆ ಸಮಯದಲ್ಲಿ ವಿವಾಹ ಮಾತುಕತೆ ನಡೆಯುತ್ತದೆ. ರಾಮನಿಗೆ ಜನಕಪುರಿ ಬಗ್ಗೆ ಹೇಗೆ ಗೊತ್ತು ಎಂದು ನೇಪಾಳದ ಪ್ರಧಾನಿ ಪ್ರಶ್ನಿಸಿ ಮತ್ತೆ ವಿವಾದವನ್ನು ಎಳೆದುಕೊಂಡಿದ್ದಾರೆ.

jinping nepal china kp sharma

ವಿವಾದ ಮೊದಲೆನಲ್ಲ:
ಚೀನಿ ತಾಳಕ್ಕೆ ಕುಣಿಯುತ್ತಿರುವ ಓಲಿ ಭಾರತದ ವಿರುದ್ಧ ಹೇಳಿಕೆ ನೀಡುತ್ತಿರುವುದು ಇದು ಮೊದಲೆನಲ್ಲ. ಕೊರೊನಾ ವೈರಸ್‌ ಚೀನಾದಿಂದಲೇ ವಿಶ್ವಕ್ಕೆ ಹರಡಿದೆ ಎಂಬ ವಿಚಾರ ವಿಶ್ವಕ್ಕೆ ತಿಳಿದಿದ್ದರೂ ಒಲಿ ಭಾರತದಿಂದ ಕೋವಿಡ್‌ 19 ನೇಪಾಳಕ್ಕೆ ಬಂದಿದೆ ಎಂದು ದೂರಿದ್ದರು.

ಇದಾದ ಬಳಿಕ ಭಾರತದ ಕಾಲಪಾನಿ, ಲಿಂಪಿಯಾಧುರಾ ಮತ್ತು ಲಿಪುಲೇಖ್ ಪ್ರದೇಶ ತನ್ನದು ಎಂದು ನೇಪಾಳ ಹೇಳಿತ್ತು. ಕೆಪಿ ಶರ್ಮಾ ಓಲಿ ಅವರ ಈ ನಿರ್ಧಾರ ಹಿಂದೆ ಚೀನಾ ಇದೆ ಎನ್ನುವುದು ಗೊತ್ತಿದ್ದರೂ ನೇಪಾಳದ ಹೊಸ ನಕ್ಷೆಯನ್ನು ಅಲ್ಲಿನ ಕ್ಯಾಬಿನೆಟ್ ಅನುಮೋದಿಸಿತ್ತು. ಈ ನಿರ್ಧಾರ ಕೈಗೊಳ್ಳಬೇಡಿ ಎಂದು ಭಾರತ ಸರ್ಕಾರ ಹೇಳಿದ್ದರೂ ನೇಪಾಳ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ವಿವಾದಿತ ನಕ್ಷೆಯನ್ನು ಬಿಡುಗಡೆ ಮಾಡಿತ್ತು.

kp sharma oli 1539120707

ಮೊದಲಿನಿಂದಲೂ ನೇಪಾಳ ಜೊತೆ ಮಿತೃತ್ವ ಹೊಂದಿರುವ ಭಾರತದ ವಿರುದ್ಧ ಕಠು ನಿರ್ಧಾರ ತೆಗೆದುಕೊಂಡಿದ್ದಕ್ಕೆ ಪಕ್ಷರ ಸದಸ್ಯರೇ ನೇಪಾಳ ಹಾಗೂ ಭಾರತದ ಸಂಬಂಧಕ್ಕೆ ಧಕ್ಕೆ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ಸದಸ್ಯರು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರೆ ಒಲಿ ನನ್ನ ವಿರುದ್ಧ ಭಾರತ ಷಡ್ಯಂತ್ರ ಮಾಡಿದೆ ಎಂದು ಆರೋಪಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *